ಒಕ್ಕಲಿಗರು ಮಾತ್ರವಲ್ಲ, ಎಲ್ಲ ವರ್ಗದ ಜನ ಕಾಂಗ್ರೆಸ್ ಬೆಂಬಲಿಸುತ್ತಾರೆ: ಡಿ ಕೆ ಶಿವಕುಮಾರ್

Date:

ಜನರು ದಡ್ಡರಲ್ಲ, ತಮ್ಮ ಬದುಕು ಯಾರು ಕಟ್ಟಿಕೊಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ. ಕಾಂಗ್ರೆಸ್ ಪಕ್ಷ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದು, ಒಕ್ಕಲಿಗರೂ ಸೇರಿದಂತೆ ಎಲ್ಲ ವರ್ಗದ ಜನ ಕಾಂಗ್ರೆಸ್‌ಗೆ ಬೆಂಬಲ ನೀಡಲಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

- Advertisement -

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡುವಾಗ, ವಿಧಾನಸಭೆ ಚುನಾವಣೆ ವೇಳೆ ಶೇ.5ರಷ್ಟು ಒಕ್ಕಲಿಗ ಮತಗಳು ಕಾಂಗ್ರೆಸ್ ಕಡೆ ವಾಲಿದ್ದವು. ಈ ಬಾರಿ ಒಕ್ಕಲಿಗರು ಯಾರನ್ನು ಬೆಂಬಲಿಸಲಿದ್ದಾರೆ ಎಂದು ಕೇಳಿದಾಗ ಅವರು ಹೀಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

“ಒಕ್ಕಲಿಗರಾಗಲಿ, ಬೇರೆ ಸಮುದಾಯದವರಾಗಲಿ ಯಾರೂ ದಡ್ಡರಲ್ಲ. ತಮಗೆ ಯಾರು ಅನುಕೂಲ ಮಾಡಿಕೊಡಲಿದ್ದಾರೆ ಹಾಗೂ ದೇಶಕ್ಕೆ ಯಾರು ಸೂಕ್ತ ಎಂದು ನೋಡುತ್ತಾರೆ. ತಮಗೆ, ರಾಜ್ಯಕ್ಕೆ, ದೇಶಕ್ಕೆ ಯಾರು ಉತ್ತಮರು ಎಂದು ಜನ ಆಲೋಚನೆ ಮಾಡುತ್ತಾರೆ. ಜನ ಅವರ ಬದುಕು ನೋಡುತ್ತಾರೆ ಹೊರತು, ಭಾವನೆ ನೋಡುವುದಿಲ್ಲ” ಎಂದರು.

ಜೆಡಿಎಸ್‌ಗೆ ಮುಕ್ತಿ

ಸ್ವಾಮೀಜಿಗಳು ಕೃಷ್ಣನಂತೆ, ಅವರು ಪಾಂಡವರಂತೆ ಇರುವ ಜೆಡಿಎಸ್ ಪರವಾಗಿ ನಿಲ್ಲಲಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ. ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ನಾವು ಹಿಂದೆ ಒಂದು ತಪ್ಪು ಮಾಡಿದ್ದೆವು. ಆದರೆ ಈಗ ಅದಕ್ಕಿಂತ ದೊಡ್ಡ ತಪ್ಪು ಜೆಡಿಎಸ್ ನವರು ಮಾಡಿದ್ದಾರೆ” ಎಂದು ಲೇವಡಿ ಮಾಡಿದರು.

ಸರ್ಕಾರವನ್ನು ಒಂದು ಜಾತಿಗೆ ಸೀಮಿತವಾಗಿಸುತ್ತಿರುವುದೇಕೆ ಎಂದು ಕೇಳಿದಾಗ, “ನೀವು ನಾವು ಬೇಡ ಎಂದರೂ ಜಾತಿ ನಮ್ಮನ್ನು ಬಿಡುವುದಿಲ್ಲ. ನಾವು ಅರ್ಜಿ ಹಾಕಿ ಹುಟ್ಟದಿದ್ದರೂ ನಾವು ಸಾಯುವಾಗ ಧರ್ಮ, ಜಾತಿ ಬಂದೇ ಬರುತ್ತದೆ. ಧರ್ಮ ಬೇಡ ಎಂದರೂ ನಾಮಕರಣ ಹಾಗೂ ವಿವಿಧ ಕಾರ್ಯಗಳಲ್ಲಿ ಧರ್ಮ ಅಡಗಿದೆ” ಎಂದರು.

ಮೋದಿಗೆ ತಮ್ಮ ಮೇಲೆ ವಿಶ್ವಾಸವಿಲ್ಲ

“ಮೋದಿ ಅವರು ತಮ್ಮ ಹೆಸರೇಳಿ ಮತ ಕೇಳಲಿಲ್ಲ. ಶಿವಮೊಗ್ಗಕ್ಕೆ ಬಂದಿದ್ದ ಅವರು ಅಭ್ಯರ್ಥಿ ರಾಘವೇಂದ್ರ ಅವರಿಗೆ ಮತ ಕೊಡಿ ಎಂದು ಕೇಳಿದರೇ ಹೊರತು ತಮಗೆ ಕೊಡಿ ಎಂದು ಕೇಳಲೇ ಇಲ್ಲ. ಮೋದಿ ಅವರಿಗೆ ತಮ್ಮ ಮೇಲೆ ವಿಶ್ವಾಸವಿಲ್ಲ. ನಿಮಗೇನಾದರೂ ಅವರ ಪರವಾದ ಅಲೆ ಕಾಣುತ್ತಿದೆಯೇ” ಎಂದು ಪ್ರಶ್ನಿಸಿದರು.

ಸೋಮಶೇಖರ್, ಹೆಬ್ಬಾರ್ ಬಿಜೆಪಿ ಶಾಸಕರು

ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡಿದ್ದಾರೆ ಎಂದು ಕೇಳಿದಾಗ, “ನಾನು ಅವರನ್ನು ಎಲ್ಲಿ ಸೇರಿಸಿಕೊಂಡಿದ್ದೇನೆ. ಅವರು ತಮ್ಮ ಕ್ಷೇತ್ರದ ವಿಚಾರವಾಗಿ ನಮ್ಮ ಜತೆ ಚರ್ಚೆ ಮಾಡಿದ್ದಾರೆ. ಆ ಕ್ಷೇತ್ರಕ್ಕೆ ಹೋಗಿ ಅಲ್ಲಿ ಕೇಳಿ. ಸೋಮಶೇಖರ್ ಹಾಗೂ ಹೆಬ್ಬಾರ್ ಅವರು ಬಿಜೆಪಿಯ ಅಧಿಕೃತ ಶಾಸಕರು. ಅವರು ತಮ್ಮದೇ ಆದ ಲೆಕ್ಕಾಚಾರ, ನಂಬಿಕೆ ಮೇಲೆ ಯಾವ ಪಕ್ಷಕ್ಕೆ ಸಹಾಯ ಮಾಡುತ್ತಿದ್ದಾರೋ ನನಗೆ ಗೊತ್ತಿಲ್ಲ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...