ತೈಲ ಬೆಲೆ ಏರಿಕೆ | ಬಿಜೆಪಿ ಪ್ರತಿಭಟನೆ ಬರೀ‌ ನಾಟಕ: ಸಚಿವ ಎಂ‌ ಬಿ ಪಾಟೀಲ್ ವಾಗ್ದಾಳಿ

Date:

Advertisements

ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯನ್ನು ನಾವು ಕೇವಲ ಮೂರು ರೂಪಾಯಿ ಏರಿಸಿದ್ದೇವೆ ಅಷ್ಟೇ.‌ ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್‌ ‌ಬೆಲೆಗಳು ಕ್ರಮವಾಗಿ 400, 38 ಮತ್ತು 35 ರೂ. ದುಬಾರಿ ಆಗಿದೆ. ಆಗ ತೆಪ್ಪಗಿದ್ದ ಬಿಜೆಪಿಯ ಅಶೋಕ್ ಮತ್ತು ವಿಜಯೇಂದ್ರ ಗ್ಯಾಂಗ್ ಈಗ ಪ್ರತಿಭಟಿಸುತ್ತಿರುವುದು ಬರೀ ನಾಟಕ ಎಂದು ಸಚಿವ ಎಂ ಬಿ ಪಾಟೀಲ್ ಎದಿರೇಟು ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, “ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಗಳು ನಮಗಿಂತ ಜಾಸ್ತಿ ಇದೆ. ಬಿಜೆಪಿ ಅಲ್ಲೇಕೆ ಪ್ರತಿಭಟಿಸುತ್ತಿಲ್ಲ” ಎಂದು ಪ್ರಶ್ನಿಸಿದರು.

“ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಈಗಿನ ಬೆಲೆ ಏರಿಕೆಗೂ ಸಂಬಂಧ ಇಲ್ಲ. ಜೊತೆಗೆ ನಾವು ಕೊಟ್ಟಿರುವ ಗ್ಯಾರಂಟಿಗಳು ಕೂಡ ನಿಲ್ಲುವುದಿಲ್ಲ. ಅವುಗಳ ಜತೆಯಲ್ಲೇ ನಾವು ಅಭಿವೃದ್ಧಿ ಕೂಡ ಸಾಧಿಸುತ್ತೇವೆ” ಎಂದು ಅವರು ಪ್ರತಿಪಾದಿಸಿದರು.

Advertisements

“ಕಳೆದ ಹತ್ತು ವರ್ಷಗಳಲ್ಲಿ ಕಚ್ಚಾ ತೈಲದ ‌ಬೆಲೆ ಸಾಕಷ್ಟು ಇಳಿದಿದೆ. ಆದರೆ ಮೋದಿ ಸರಕಾರ ಮಾತ್ರ ತೈಲೋತ್ಪನ್ನಗಳ ಬೆಲೆಯನ್ನು ಒಮ್ಮೆ ಕೂಡ ಇಳಿಸಿಲ್ಲ. ಆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಪೆಟ್ರೋಲ್ , ಡೀಸೆಲ್‌ ಮತ್ತು ಎಲ್ ಪಿಜಿ‌ ಬೆಲೆ ಜನರ ಕೈಗೆ ಎಟುಕುವಂತಿತ್ತು” ಎಂದು ಅವರು ಹೇಳಿದ್ದಾರೆ.

“ನಾವೀಗ ಕೇವಲ ಮೂರು ರೂಪಾಯಿ ಮಾತ್ರ ಏರಿಸಿದ್ದೇವೆ. ಆದರೆ ಮೋದಿ ಮತ್ತು ಬಿಜೆಪಿ ನೀತಿಗಳಿಂದ ಜನರ ಜೀವನ ದುಬಾರಿಯಾಗಿದೆ. ಇದು ವಾಸ್ತವ ಸಂಗತಿ. ಬಿಜೆಪಿ ನಾಯಕರು ಮೊದಲು ಇದರ ವಿರುದ್ಧ ದನಿ ಎತ್ತುವ ಕರ್ತವ್ಯ ಮಾಡಬೇಕು” ಎಂದು ಅವರು ಆಗ್ರಹಿಸಿದರು.

“ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ಹದಿನೈದು ಸಲ ಬಜೆಟ್ ಮಂಡಿಸಿದ್ದಾರೆ. ಅವರ ಅರ್ಥಿಕ ಜ್ಞಾನದ ಬಗ್ಗೆ ಜನರಿಗೆ ಚೆನ್ನಾಗಿ ತಿಳಿದಿದೆ. ರಾಜ್ಯದ ಬೊಕ್ಕಸವನ್ನು ಹೇಗೆ ತುಂಬಬೇಕು ಎಂಬುದನ್ನು ಅವರು ಬಲ್ಲರು” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X