ಮಹಾತ್ಮಾ ಗಾಂಧಿ ಬಗ್ಗೆ ಸಿನಿಮಾ ಬರುವವರೆಗೆ ಜಗತ್ತಿಗೆ ಅವರು ಯಾರೆಂಬುದೇ ಗೊತ್ತಿರಲಿಲ್ಲ: ಪ್ರಧಾನಿ ಮೋದಿ ವಿಚಿತ್ರ ಹೇಳಿಕೆ

Date:

Advertisements

ಲೋಕಸಭಾ ಚುನಾವಣೆಯ ಮೊದಲ ಹಂತದ ಬಳಿಕ ವಿಚಿತ್ರ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸುದ್ದಿಯಾಗುತ್ತಿದ್ದಾರೆ.

ಈ ಹಿಂದೆ, ಕಾಂಗ್ರೆಸ್ ನಿಮ್ಮ ಮಂಗಳಸೂತ್ರವನ್ನು ಕಸಿದುಕೊಳ್ಳುತ್ತದೆ, ನಿಮ್ಮಲ್ಲಿ ಎರಡು ಎಮ್ಮೆಗಳಿದ್ದರೆ ಒಂದನ್ನು ಕದಿಯಲಿದೆ, ನಾನು ಜೈವಿಕವಾಗಿ ಹುಟ್ಟಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು ಎಂಬಿತ್ಯಾದಿ ಹೇಳಿಕೆಗಳನ್ನು ನೀಡಿದ್ದ ಪ್ರಧಾನಿ ಮೋದಿ, ನಿನ್ನೆ ಖಾಸಗಿ ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದ ವೇಳೆ ಮಹಾತ್ಮಾ ಗಾಂಧಿಯವರ ಬಗ್ಗೆಯೂ ವಿಚಿತ್ರ ಹೇಳಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರು ನಿರಂತರ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಅದರ ಭಾಗವಾಗಿ ನಿನ್ನೆ ಹಿಂದಿ ಸುದ್ದಿ ವಾಹಿನಿ ಎಬಿಪಿ ನ್ಯೂಸ್‌ಗೂ ಕೂಡ ಸಂದರ್ಶನ ನೀಡಿದ್ದು, ಈ ವೇಳೆ, “ಮಹಾತ್ಮಾ ಗಾಂಧಿ ಅವರ ಬಗ್ಗೆ ಸಿನಿಮಾ ಬರುವವರೆಗೆ ಜಗತ್ತಿಗೆ ಅವರು ಯಾರೆಂಬುದೇ ಗೊತ್ತಿರಲಿಲ್ಲ” ಎಂದು ವಿಚಿತ್ರ ಹೇಳಿಕೆ ನೀಡಿದ್ದಾರೆ.

Advertisements

“ಮಾರ್ಟಿನ್ ಲೂಥರ್ ಕಿಂಗ್, ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೇಲಾ ಅವರು ಯಾರೆಂಬುದು ಜಗತ್ತಿಗೇ ಗೊತ್ತಿದೆ. ಆದರೆ, ಮಹಾತ್ಮಾ ಗಾಂಧಿ ಅವರ ಬಗ್ಗೆ ಮೊದಲ ಬಾರಿಗೆ ಸಿನಿಮಾ ಬರುವವರೆಗೆ ಯಾರೆಂಬುದೇ ಜಗತ್ತಿಗೆ ಗೊತ್ತಿರಲಿಲ್ಲ. ಮಹಾತ್ಮ ಗಾಂಧಿ ದೊಡ್ಡ ವ್ಯಕ್ತಿಯಾಗಿದ್ದರೂ ಜಗತ್ತಿಗೆ ಅವರ ಬಗ್ಗೆ ತಿಳಿದಿರಲಿಲ್ಲ, ಜಗತ್ತು ಅವರ ಬಗ್ಗೆ ತಿಳಿಯುವಂತಾಗಲು ಎಲ್ಲಾ ಭಾರತೀಯ ರಾಜಕೀಯ ನಾಯಕರು ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರದ ಈ ಅವಧಿಯಲ್ಲಿ ಶ್ರಮಿಸಬೇಕು” ಎಂದು ಪ್ರಧಾನಿ ಹೇಳಿಕೊಂಡರು.

