ತಿರುಮಲ ಟ್ರಸ್ಟಿಯಲ್ಲಿ ಹಿಂದೂಗಳು ಮಾತ್ರ; ವಕ್ಫ್‌ನಲ್ಲಿ ಮುಸ್ಲಿಮೇತರರು ಯಾಕೆ: ಓವೈಸಿ ಪ್ರಶ್ನೆ

Date:

Advertisements

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಹೊಸ ಅಧ್ಯಕ್ಷರು ತಿರುಮಲ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಸಿಬ್ಬಂದಿಗಳಾಗಬಹುದು ಎಂದು ಪ್ರತಿನಿಧಿಸಿದ್ದಾರೆ. ಹಾಗಿದ್ದಾಗ ವಕ್ಫ್‌ ಮಂಡಳಿಯಲ್ಲಿ ಮುಸ್ಲಿಮೇತರರು ಯಾಕೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಅಕ್ಟೋಬರ್ 31ರಂದು ಬಿ.ಆರ್. ನಾಯ್ಡು ಅವರು ವೆಂಕಟೇಶ್ವರ ದೇವರ ದೇವಾಲಯದಲ್ಲಿ ಎಲ್ಲಾ ಸಿಬ್ಬಂದಿ ಹಿಂದೂಗಳಾಗಿರಬೇಕು ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಕೇಂದ್ರೀಯ ವಕ್ಫ್ ಕೌನ್ಸಿಲ್‌ನಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರನ್ನು ಕಡ್ಡಾಯಗೊಳಿಸುವ ವಕ್ಫ್ ಮಸೂದೆಯ ಪ್ರಸ್ತಾಪ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಚುನಾವಣೆ | ಬಿಜೆಪಿಯ ಬಿ-ಟೀಮ್ ಎಐಎಂಐಎಂ; ಓವೈಸಿಯ ಪಕ್ಷಕ್ಕೆ ಗಫಾರ್ ಖಾದ್ರಿ ಗುಡ್‌-ಬೈ

Advertisements

ಕೇಂದ್ರ ಸರ್ಕಾರದ ಈ ಮಸೂದೆಗೆ ಎಐಎಂಐಎಂ ಮುಖ್ಯಸ್ಥ ಓವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ. “ಟಿಟಿಡಿ ಮಂಡಳಿಯ 24 ಸದಸ್ಯರಲ್ಲಿ ಒಬ್ಬ ಸದಸ್ಯ ಕೂಡ ಹಿಂದೂಯೇತರರು ಆಗಿರಬಾರದು ಎಂದು ಟಿಟಿಡಿಯ ನೂತನ ಅಧ್ಯಕ್ಷರು ಹೇಳಿದ್ದಾರೆ. ಹಿಂದೂಗಳೇ ಇರಿ. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಕೇಂದ್ರೀಯ ವಕ್ಫ್ ಕೌನ್ಸಿಲ್‌ನಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರನ್ನು ಕಡ್ಡಾಯಗೊಳಿಸುವ ನರೇಂದ್ರ ಮೋದಿ ಸರ್ಕಾರದ ಪ್ರಸ್ತಾವಿತ ವಕ್ಫ್ ಮಸೂದೆಗೆ ನಮ್ಮ ವಿರೋಧವಿದೆ” ಎಂದು ಹೇಳಿದರು.

“ಟಿಟಿಡಿ ಹಿಂದೂ ಧರ್ಮದವರಾಗಿದ್ದರೆ, ವಕ್ಫ್ ಬೋರ್ಡ್ ಮುಸ್ಲಿಂ ಧರ್ಮದವರಿಗಾಗಿದೆ. ಟಿಟಿಡಿಯ ಟ್ರಸ್ಟಿಗಳು ಮುಸ್ಲಿಮರಾಗಿರಲು ಸಾಧ್ಯವಿಲ್ಲ ಎಂದಾಗ ಈ ನಿಬಂಧನೆಯನ್ನು ವಕ್ಫ್‌ಗೆ ಮಾತ್ರ ಯಾಕೆ ತರುತ್ತೀರಿ? ತಿರುಮಲ ಟ್ರಸ್ಟಿಯಲ್ಲಿ ಹಿಂದೂಗಳು ಮಾತ್ರ ಆಗಿರುವಾಗ ವಕ್ಫ್‌ನಲ್ಲಿ ಮುಸ್ಲಿಮೇತರರು ಯಾಕೆ” ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಆಗಸ್ಟ್‌ನಲ್ಲಿ ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ (ತಿದ್ದುಪಡಿ) ಮಸೂದೆ ಡಿಜಿಟಲೀಕರಣ, ಕಟ್ಟುನಿಟ್ಟಾದ ಲೆಕ್ಕಪರಿಶೋಧನೆ, ಪಾರದರ್ಶಕತೆ ಮತ್ತು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಆಸ್ತಿಗಳನ್ನು ಮರುಪಡೆಯುವ ಕಾನೂನಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X