ರಾಜಕೀಯದಲ್ಲಿ ಎಲ್ಲ ಶಾಸಕರು ಸಿಂಹ ಆಗಲು ಸಾಧ್ಯವಿಲ್ಲ: ಸ್ಪೀಕರ್ ಖಾದರ್ ಅಭಿಮತ

Date:

Advertisements
  • ‘ನೀವೆಲ್ಲ ಪರ್ಮನೆಂಟ್ ಶಾಸಕರಾಗಿ ಉಳಿಯಬೇಕು’
  • ‘ರಾಜಕೀಯದಲ್ಲಿ ಶಾಸಕರು ರಿಂಗ್ ಮಾಸ್ಟರ್ ಆಗಲಿ’

ನೀವೆಲ್ಲ ಮೊದಲ ಬಾರಿಗೆ ಅಷ್ಟೇ ಶಾಸಕರಾಗದೆ ಪರ್ಮನೆಂಟ್ ಶಾಸಕರಾಗಿರಬೇಕು. ಅದಕ್ಕೆ ಈ ಶಿಬಿರ ಅನುಕೂಲವಾಗಲಿದೆ. ವಿಧಾನಸಭೆ ಒಳಗೆ ಆತ್ಮವಿಶ್ವಾಸದಿಂದಿರುವುದನ್ನು ಈ ಶಿಬಿರ ನಿಮಗೆ ಕಲಿಸಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ತಿಳಿಸಿದರು.

ಬೆಂಗಳೂರಿನ ಹೊರವಲಯದಲ್ಲಿ ಸೋಮವಾರ ನಡೆದ ನೂತನ ಶಾಸಕರ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, “ರಾಜಕೀಯ ಒಂದು ಸರ್ಕಸ್ ಕಂಪನಿ ಇದ್ದಂತೆ. ಇಲ್ಲಿ ಹುಲಿ, ಸಿಂಹ, ಆನೆ, ಕೋತಿ ಎಲ್ಲವೂ ಇರುತ್ತವೆ. ಆದರೆ ಎಲ್ಲರೂ ಸಿಂಹ ಆಗಲು ಸಾಧ್ಯವಿಲ್ಲ” ಎಂದರು.

“ಸರ್ಕಸ್‌ನಲ್ಲಿ ರಿಂಗ್ ಮಾಸ್ಟರ್ ಹಿಂದೆ ಎಲ್ಲ ಪ್ರಾಣಿಗಳು ಹೋಗುತ್ತವೆ. ಹಾಗೆ ರಾಜಕೀಯದಲ್ಲಿ ಶಾಸಕರು ರಿಂಗ್ ಮಾಸ್ಟರ್ ಆಗಬೇಕು. ಇದಕ್ಕಾಗಿ ಎಲ್ಲರೂ ಮಿಸ್ ಮಾಡದೆ ಉತ್ತಮ ತರಬೇತಿ ಪಡೆಯಿರಿ” ಎಂದು ಮನವಿ ಮಾಡಿದರು.‌

Advertisements

ಈ ಸುದ್ದಿ ಓದಿದ್ದೀರಾ? ತುತ್ತು ಅನ್ನಕ್ಕಾಗಿ ಬಡವರು ಬೇಡುತ್ತಿದ್ದುದನ್ನು ಕಣ್ಣಾರೆ ಕಂಡಿದ್ದೆ: ಸಿಎಂ ಸಿದ್ದರಾಮಯ್ಯ

“ಶಿಬಿರದಲ್ಲಿ ಆರೋಗ್ಯದ ಬಗ್ಗೆಯೂ ತರಬೇತಿ ನೀಡಲಾಗುತ್ತದೆ. ರಾಜಕೀಯ ಗಣಿತ ಅಲ್ಲ ಬದಲಿಗೆ ಕೆಮಿಸ್ಟ್ರಿ, ಇಲ್ಲಿ ರಿಯಾಕ್ಷನ್ಸ್ ಗಳು ಜಾಸ್ತಿ ಇರುತ್ತವೆ. ಎಲ್ಲದಕ್ಕೂ ತಾಳ್ಮೆಯಿಂದ ಉತ್ತರಿಸುವ ಗುಣ ಇರಬೇಕು” ಎಂದರು.

“ಉತ್ತಮ ಅಭ್ಯಾಸಗಳನ್ನು ಶಾಸಕರು ರೂಢಿಸಿಕೊಳ್ಳಬೇಕು. ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಬೇಕು. ಶಾಸಕರಾಗಿ ಬ್ರಿಡ್ಜ್ ಕಟ್ಟುವುದು, ಮೋರಿ ಕಟ್ಟುವುದೇ ಆದ್ಯತೆ ಕೆಲಸಗಳು ಆಗದೇ ನಮ್ಮ ಕ್ಷೇತ್ರದ ಜನರಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸುವ ಕೆಲಸದ ಕಡೆಯೂ ಗಮನ ನೀಡಬೇಕು” ಎಂದು ಕಿವಿಮಾತು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X