“ಮಹಾತ್ಮ ಗಾಂಧಿ ಮಹಾನ್‌ ವ್ಯಕ್ತಿಯಾಗಿದ್ದರು. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆ ಒದಗಿಸಿಕೊಡುವುದು ನಮ್ಮ ಹಿಂದಿನ ಸರ್ಕಾರಗಳ ಕರ್ತವ್ಯವಾಗಿರಲಿಲ್ಲವೇ?” ಎಂದು ಅಚ್ಚರಿಯ ಹಾಗೂ ವಿಚಿತ್ರ ಹೇಳಿಕೆ ನೀಡಿದ್ದಾರೆ.

ಗಾಂಧಿ ಬಗ್ಗೆ ಹೇಳಿಕೆ: ಸುಳ್ಳು ಬಯಲಿಗೆಳೆದ ಕೇರಳ ಕಾಂಗ್ರೆಸ್

ಮೋದಿ ಅವರ ಸಂದರ್ಶನದ ಈ ತುಣುಕು ವೈರಲ್‌ ಆಗಿದ್ದು, ಈ ಹಿನ್ನೆಲೆಯಲ್ಲಿ ಮೋದಿಯವರು ಹೇಳಿದ್ದು ನಿಜವೇ ಎಂದು ನೆಟ್ಟಿಗರು ಹುಡುಕಾಡಿದ್ದಾರೆ. ಪ್ರಧಾನಿ ಮೋದಿಯವರು ಗಾಂಧಿ ಬಗ್ಗೆ ಹೇಳಿರುವ ಹಸಿಹಸಿ ಸುಳ್ಳು ಈಗ ಬಯಲಾಗಿದೆ.

ಈ ಹಿಂದೆ ಮನ್‌ಕಿ ಬಾತ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾಗ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಮಹಾತ್ಮಾ ಗಾಂಧಿಯವರನ್ನು ಹೊಗಳಿ ನೀಡಿದ್ದ ಹೇಳಿಕೆ ಈಗ ವೈರಲಾಗಿದೆ.

“ಮಹಾತ್ಮ ಗಾಂಧಿಯವರ ಆದರ್ಶಗಳು ಇಡೀ ಜಗತ್ತನ್ನು ಪ್ರೇರೇಪಿಸಿತು. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮತ್ತು ನೆಲ್ಸನ್ ಮಂಡೇಲಾರಂಥವರು ಗಾಂಧೀಜಿಯವರ ಆದರ್ಶಗಳಿಂದ ತಮ್ಮ ಶಕ್ತಿಯನ್ನು ಪಡೆದರು” ಎಂದು ಈ ಹಿಂದೆ ನರೇಂದ್ರ ಮೋದಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆ ವೈರಲಾಗಿದೆ.

ಈ ನಡುವೆ ಗಾಂಧಿ ಬಗ್ಗೆ ಮೋದಿಯವರು ನೀಡಿರುವ ಹೇಳಿಕೆಯು ಸುಳ್ಳು ಎಂದು ಬಯಲಿಗೆಳೆದಿರುವ ಕೇರಳ ಕಾಂಗ್ರೆಸ್, ಮಹಾತ್ಮಾ ಗಾಂಧಿ ಹಾಗೂ ಅವರ ಜೀವನಾದರ್ಶಗಳ ಬಗ್ಗೆ ಜಗತ್ತಿನ ಖ್ಯಾತ ವಿಜ್ಞಾನಿ ಐನ್‌ಸ್ಟೈನ್, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ನೆಲ್ಸನ್ ಮಂಡೇಲಾ ಸೇರಿದಂತೆ ಮತ್ತಿತರರು ನೀಡುವ ಹೇಳಿಕೆಗಳನ್ನು ಪೋಸ್ಟ್ ಮಾಡಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X