ಆಪರೇಷನ್ ಲೋಟಸ್ | ಬಿಜೆಪಿ ಮತದಾರರ ಪಟ್ಟಿ ದುರ್ಬಳಕೆ ಮಾಡುತ್ತಿದೆ: ಕೇಜ್ರಿವಾಲ್ ಆರೋಪ

Date:

Advertisements

ಬಿಜೆಪಿಯು ಮತದಾರರ ಅಂಕಿಅಂಶಗಳನ್ನು ದುರ್ಬಳಕೆ ಮಾಡುತ್ತಿದೆ. ಈ ಮೂಲಕ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಅನ್ಯಾಯದ ಮಾರ್ಗದಲ್ಲಿ ಗೆಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ತಮ್ಮ ವಿಧಾನಸಭಾ ಕ್ಷೇತ್ರವಾದ ನವದೆಹಲಿಯಲ್ಲಿ ಮತದಾರರ ಅರ್ಜಿಗಳನ್ನು ಅಳಿಸುವ ಮೂಲಕ ಬಿಜೆಪಿ ಆಪರೇಷನ್ ಕಮಲವನ್ನು ನಡೆಸುತ್ತಿದೆ ಎಂದು ದೂರಿದರು.

ಇದನ್ನು ಓದಿದ್ದೀರಾ? ಹರಿಯಾಣ ಚುನಾವಣೆ | ಎಂದಿಗೂ ಅತಿಯಾದ ಆತ್ಮವಿಶ್ವಾಸ ಇರಬಾರದು: ಅರವಿಂದ್ ಕೇಜ್ರಿವಾಲ್

Advertisements

“ಆಪರೇಷನ್ ಕಮಲ ಈಗ ನನ್ನ ಕ್ಷೇತ್ರವನ್ನು ತಲುಪಿದೆ. ಅವರು ಚುನಾವಣಾ ಫಲಿತಾಂಶವನ್ನು ಬದಲಾಯಿಸಲು ಮತದಾರರ ಪಟ್ಟಿಯನ್ನು ದುರ್ಬಳಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ.

“ಇದು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ. ಇಂತಹ ದುಷ್ಕೃತ್ಯವನ್ನು ತಡೆಗಟ್ಟಲು ಚುನಾವಣಾ ಆಯೋಗವು ಕಟ್ಟುನಿಟ್ಟಾದ ಕ್ರಮವನ್ನು ಕೈಗೊಳ್ಳಬೇಕು ಎಂದು ನಾವು ಮನವಿ ಮಾಡುತ್ತೇವೆ” ಎಂದರು.

ಇನ್ನು ದೆಹಲಿ ಮುಖ್ಯಮಂತ್ರಿ ಆತಿಶಿ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಕೂಡಾ ಇದೇ ಆರೋಪವನ್ನು ಮಾಡಿದ್ದಾರೆ. ಒಂದೇ ಕ್ಷೇತ್ರದಲ್ಲಿ 11,000 ಮತದಾರರನ್ನು ಅಳಿಸುವಂತೆ ಬಿಜೆಪಿ ಅರ್ಜಿಗಳನ್ನು ಸಲ್ಲಿಸಿದೆ ಎಂದು ಆರೋಪಿಸಿದರು. ಆದರೆ ಮುಖ್ಯ ಚುನಾವಣಾ ಆಯುಕ್ತರ ಮಧ್ಯಸ್ಥಿಕೆಯಿಂದ ಈ ಕ್ರಮವನ್ನು ನಿಲ್ಲಿಸಲಾಯಿತು ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X