ತಮ್ಮ ಹಗರಣಗಳಿಗೆ ರಕ್ಷಣೆ ಪಡೆಯಲು ನಟೋರಿಯಸ್ ಗ್ಯಾಂಗ್‌ ಸಿಎಂ ಅವರನ್ನು ಖೆಡ್ಡಾಗೆ ಕೆಡವಿದೆ: ಸಿ ಟಿ ರವಿ

Date:

Advertisements

ತಮ್ಮ ಹಗರಣಗಳಿಗೆ ರಕ್ಷಣೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ನಟೋರಿಯಸ್ ಗ್ಯಾಂಗ್‌ ಖೆಡ್ಡಾಗೆ ಕೆಡವಿಕೊಂಡಿದೆ. ನಾವು ಮಾತ್ರ ಸಿದ್ದರಾಮಯ್ಯ ಮೇಲೆ ಆರೋಪ ಮಾಡುತ್ತಿಲ್ಲ ಎಂದು ವಿಧಾನ ಪರಿಷತ್​ ಬಿಜೆಪಿ ಸದಸ್ಯ ಸಿ ಟಿ ರವಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಚಿಕ್ಕಮಗಳೂರಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ಕೇವಲ ಸಿದ್ದರಾಮಯ್ಯನವರ ಕುಟುಂಬ ಮಾತ್ರ ಮುಡಾ ಹಗರಣದಲ್ಲಿ ಭಾಗಿಯಾಗಿಲ್ಲ. 1,600ಕ್ಕೂ ಹೆಚ್ಚು ನಿವೇಶನಗಳನ್ನ ಇದೆ ರೀತಿ ಪರಬಾರಿ ಮಾಡಲಾಗಿದೆ ಎಂಬ ಆರೋಪ ಇದೆ” ಎಂದರು.

“ಮೈಸೂರಿನಂತಹ ಸ್ಥಳದಲ್ಲೇ ಹೀಗಾಗಿರುವಾಗ ಬೆಂಗಳೂರಿನಲ್ಲಿ ಎಷ್ಟಾಗಿರಬಹುದು? ಬೇರೆ ಬೇರೆ ನಗರ ಅಭಿವೃದ್ಧಿ ಪ್ರಾಧಿಕಾರದಲ್ಲೂ ಅಕ್ರಮ ನಡೆದಿರುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ವಿಧಾನಸಭೆ, ವಿಧಾನ ಪರಿಷತ್​ನಲ್ಲಿ ಚರ್ಚೆಗೆ ಒತ್ತಾಯ ಮಾಡಿದ್ದೇವು. ದುರ್ದೈವದ ಸಂಗತಿ ಎಂದರೆ ಆಡಳಿತ ಪಕ್ಷ ಚರ್ಚೆಗೂ ಅವಕಾಶ ಕೊಡಲಿಲ್ಲ” ಎಂದು ತಿಳಿಸಿದರು.

Advertisements

“ಸಿದ್ದರಾಮಯ್ಯ ಒಂದು ಪತ್ರ ಇದ್ದರೆ ತೋರಿಸಿ ಅಂತಾರೆ. ಅವರ ಪತ್ನಿಯೇ ಬರೆದ ಪತ್ರ ಇದೆ. ಕೆಸವೆ ಗ್ರಾಮದಲ್ಲಿ 2001ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಡೆವಲಪ್ ಮಾಡಿದೆ. ಎಲ್​ಎನ್​ಟಿ ಕಂಪನಿ ಅವರಿಗೆ ಗುತ್ತಿಗೆ ಕೊಟ್ಟಿರುವ ದಾಖಲೆಗಳಿವೆ” ಎಂದು ಹೇಳಿದರು.

