ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ | ಮಹಾರಾಷ್ಟ್ರದಲ್ಲಿ ಸೆಲೆಬ್ರೆಟಿಗಳೇ ಸುರಕ್ಷಿತವಾಗಿಲ್ಲ: ವಿಪಕ್ಷ ಆಕ್ರೋಶ

Date:

Advertisements

ಬಾಲಿವುಡ್ ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತವಾದ ವಿಚಾರದಲ್ಲಿ ವಿಪಕ್ಷ ನಾಯಕರುಗಳು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮಹಾರಾಷ್ಟ್ರದಲ್ಲಿ ಸೆಲೆಬ್ರೆಟಿಗಳೇ ಸುರಕ್ಷಿತವಾಗಿಲ್ಲ, ಇನ್ನು ಜನ ಸಾಮಾನ್ಯರ ಗತಿಯೇನು” ಎಂದು ವಿಪಕ್ಷ ನಾಯಕರುಗಳು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ವಿಪಕ್ಷ ನಾಯಕರುಗಳು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ: ರಾತ್ರಿ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು

Advertisements

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್, “ಇಲ್ಲಿ ಯಾರೂ ಕೂಡಾ ಸುರಕ್ಷಿತರಾಗಿಲ್ಲ. ಒಂಟಿಯಾಗಿರುವ ಜನ ಸಾಮಾನ್ಯರ ವಿಚಾರ ಬಿಡಿ, ಇಲ್ಲಿ ಭದ್ರತೆ ಹೊಂದಿರುವ ಸೆಲೆಬ್ರೆಟಿಗಳು ಕೂಡಾ ಸುರಕ್ಷಿತವಾಗಿಲ್ಲ” ಎಂದು ಹೇಳಿದ್ದಾರೆ.

ಸೈಫ್ ಅಲಿ ಖಾನ್ ಪದ್ಮಶ್ರೀ ಪುರಸ್ಕೃತರು ಮತ್ತು ಇತ್ತೀಚೆಗೆ ಕುಟುಂಬ ಸಮೇತವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ ಎಂಬುದನ್ನು ಕೂಡಾ ರಾವತ್ ಉಲ್ಲೇಖಿಸಿದ್ದಾರೆ.

“ರಾಜ್ಯದಲ್ಲಿ ರಾಜಕಾರಣಿಗಳ ಭದ್ರತೆಗಾಗಿ, ಅದರಲ್ಲೂ ಮುಖ್ಯವಾಗಿ ಏನಾದರೂ ತಪ್ಪು ಮಾಡಿರುವ ರಾಜಕಾರಣಿಗಳ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ರಾಜ್ಯದಲ್ಲಿ ಕಾನೂನಿನ ಭಯವೇ ಇಲ್ಲ. ಸರ್ಕಾರದ ನಿಲುವು ಈಗ ಬಯಲಾಗಿದೆ” ಎಂದು ಸಂಜಯ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ‘ಧೈರ್ಯಶಾಲಿ ರಾಜಕಾರಣಿ’ : ರಾಹುಲ್ ಗಾಂಧಿಯನ್ನು ಹಾಡಿಹೊಗಳಿದ ನಟ ಸೈಫ್ ಅಲಿ ಖಾನ್

ಇನ್ನು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಧಿಕ ಭದ್ರತೆಯನ್ನು ಹೊಂದಿರುವ ನಟರಾದ ಸೈಫ್ ಅಲಿ ಖಾನ್ ಮತ್ತು ಸಲ್ಮಾನ್‌ ಖಾನ್ ಅವರ ಮೇಲೆಯೇ ದಾಳಿ ನಡೆಯುತ್ತದೆ. ಬುಲೆಟ್ ಪ್ರೂಫ್ ಕಿಟಕಿಗಳನ್ನು ಹಾಕಬೇಕಾದ ಸ್ಥಿತಿ ಬಂದೊದಗಿದೆ. ಯಾರೂ ಕೂಡಾ ಸರ್ಕಾರವನ್ನು ನಂಬುವುದಿಲ್ಲ ಎಂಬುದೇ ಇದರರ್ಥ” ಎಂದು ಅಭಿಪ್ರಾಯಿಸಿದ್ದಾರೆ.

ಇತ್ತೀಚೆಗೆ ಸಲ್ಮಾನ್ ಖಾನ್ ಅವರ ಬಾಂದ್ರಾ ಅಪಾರ್ಟ್‌ಮೆಂಟ್‌ನ ಕಿಟಕಿಗಳಿಗೆ ಬುಲೆಟ್ ಪ್ರೂಫ್ ಕಿಟಕಿಗಳನ್ನು ಅಳವಡಿಸಲಾಗಿದೆ. ಇದಕ್ಕೂ ಮುನ್ನ ಏಪ್ರಿಲ್‌ನಲ್ಲಿ ಸಲ್ಮಾನ್ ಖಾನ್ ನಿವಾಸದ ಬಳಿ ಲಾರೆನ್ಸ್ ಬಿಷ್ಣೋಯ್ ತಂಡದ ಇಬ್ಬರು ಗುಂಡಿನ ದಾಳಿ ನಡೆಸಿದ್ದರು.

“ಸೆಲೆಬ್ರೆಟಿಗಳೇ ಸುರಕ್ಷಿತವಾಗಿಲ್ಲವೆಂದರೆ ಇನ್ನು ಜನಸಾಮಾನ್ಯರ ಕಥೆಯೇನು? ಸಿಎಂ ದೇವೇಂದ್ರ ಫಡ್ನವೀಸ್ ಅವರ ತವರೂರಲ್ಲೇ ಹಲವು ಕೊಲೆ, ಅತ್ಯಾಚಾರ ಪ್ರಕರಣಗಳು ಕಳೆದ ಹತ್ತು ದಿನಗಳಲ್ಲಿ ದಾಖಲಾಗಿದೆ” ಎಂದು ನಾಗ್ಪುರ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ದುಷ್ಕರ್ಮಿಗಳು ಇಂದು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X