ಆಪರೇಶನ್ ಕಮಲ‌ | ಬಿಜೆಪಿಯ ಪ್ರಭಾವಿಯೊಬ್ಬರಿಂದ ದೊಡ್ಡ ಆಫರ್: ಬಿ ಆರ್‌ ಪಾಟೀಲ್‌ ಸ್ಫೋಟಕ ಹೇಳಿಕೆ

Date:

Advertisements

ನನಗೂ ಆಪರೇಶನ್ ಕಮಲ‌ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿಯೊಬ್ಬರು ಯತ್ನಿಸಿದ್ದರು. ಎರಡು ತಿಂಗಳ ಹಿಂದೆ ನನಗೆ ಸಂಪರ್ಕ ಮಾಡಿ ದೊಡ್ಡ ಆಫರ್ ನೀಡಿದ್ದರು ಎಂದು ಆಳಂದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಬಿ ಆರ್‌ ಪಾಟೀಲ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಚುನಾವಣೆ ಖರ್ಚು ಮತ್ತು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡುವುದಾಗಿ ಆಫರ್ ಕೊಟ್ಟಿದ್ದರು” ಎಂದರು.

“ನನ್ನಂತಹ ಮೂರು ಜನ ಶಾಸಕರಿಗೂ ಸಹ ಆಪರೇಷನ್‌ ಕಮಲ‌ ಮಾಡಲು ಯತ್ನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲ ಮಾಹಿತಿ ಕೊಟ್ಟಿದ್ದೇವೆ. ನಾನು ಯಾವುದೇ ಕಾರಣಕ್ಕೂ ಆಪರೇಶನ್ ಕಮಲಕ್ಕೆ ಒಳಗಾಗುವುದಿಲ್ಲ” ಎಂದು ಹೇಳಿದರು.

Advertisements

“ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೂ ಕೂಡ ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರೇ ನಮಗೆ ಬಹಿರಂಗವಾಗಿ ಹೇಳಿದ್ದರು” ಎಂದು ಬಿ ಆರ್‌ ಪಾಟೀಲ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಬ್ಬರಿ ಖರೀದಿ, ಅಧಿಕಾರಿಗಳ ಅಸಡ್ಡೆ, ಅನ್ನದಾತ ಅನಾಥ

ರವಿ ಗಾಣಿಗ ಈ ಹಿಂದೆಯೇ ಆರೋಪ

ಮಂಡ್ಯದ ಕಾಂಗ್ರೆಸ್‌ ಶಾಸಕ ರವಿ ಗಾಣಿಗ ಅವರು ಅಪರೇಷನ್ ಕಮಲ ಬಗ್ಗೆ ಈ ಹಿಂದೆಯೇ ಮಾತನಾಡುತ್ತ, “ಬಿಜೆಪಿ ಮತ್ತೊಮ್ಮೆ ಅಪರೇಷನ್ ಕಮಲ ಆರಂಭಿಸಿದೆ. ಯಾವ ಟೀಮ್‌ ಕಾಂಗ್ರೆಸ್ – ಜೆಡಿಎಸ್ ಸರ್ಕಾರ ಪತನಗೊಳಿಸಿತ್ತೋ ಅದೇ ಟೀಂ ಈಗ ಆ್ಯಕ್ಟಿವ್ ಆಗಿದೆ. ಅಂದು ಸಕ್ರಿಯವಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತ ಸಹಾಯಕ ಎನ್‌ ಆರ್‌ ಸಂತೋಷ್‌ ಈ ಹೊಸ ಆಪರೇಷನ್‌ ಪ್ಲ್ಯಾನ್‌ನಲ್ಲೂ ಸಕ್ರಿಯವಾಗಿದ್ದಾರೆ” ಎಂದು ಆರೋಪಿಸಿದ್ದನ್ನು ಇಲ್ಲಿ ನೆನೆಯಬಹುದು.

50 ಕೋಟಿ ಆಫರ್‌ ಎಂದಿದ್ದ ಸಿಎಂ!

ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮೈಸೂರಿನಲ್ಲಿ ಮಾತನಾಡಿ, ಬಿಜೆಪಿ ನಾಯಕರ ವಿರುದ್ಧ ಆಪರೇಷನ್‌ ಕಮಲದ ಆರೋಪ ಮಾಡಿದ್ದರು. “ನಮ್ಮ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸುತ್ತಿದ್ದು, ಪ್ರತಿಯೊಬ್ಬರಿಗೆ 50 ಕೋಟಿ ರೂ. ಆಫರ್‌ ಮಾಡುತ್ತಿದ್ದಾರೆ. ಸಚಿವ ಸ್ಥಾನ ನೀಡುತ್ತೇವೆ ಎಂದು ಆಫರ್‌ ಮಾಡುತ್ತಿದ್ದಾರೆ” ಎಂದು ಬಹಿರಂಗವಾಗಿಯೇ ಹೇಳಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X