“ಎಷ್ಟು ಡಿನೋಟಿಫೈ ಮಾಡಿದ್ದಾರೆ? ಯಾವ ಕಾರಣಗಳಿಗೆ ಮಾಡಿದ್ದಾರೆ? ಯಾರಿಗೆ ಬದಲಿ ನಿವೇಶನ ಕೊಟ್ಟಿದ್ದಾರೆ? ಎಲ್ಲವೂ ಹೊರಬರುತ್ತೆ. ಸೆಟ್ಲ್​​ಮೆಂಟ್​ ಡೀಡ್ ಅನ್ನುವುದೇ ಪ್ರಾಧಿಕಾರದಲ್ಲಿ ಇರುವುದಿಲ್ಲ. ಎಲ್ಲರೂ ದೊಡ್ಡ ದೊಡ್ಡ ಪ್ರಭಾವಿಗಳೇ ಇರೋದು. ನಮ್ಮ ಬಳಿ ಆರೋಪ ಸಾಬೀತು ಮಾಡುವ ಕೆಲ ದಾಖಲೆಗಳಿವೆ” ಎಂದು ತಿಳಿಸಿದರು.

“ಮುಡಾ ಪ್ರಕರಣದಲ್ಲಿ ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಮೂರು ನಡೆದಿದೆ. ನಮ್ಮ ಹತ್ತಿರವು ಕೆಲ ದಾಖಲೆಗಳಿವೆ. ನ್ಯಾಯಾಲಯ ತನಿಖೆಗೆ ಆದೇಶ ನೀಡಿದ ಬಳಿಕ ದಾಖಲೆಗಳನ್ನು ನೀಡುತ್ತೇವೆ. ನ್ಯಾಯಾಲಯದ ತೀರ್ಪನ್ನು ಎದುರು ನೋಡುತ್ತಿದ್ದೇವೆ” ಎಂದರು.

“12 ನಿವೇಶನಗಳನ್ನ 2003ರಲ್ಲಿ ಹಂಚಿಕೆ ಆಗಿರುವುದಕ್ಕೆ ದಾಖಲೆಗಳಿವೆ. ಅಭಿವೃದ್ಧಿ ಆಗಿರುವ ಜಾಗವನ್ನು ಇವರ ಭಾವ ತೆಗೆದುಕೊಂಡಿರುವುದೇ ಅಪರಾಧ. ಮೂಲ ವಾರಸುದಾರರು ಅಲ್ಲದವರ ಬಳಿ ಜಾಗ ತೆಗೆದುಕೊಂಡಿದ್ದಾರೆ. ಜಾಗ ಖರೀದಿ ಇಂದ ಹಿಡಿದು ಕನ್ವರ್ಷನ್​ವರೆಗೂ ಅಕ್ರಮವೇ ನಡೆದಿದೆ. ಸಿದ್ದರಾಮಯ್ಯ ಅರ್ಧ ಸತ್ಯ ಹೇಳುತ್ತಿದ್ದಾರೆ” ಎಂದು ಹೇಳಿದರು.

“ಮುಡಾ ಪ್ರಕರಣ ಬೆಳಕಿಗೆ ಬಂದ ತಕ್ಷಣ ನಗರ ಅಭಿವೃದ್ಧಿ ಸಚಿವ ಬೈರತಿ ಸುರೇಶ್ ಮೈಸೂರಿಗೆ ಹೋಗಿ ದಾಖಲೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಇದೆ. ತನಿಖೆ ಕೊಡುವ ಮೂರು ದಿನದ ಮುಂಚೆ ವಾರಗಟ್ಟಲೆ ಮೈಸೂರಿನಲ್ಲಿ ಕುಳಿತ್ತಿದ್ದರು. ಕೆಲವು ದಾಖಲೆಗಳನ್ನು ಇಲ್ಲದಂತೆ ಮಾಡಿದ್ದಾರೆ. ಹಳೆಯ ಅಧಿಕಾರಿಗಳನ್ನು ಕರೆಸಿ ಸಹಿ ಮಾಡಿಸಿದ್ದಾರೆ ಎಂಬ ದೂರು ನಮಗೆ ಬಂದಿತ್ತು ಹೀಗಾಗಿ ನಾವು ತನಿಖೆಗೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ಮಾಡಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X