ಹೊಸ ಸಂಸತ್ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದ್ದು ಜಾತಿ ತಾರತಮ್ಯದ ಉತ್ತಮ ಉದಾಹರಣೆ: ಉದಯನಿಧಿ

Date:

Advertisements
  • ಜಾತಿ ತಾರತಮ್ಯದ ಆಚರಣೆ ಬಗ್ಗೆ ಯಾವುದಾದರೂ ಉದಾಹರಣೆ ನೀಡಬಹುದೇ ಎಂದು ಕೇಳಿದ ಪತ್ರಕರ್ತ
  • ಕೆಳಜಾತಿಯ ಕಾರಣಕ್ಕೆ ದ್ರೋಣಾಚಾರ್ಯರು ಏಕಲವ್ಯನಿಗೆ ಬಿಲ್ವಿದ್ಯೆ ಕಲಿಸಲಿಲ್ಲ ಎಂದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮ ನಿರ್ಮೂಲನೆ ಹೇಳಿಕೆಯು ದೇಶಾದ್ಯಂತ ಬಿಜೆಪಿ ಮತ್ತು ಸಂಘಪರಿವಾರವನ್ನು ಕೆರಳುವಂತೆ ಮಾಡಿರುವ ಮಧ್ಯೆಯೇ ಮತ್ತೊಮ್ಮೆ ಸ್ಪಷ್ಟವಾಗಿ ತನ್ನ ನಿಲುವನ್ನು ಪ್ರಕಟಿಸಿರುವ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್, “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೊಸ ಸಂಸತ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇರುವುದು ಜಾತಿ ತಾರತಮ್ಯ ಅತ್ಯುತ್ತಮ ಉದಾಹರಣೆ” ಎಂದು ಹೇಳಿದ್ದಾರೆ.

ಚೆನ್ನೈನಲ್ಲಿ ಸನಾತನ ಧರ್ಮದ ಜಾತಿ ತಾರತಮ್ಯ ಆಚರಣೆಯ ಬಗ್ಗೆ ನೀವು ಯಾವುದಾದರೂ ಉದಾಹರಣೆಯನ್ನು ನೀಡಬಹುದೇ ಎಂದು ಪತ್ರಕರ್ತನೋರ್ವ ಕೇಳಿದಾಗ ಉತ್ತರಿಸಿರುವ ತಮಿಳುನಾಡು ಕ್ರೀಡಾ ಸಚಿವ, “ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿಲ್ಲ. ಇದು ಪ್ರಸ್ತುತ ಅತ್ಯುತ್ತಮವಾದ ಉದಾಹರಣೆಯಾಗಿದೆ” ಎಂದು ಹೇಳಿದರು.

ನೀವೇನಾದರೂ ಕ್ಷಮೆ ಕೇಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಉದಯನಿಧಿ ಸ್ಟಾಲಿನ್, ಯಾರಾದರೂ ಕ್ಷಮೆ ಕೇಳಲು ಹೇಳಿದ್ದಾರಾ? ಇಲ್ಲ, ನಾನು ಕ್ಷಮೆ ಕೇಳುವ ಮಾತೇ ಇಲ್ಲ, ‘ಸಾರಿ’. ಈಗ ಹೇಳಿದ ‘ಸಾರಿ ಅವರಿಗಾಗಿ ಅಲ್ಲ. ಇದು ನಿಮ್ಮ (ವರದಿಗಾರರ) ಪ್ರಶ್ನೆಗೆ” ಎಂದು ‘ಸನಾತನ ಧರ್ಮ’ ಕುರಿತು ಕ್ಷಮೆಯಾಚಿಸುವ ಬೇಡಿಕೆಗಳ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Advertisements

ಮಂಗಳವಾರ ಶಿಕ್ಷಕರ ದಿನಾಚರಣೆಯ ಸಂದೇಶದಲ್ಲಿ ಮಾತನಾಡಿದ್ದ ಕ್ರೀಡಾ ಸಚಿವ, “ಏಕಲವ್ಯ ಕೆಳಜಾತಿಯವನೆಂಬ ಕಾರಣಕ್ಕೆ ದ್ರೋಣಾಚಾರ್ಯರು ಆತನಿಗೆ ಬಿಲ್ವಿದ್ಯೆ ಕಲಿಸಲು ನಿರಾಕರಿಸಿದರು. ಆದರೆ ಆತ ತನ್ನ ಸ್ವಂತ ಪರಿಶ್ರಮದಿಂದ ಬಿಲ್ಲುಗಾರಿಕೆಯನ್ನು ಕಲಿತದ್ದು ಮಾತ್ರವಲ್ಲದೇ, ನುರಿತ ಬಿಲ್ಲುಗಾರನಾದನು. ದ್ರೋಣಾಚಾರ್ಯರ ಶಿಷ್ಯ ಅರ್ಜುನನಿಗಿಂತಲೂ ಉತ್ತಮನಾದನು. ಇದನ್ನು ತಿಳಿದ ನಂತರ ಕೋಪಗೊಂಡ ದ್ರೋಣಾಚಾರ್ಯರು ಏಕಲವ್ಯನ ಹೆಬ್ಬೆರಳನ್ನು ನೀಡಬೇಕೆಂದು ಒತ್ತಾಯಿಸಿದರು. ಏಕಲವ್ಯ ಅದನ್ನು ಪಾಲಿಸಿದನು, ಇದರಿಂದಾಗಿ ಅವನು ಬಿಲ್ಲುಗಾರಿಕೆ ಮಾಡಲು ಅಸಮರ್ಥನಾದನು” ಎಂದು ಮಹಾಭಾರತದಲ್ಲಾದ ತಾರತಮ್ಯವನ್ನು ಉದಯನಿಧಿ ಉಲ್ಲೇಖಿಸಿದ್ದರು.

“ನಮ್ಮ ದ್ರಾವಿಡ ಚಳವಳಿಯ ಶಿಕ್ಷಕರು ವಿದ್ಯಾರ್ಥಿಗಳ ಹೆಬ್ಬೆರಳು ಕೇಳದೆ ಶಿಕ್ಷಣವನ್ನು ಬೋಧಿಸುವ ಮೂಲಕ ಮಕ್ಕಳೊಂದಿಗಿನ ಬಾಂಧವ್ಯವನ್ನು ಶಾಶ್ವತವಾಗಿ ಮುಂದುವರಿಸುತ್ತಿದ್ದಾರೆ” ಎಂದು ಉದಯನಿಧಿ ಹೇಳಿಕೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X