ಕೋಲಾರ | ‘ಜನತಾ ದರ್ಶನ’ದಲ್ಲಿ ಸಂಸದ-ಶಾಸಕರಿಂದ ‘ಪೌರುಷ ದರ್ಶನ’

Date:

Advertisements
  • ಏಕವಚನದಲ್ಲೇ ಬೈದಾಡಿಕೊಂಡ ಬಿಜೆಪಿ ಸಂಸದ ಮುನಿಸ್ವಾಮಿ, ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ
  • ಉಸ್ತುವಾರಿ ಸಚಿವರ ಎದುರಲ್ಲೇ ನಡೆದ ಕಾರ್ಯಕ್ರಮದಲ್ಲಿ ನಡೆದ ಘಟನೆ; ವಿಡಿಯೋ ವೈರಲ್

ಜನತಾ ದರ್ಶನ ಕಾರ್ಯಕ್ರಮವು ಸಂಸದ-ಶಾಸಕರ ನಡುವೆ ‘ಪೌರುಷ ದರ್ಶನ’ಕ್ಕೆ ಸಾಕ್ಷಿಯಾದ ಘಟನೆ ಕೋಲಾರದಲ್ಲಿ ನಡೆದಿದೆ.

ಇಂದು ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋಲಾರದಲ್ಲೂ ಕೂಡ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಬಿಜೆಪಿ ಸಂಸದ ಎಸ್‌ ಮುನಿಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕ ಎಸ್‌ ಎನ್ ನಾರಾಯಣಸ್ವಾಮಿ ಅವರ ನಡುವೆ ವೇದಿಕೆಯ ಮೇಲೆಯೇ ಮಾತಿನ ಚಕಮಕಿ ನಡೆದಿದ್ದು, ಬಹಿರಂಗವಾಗಿಯೇ ಕೈ – ಕೈ ಮಿಲಾಯಿಸುವ ಹಂತಕ್ಕೆ ಜನಪ್ರತಿನಿಧಿಗಳು ಮುಂದಾಗಿದ್ದರು. ಸಕಾಲಕ್ಕೆ ಪೊಲೀಸರು ಮಧ್ಯ ಪ್ರವೇಶಿಸಿದ್ದರಿಂದ ಜಗಳ ತಪ್ಪಿದೆ.

Advertisements

ಜನತಾ ದರ್ಶನ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಎಸ್‌ ಮುನಿಸ್ವಾಮಿ ತಮ್ಮ ಭಾಷಣದ ವೇಳೆ ಅರಣ್ಯ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಅವರಿಗೆ ಭೂಗಳ್ಳರನ್ನು ಪಕ್ಕದಲ್ಲಿಯೇ ಕೂರಿಸಿಕೊಂಡಿದ್ದೀರಾ ಎಂದು ಕುಟುಕಿದರು.

ಇದರಿಂದ ಬೈರತಿ ಸುರೇಶ್‌ ಅವರ ಪಕ್ಕದಲ್ಲಿ ಕುಳಿತಿದ್ದ ಶಾಸಕ ಎಸ್‌ ಎನ್‌ ನಾರಾಯಣಸ್ವಾಮಿ ಕೆರಳಿದರು.

‘ನಿಮ್ಮಪ್ಪ ಭೂಗಳ್ಳ, ಯಾರಿಗೆ ಹೇಳ್ತಿಯಾ? ನಿಮ್ಮಪ್ಪನಿಗೆ ಹುಟ್ಟಿದ್ದರೆ ಸಾಬೀತು ಮಾಡು’ ಎಂದು ಸಂಸದ ಎಸ್‌ ಮುನಿಸ್ವಾಮಿ ಅವರಿಗೆ ಕಾಂಗ್ರೆಸ್ ಶಾಸಕ ಎಸ್‌ ಎನ್ ನಾರಾಯಣಸ್ವಾಮಿ ಏಕವಚನದಲ್ಲಿಯೇ ಸವಾಲು ಹಾಕಿದರು. ಇದರಿಂದ ಕೆರಳಿದ ಸಂಸದ ಎಸ್‌ ಮುನಿಸ್ವಾಮಿ ಭಾಷಣ ಪೀಠವನ್ನು ಬಿಟ್ಟು ಶಾಸಕರತ್ತ ನುಗ್ಗಿ ಬಂದರು. ಈ ವೇಳೆ ಅಲ್ಲಿಯೇ ಇದ್ದ ಪೊಲೀಸರು ಸಂಸದರನ್ನು ತಡೆದು, ವೇದಿಕೆಯಿಂದ ಹೊರಕ್ಕೆ ಎಳೆದೊಯ್ದರು.

ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ವೈರಲ್ ಆಗಿದೆ. ಜನಪ್ರತಿನಿಧಿಗಳ ಈ ರೀತಿಯ ನಡೆಯನ್ನು ಖಂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X