ಹಸುಗಳನ್ನು ಇಸ್ಕಾನ್ ಮಾರಿದಷ್ಟು ಬೇರಾರು ಮಾರಿಲ್ಲ; ಬಿಜೆಪಿ ಸಂಸದೆ ಆರೋಪಕ್ಕೆ ಇಸ್ಕಾನ್ ಪ್ರತಿಕ್ರಿಯೆ

Date:

Advertisements

ಮಾಂಸ ಮಾರುವವರಿಗೆ ಇಸ್ಕಾನ್ ಮಾರಿರುವಷ್ಟು ಹಸುಗಳನ್ನು ಯಾರೂ ಮಾರಿಲ್ಲ ಎಂದಿರುವ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರ ಹೇಳಿಕೆಗೆ ಇಸ್ಕಾನ್ ಪ್ರತಿಕ್ರಿಯೆ ನೀಡಿದೆ. ಸಂಸದೆಯ ಆರೋಪಗಳು ಆಧಾರ ರಹಿತವೆಂದು ಹೇಳಿದೆ.

ಮನೇಕಾ ಗಾಂಧಿ ಅವರ ಆರೋಪಗಳನ್ನು ಅಲ್ಲಗಳೆದಿರುವ ಇಸ್ಕಾನ್​ನ ರಾಷ್ಟ್ರೀಯ ವಕ್ತಾರ ಯುಧಿಷ್ಠಿರ್ ಗೋವಿಂದ್ ದಾಸ್, “ಗೋವುಗಳು ಹಾಗೂ ಗೂಳಿಗಳ ಸಂರಕ್ಷಣೆಗಾಗಿ ಭಾರತ ಮಾತ್ರವಲ್ಲದೆ ವಿಶ್ವಾದ್ಯಂತ ಕೆಲಸ ಮಾಡುತ್ತಿದೆ. ಹಸುಗಳು ಮತ್ತು ಎತ್ತುಗಳು ಇಸ್ಕಾನ್​ನ ಗೋಶಾಲೆಯಲ್ಲಿ ಬದುಕಿರುವವರೆಗೂ ಇರುತ್ತವೆ. ನಾವು ಒಂದೇ ಒಂದು ಹಸು, ಎತ್ತು ಅಥವಾ ಕರುವನ್ನು ಮಾಂಸ ಮಾರುವವರಿಗೆ ಮಾರುವುದಿಲ್ಲ” ಎಂದು ಹೇಳಿದ್ದಾರೆ.

ಕಳೆದ ತಿಂಗಳು ಸುದ್ದಿವಾಹಿನಿಯೊಂದು ಮನೇಕಾ ಗಾಂಧಿ ಅವರ ಸಂದರ್ಶನ ನಡೆಸಿತ್ತು. ಅದರ ಸಣ್ಣ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಡಿಯೋದಲ್ಲಿ, “ಈ ದೇಶದಲ್ಲಿ ಅತೀ ದೊಡ್ಡ ಮೋಸಗಾರರು ಎಂದರೆ ಅದು ಇಸ್ಕಾನ್. ಅವರು ಗೋಶಾಲೆಗಳನ್ನು ನಿರ್ಮಿಸುತ್ತಾರೆ. ಅವುಗಳನ್ನು ನಡೆಸಲು ಸರ್ಕಾರದಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯುತ್ತಾರೆ. ನಾನು ಇತ್ತೀಚೆಗೆ, ಅವರ ಅನಂತಪುರ ಗೋಶಾಲೆಗೆ ಹೋಗಿದ್ದೆ. ಅಲ್ಲಿ, ಒಂದೇ ಒಂದು ವಯಸ್ಸಾದ ಹಸು ಇರಲಿಲ್ಲ, ಕರುಗಳು ಕೂಡ ಇರಲಿಲ್ಲ. ಹಾಲು ಕೊಡುವ ಹಸುಗಳನ್ನು ಮಾತ್ರ ಇರಿಸಲಾಗಿದೆ” ಎಂದು ಆರೋಪಿಸಿದ್ದರು.

Advertisements

ಅವರ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡಿದ್ದ ಆರ್‌ಜೆಡಿ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಪ್ರಶಾಂತ್ ಕನೋಜಿಯಾ, “ಭಾರತದಲ್ಲಿ ಅತಿ ಹೆಚ್ಚು ಬೋಗಸ್ ಮತ್ತು ಮೋಸ ಮಾಡುವ ಸಂಸ್ಥೆ ಯಾವುದಾದರೂ ಇದ್ದರೆ ಅದು ಇಸ್ಕಾನ್‌ ಎಂದು ನಾನು ಹಲವು ವರ್ಷಗಳಿಂದ ಹೇಳುತ್ತಿದ್ದೇನೆ. ಈಗ ಮನೇಕಾ ಗಾಂಧಿ ಕೂಡ ಅದೇ ಮಾತನಾಡಿದ್ದಾರೆ. ಇಸ್ಕಾನ್‌ನವರು ಬೀದಿಯಲ್ಲಿ ಹರೇ ಕೃಷ್ಣ ಎನ್ನುತ್ತಾರೆ. ಆದರೆ, ಅವರಿಗೆ ಒಳಗೆ ದೊಡ್ಡ ಅಜೆಂಡಾವಿದೆ. ಇಸ್ಕಾನ್ ಕೂಡ ಆಳವಾದ ಜಾತಿವಾದಿ. ದಲಿತರು ಮತ್ತು ಕಪ್ಪು ಬಣ್ಣದ ಜನರನ್ನು ಜೀತದಾಳುಗಳನ್ನಾಗಿ ಮಾಡುವ ಮಾತನಾಡಿದ್ದಾರೆ” ಎಂದು ಟ್ವೀಟ್ ಮಾಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X