ಕಾರ್ಯದರ್ಶಿ ಸಹಿಯೇ ಇಲ್ಲದ ಕಾಂತರಾಜ ವರದಿ ಸ್ವೀಕರಿಸಲು ಆಗುತ್ತಾ: ಕುಮಾರಸ್ವಾಮಿ ಪ್ರಶ್ನೆ

Date:

Advertisements

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ ವರದಿ ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸ್ವೀಕರಿಸುವುದಕ್ಕೆ ಆ ವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಸಹಿ ಇತ್ತಾ” ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

ರಾಮನಗರ ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಆ ವರದಿಗೆ ಇವತ್ತಿನವರೆಗೂ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನು ನಾನು ಹೇಗೆ ಸ್ವೀಕರಿಸಲಿ. ಸುಮ್ಮನೆ ನನ್ನ ಮೇಲೆ ಆರೋಪ ಮಾಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾಂತರಾಜ ನೇತೃತ್ವದಲ್ಲಿ ಸಿದ್ಧಪಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ವರದಿಯನ್ನು ಸ್ವೀಕರಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡಿರುವವರು ಯಾರು” ಎಂದರು ಕುಮಾರಸ್ವಾಮಿ ಪ್ರಶ್ನಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಸತ್‌ ದಾಳಿ ಆರೋಪಿಗಳಿಗೆ ಸುಳ್ಳು ಹೇಳಲು ಒತ್ತಡ; ವಿಪಕ್ಷಗಳನ್ನು ದೇಶದ್ರೋಹಿಗಳೆಂದು ಬಿಂಬಿಸುವ ವಿಫಲ ಯತ್ನ

“ಕಾಂಗ್ರೆಸ್‌ ಸರ್ಕಾರದಲ್ಲಿ ಕಮಿಷನ್ ವ್ಯವಹಾರ ಇದೆ ಎಂದು ನಾನು ಪ್ರಶ್ನೆ ಮಾಡಿದರೆ ಇವರಿಗೆ ಅಸಹನೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಹೇಳುತ್ತಾರೆ. ನಿತ್ಯ ವರ್ಗಾವಣೆ ಮಾಡುತ್ತಿದ್ದಾರೆ. ಇದೀಗ, ಅವರದ್ದೇ ಪಕ್ಷದವರಾದ ಹಾಸನದ ಮಾಜಿ ಸಚಿವ ಬಿ. ಶಿವರಾಮ್ ಕಮಿಷನ್ ಆರೋಪ ಮಾಡಿದ್ದಾರೆ. ಬಿಜೆಪಿಗಿಂತಲೂ ಕಾಂಗ್ರೆಸ್‌ನಲ್ಲಿ ಕಮಿಷನ್ ಪರ್ಸೆಂಟ್ ಜಾಸ್ತಿಯಾಗಿದೆ ಎಂದು ತಲೆ ಚಚ್ಚಿಕೊಂಡಿದ್ದಾರೆ. ಹೀಗಿದ್ದರೂ, ಸಿದ್ದರಾಮಯ್ಯ ಅವರು ಮೋದಿ ಅವರನ್ನು ಟೀಕಿಸುತ್ತಾರೆ. ಮೊದಲು ಅವರ ಸ್ಥಿತಿ ನೋಡಿಕೊಳ್ಳಲಿ” ಎಂದು ಲೇವಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕೇಸರಿ ಶಾಲು ಹೆಗಲಿಗೆ ಹಾಕಿಕೊಂಡು ಪೇಶ್ವೆ ಗುಣಗಾನ ಮಾಡಿದ ಮಾಜಿ ಜಾತ್ಯತೀತರು,,, ಕಾರ್ಯದರ್ಶಿ ಸಹಿ ಮಾಡಿಸಿಕೊಂಡರಾಯಿತು,, ಜಾತಿ ಗಣತಿ ವಿರೋಧಿಸುವವರು ಜಾತಿವಾದಿ ಮನುವ್ಯಾಧಿ ಮೇಲ್ವರ್ಗದವರು ,,, ದಲಿತ ಹಿಂದುಳಿದ ತಳವರ್ಗದವರ ಸಂಖ್ಯೆ ಬಹಿರಂಗ ಆದರೆ ತಮ್ಮ ರಾಜಕೀಯ ಬುಡ ಅಳ್ಳಾಡುವುದು,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X