ಗೃಹಲಕ್ಷ್ಮಿ | ಆ. 18ರ ಒಳಗೆ ಖಾತೆಗೆ ಹಣ ಹಾಕುವುದು ಖಚಿತ: ಲಕ್ಷ್ಮಿ ಹೆಬ್ಬಾಳ್ಕರ್‌

Date:

Advertisements
  • ಆನ್​ಲೈನ್ ಮೂಲಕ ಮತ್ತು ಭೌತಿಕವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ
  • ಯೋಜನೆಯ ಲಾಭ ಪಡೆಯಲಿವೆ 1.28 ಕೋಟಿ ಕುಟುಂಬಗಳು

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ವಿಳಂಬ ಆಗಲಿದೆ. ಆದರೆ, ಆಗಸ್ಟ್​ 18ರ ಒಳಗೆ ಮನೆಯೊಡತಿಯ ಬ್ಯಾಂಕ್‌ ಖಾತೆಗೆ ಹಣ ಹಾಕುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗೌರಿಗದ್ದೆ ದತ್ತಾಶ್ರಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಆಗಸ್ಟ್ 18ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ ಸಂದಾಯ ಮಾಡುವುದು ಖಚಿತ. ಆದರೆ, ಅರ್ಜಿ ಸಲ್ಲಿಕೆ ಮಾತ್ರ ಸ್ವಲ್ಪ ತಡವಾಗಲಿದೆ. ಆಗಸ್ಟ್ 17 ಅಥವಾ 18ಕ್ಕೆ ಖಂಡಿತ ಹಣ ಅವರ ಖಾತೆ ಸೇರುತ್ತೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತಿರುವುದರಿಂದ ಅರ್ಜಿ ಸಲ್ಲಿಕೆ ವಿಳಂಬವಾಗುತ್ತಿದೆ ಅಷ್ಟೇ. ಯೋಜನೆ ಜನರಿಗೆ ಸರಳವಾಗಿ ಸಿಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಹಾಗಾಗಿ, ಅಧಿಕಾರಿಗಳಿಗೆ ಕೆಲವು ಬದಲಾವಣೆಗಳ ಕುರಿತು ಸೂಚನೆ ನೀಡಿದ್ದೇವೆ” ಎಂದು ವಿವರಿಸಿದರು.

Advertisements

“ಮೊದಲು ಗ್ರಾಮ ಒನ್ ಕರ್ನಾಟಕ, ಬೆಂಗಳೂರು ಒನ್‌ನಲ್ಲಿ ಇದರ ಸೇವೆ ಪಡೆಯಬಹುದಾಗಿತ್ತು. ಆದರೆ, ಈಗ ಬಾಪೂಜಿ ಸೇವಾ ಕೇಂದ್ರವನ್ನು ಸೇರಿಸಿದ್ದೇವೆ, ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ಇದೆ. ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಸಕ್ತಿ ಇರುವವರನ್ನು ಪ್ರಜಾಪ್ರತಿನಿಧಿ ಮಾಡುತ್ತೇವೆ” ಎಂದು ತಿಳಿಸಿದರು.

“ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಯಾವ ಖಾತೆಗೆ ಬೇಕೋ ಅದೇ ಬ್ಯಾಂಕ್‌ ಖಾತೆಗೆ ಹಣ ನೀಡುತ್ತೇವೆ. ನಿನ್ನೆ ಕೆಲವು ಬದಲಾವಣೆ ಮಾಡಿದ್ದೇವೆ. ಅಧಿಕಾರಿಗಳು ಈಗಾಗಲೇ ಸಾಫ್ಟ್​​ವೇರ್​ ಸಿದ್ಧ ಮಾಡುತ್ತಿದ್ದಾರೆ. ಶೀಘ್ರದಲ್ಲಿ ಅಪ್ಲಿಕೇಶನ್ ಡೌನ್‌ಲೋಡ್‌ ಮಾಡುವ ಕಾರ್ಯಕ್ಕೆ ಚಾಲನೆ ನೀಡುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ನೀರು ಪೂರೈಕೆಗೆ ಆಗ್ರಹ; ಖಾಲಿ ಕೊಡ ಹಿಡಿದು ಗ್ರಾ.ಪಂ ಕಚೇರಿಗೆ ಮುತ್ತಿಗೆ

“ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಯನ್ನು ರಾಜ್ಯ ಸರ್ಕಾರ 6 ದಿನ ಮುಂದೂಡಿತ್ತು. ಜೂನ್ 16ರಿಂದ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ಆಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಯೋಜನೆಯನ್ನು ಮುಂದೂಡಿದ್ದರು. 1 ಕೋಟಿ 28 ಲಕ್ಷ ಕುಟುಂಬಗಳ ಯಜಮಾನಿ ಪಡೆದುಕೊಳ್ಳುತ್ತಾರೆ. ಆದ್ದರಿಂದ ಆನ್​ಲೈನ್ ಮೂಲಕ ಮತ್ತು ಭೌತಿಕವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ” ಎಂದು ವಿವರಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X