ಹೊಸ ಸಂಸತ್ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದ್ದು ಜಾತಿ ತಾರತಮ್ಯದ ಉತ್ತಮ ಉದಾಹರಣೆ: ಉದಯನಿಧಿ

Date:

  • ಜಾತಿ ತಾರತಮ್ಯದ ಆಚರಣೆ ಬಗ್ಗೆ ಯಾವುದಾದರೂ ಉದಾಹರಣೆ ನೀಡಬಹುದೇ ಎಂದು ಕೇಳಿದ ಪತ್ರಕರ್ತ
  • ಕೆಳಜಾತಿಯ ಕಾರಣಕ್ಕೆ ದ್ರೋಣಾಚಾರ್ಯರು ಏಕಲವ್ಯನಿಗೆ ಬಿಲ್ವಿದ್ಯೆ ಕಲಿಸಲಿಲ್ಲ ಎಂದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮ ನಿರ್ಮೂಲನೆ ಹೇಳಿಕೆಯು ದೇಶಾದ್ಯಂತ ಬಿಜೆಪಿ ಮತ್ತು ಸಂಘಪರಿವಾರವನ್ನು ಕೆರಳುವಂತೆ ಮಾಡಿರುವ ಮಧ್ಯೆಯೇ ಮತ್ತೊಮ್ಮೆ ಸ್ಪಷ್ಟವಾಗಿ ತನ್ನ ನಿಲುವನ್ನು ಪ್ರಕಟಿಸಿರುವ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್, “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೊಸ ಸಂಸತ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇರುವುದು ಜಾತಿ ತಾರತಮ್ಯ ಅತ್ಯುತ್ತಮ ಉದಾಹರಣೆ” ಎಂದು ಹೇಳಿದ್ದಾರೆ.

- Advertisement -

ಚೆನ್ನೈನಲ್ಲಿ ಸನಾತನ ಧರ್ಮದ ಜಾತಿ ತಾರತಮ್ಯ ಆಚರಣೆಯ ಬಗ್ಗೆ ನೀವು ಯಾವುದಾದರೂ ಉದಾಹರಣೆಯನ್ನು ನೀಡಬಹುದೇ ಎಂದು ಪತ್ರಕರ್ತನೋರ್ವ ಕೇಳಿದಾಗ ಉತ್ತರಿಸಿರುವ ತಮಿಳುನಾಡು ಕ್ರೀಡಾ ಸಚಿವ, “ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿಲ್ಲ. ಇದು ಪ್ರಸ್ತುತ ಅತ್ಯುತ್ತಮವಾದ ಉದಾಹರಣೆಯಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನೀವೇನಾದರೂ ಕ್ಷಮೆ ಕೇಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಉದಯನಿಧಿ ಸ್ಟಾಲಿನ್, ಯಾರಾದರೂ ಕ್ಷಮೆ ಕೇಳಲು ಹೇಳಿದ್ದಾರಾ? ಇಲ್ಲ, ನಾನು ಕ್ಷಮೆ ಕೇಳುವ ಮಾತೇ ಇಲ್ಲ, ‘ಸಾರಿ’. ಈಗ ಹೇಳಿದ ‘ಸಾರಿ ಅವರಿಗಾಗಿ ಅಲ್ಲ. ಇದು ನಿಮ್ಮ (ವರದಿಗಾರರ) ಪ್ರಶ್ನೆಗೆ” ಎಂದು ‘ಸನಾತನ ಧರ್ಮ’ ಕುರಿತು ಕ್ಷಮೆಯಾಚಿಸುವ ಬೇಡಿಕೆಗಳ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮಂಗಳವಾರ ಶಿಕ್ಷಕರ ದಿನಾಚರಣೆಯ ಸಂದೇಶದಲ್ಲಿ ಮಾತನಾಡಿದ್ದ ಕ್ರೀಡಾ ಸಚಿವ, “ಏಕಲವ್ಯ ಕೆಳಜಾತಿಯವನೆಂಬ ಕಾರಣಕ್ಕೆ ದ್ರೋಣಾಚಾರ್ಯರು ಆತನಿಗೆ ಬಿಲ್ವಿದ್ಯೆ ಕಲಿಸಲು ನಿರಾಕರಿಸಿದರು. ಆದರೆ ಆತ ತನ್ನ ಸ್ವಂತ ಪರಿಶ್ರಮದಿಂದ ಬಿಲ್ಲುಗಾರಿಕೆಯನ್ನು ಕಲಿತದ್ದು ಮಾತ್ರವಲ್ಲದೇ, ನುರಿತ ಬಿಲ್ಲುಗಾರನಾದನು. ದ್ರೋಣಾಚಾರ್ಯರ ಶಿಷ್ಯ ಅರ್ಜುನನಿಗಿಂತಲೂ ಉತ್ತಮನಾದನು. ಇದನ್ನು ತಿಳಿದ ನಂತರ ಕೋಪಗೊಂಡ ದ್ರೋಣಾಚಾರ್ಯರು ಏಕಲವ್ಯನ ಹೆಬ್ಬೆರಳನ್ನು ನೀಡಬೇಕೆಂದು ಒತ್ತಾಯಿಸಿದರು. ಏಕಲವ್ಯ ಅದನ್ನು ಪಾಲಿಸಿದನು, ಇದರಿಂದಾಗಿ ಅವನು ಬಿಲ್ಲುಗಾರಿಕೆ ಮಾಡಲು ಅಸಮರ್ಥನಾದನು” ಎಂದು ಮಹಾಭಾರತದಲ್ಲಾದ ತಾರತಮ್ಯವನ್ನು ಉದಯನಿಧಿ ಉಲ್ಲೇಖಿಸಿದ್ದರು.

“ನಮ್ಮ ದ್ರಾವಿಡ ಚಳವಳಿಯ ಶಿಕ್ಷಕರು ವಿದ್ಯಾರ್ಥಿಗಳ ಹೆಬ್ಬೆರಳು ಕೇಳದೆ ಶಿಕ್ಷಣವನ್ನು ಬೋಧಿಸುವ ಮೂಲಕ ಮಕ್ಕಳೊಂದಿಗಿನ ಬಾಂಧವ್ಯವನ್ನು ಶಾಶ್ವತವಾಗಿ ಮುಂದುವರಿಸುತ್ತಿದ್ದಾರೆ” ಎಂದು ಉದಯನಿಧಿ ಹೇಳಿಕೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...