ಬಿಹಾರದ ಜಾತಿ ಗಣತಿಯನ್ನು ಸ್ವಾಗತಿಸಿದ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’

Date:

ಬಿಹಾರ ಸರ್ಕಾರವು ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡಿರುವುದನ್ನು ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಸ್ವಾಗತಿಸಿದ್ದು, ಆಡಳಿತಾರೂಢ ಬಿಜೆಪಿಯು ಇಂತಹ ಮಹತ್ತರ ಯೋಜನೆಯಿಂದ ಓಡಿಹೋಗುತ್ತಿದೆ ಎಂದು ಸೋಮವಾರ ಆರೋಪಿಸಿದೆ.

- Advertisement -

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, “ಬಿಹಾರದ ಜಾತಿ ಗಣತಿಯು ಒಬಿಸಿಗಳು, ಎಸ್‌ಸಿ ಮತ್ತು ಎಸ್‌ಟಿ ಜನಸಂಖ್ಯೆಯ ಶೇ. 84 ರಷ್ಟಿದೆ ಎಂದು ಬಹಿರಂಗಪಡಿಸಿದೆ. ಕೇಂದ್ರ ಸರ್ಕಾರದ 90 ಕಾರ್ಯದರ್ಶಿಗಳಲ್ಲಿ, ಕೇವಲ 3 ಒಬಿಸಿಗಳು ಮಾತ್ರ ಇದ್ದಾರೆ. ಅವರು ಭಾರತದ ಬಜೆಟ್‌ನ ಶೇ. 5 ರಷ್ಟನ್ನು ಮಾತ್ರ ನಿರ್ವಹಿಸುತ್ತಾರೆ. ಆದ್ದರಿಂದ, ಭಾರತದ ಜಾತಿಯ ಅಂಕಿಅಂಶಗಳನ್ನು ತಿಳಿದುಕೊಳ್ಳಲು ಜಾತಿ ಗಣತಿ ಮುಖ್ಯವಾಗಿದೆ. ಹೆಚ್ಚಿನ ಜನಸಂಖ್ಯೆ, ಹೆಚ್ಚಿನ ಹಕ್ಕುಗಳು – ಇದು ನಮ್ಮ ಪ್ರತಿಜ್ಞೆ” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕಾಂಗ್ರೆಸ್ ಕೂಡ ಹೊಸ ಜಾತಿ ಗಣತಿ ಮತ್ತು ಯುಪಿಎ-2 ಅಡಿಯಲ್ಲಿ ನಡೆದ ಇದೇ ರೀತಿಯ ಕಸರತ್ತಿನ ಅಂಕಿಅಂಶವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸುತ್ತಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಬಿಹಾರದಲ್ಲಿ ಈಗಷ್ಟೆ ಜಾತಿ ಗಣತಿಯನ್ನು ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ಈ ಉಪಕ್ರಮವನ್ನು ಸ್ವಾಗತಿಸಲಿದ್ದು, ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾತಿಗಣತಿಯನ್ನು ಶೀಘ್ರವಾಗಿ ನಡೆಸಬೇಕೆಂಬ ತನ್ನ ಬೇಡಿಕೆಯನ್ನು ಕಾಂಗ್ರೆಸ್‌ ಪುನರುಚ್ಚರಿಸುತ್ತದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಹಿರಂಗಗೊಂಡ ಬಿಹಾರದ ಜಾತಿಗಣತಿ ವರದಿ: ಯಾವ್ಯಾವ ಸಮುದಾಯ ಎಷ್ಟೆಷ್ಟು ಗೊತ್ತೆ?

‘ಯುಪಿಎ-2 ಸರ್ಕಾರವು ವಾಸ್ತವವಾಗಿ ಈ ಜಾತಿಯ ಜನಗಣತಿಯನ್ನು ಪೂರ್ಣಗೊಳಿಸಿದೆ. ಆದರೆ ಅದರ ಫಲಿತಾಂಶಗಳನ್ನು ಮೋದಿ ಸರ್ಕಾರವು ಪ್ರಕಟಿಸಲಿಲ್ಲ. ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳಿಗೆ ದೃಢವಾದ ಅಡಿಪಾಯವನ್ನು ಒದಗಿಸಲು ಮತ್ತು ಸಾಮಾಜಿಕ ನ್ಯಾಯವನ್ನು ಆಳಗೊಳಿಸಲು ಇಂತಹ ಜನಗಣತಿಯು ಅತ್ಯಗತ್ಯವಾಗಿದೆ ಎಂದು ಜೈರಾಮ್‌ ರಮೇಶ್ ತಿಳಿಸಿದ್ದಾರೆ.

ಬಿಜೆಪಿ ಮತ್ತು ಪ್ರಧಾನಿ ಜಾತಿಯ ಗಣತಿ ನಡೆಸದೆ ಓಡಿ ಹೋಗುತ್ತಿದ್ದಾರೆ ಎಂದು ಎಎಪಿಯ ಸಂಜಯ್ ಸಿಂಗ್ ಆರೋಪಿಸಿದರು.

ಬಿಜೆಪಿಯವರು ಯಾವಾಗಲೂ ಒಬಿಸಿ, ದಲಿತ, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳ ವಿರೋಧಿಗಳು. ಆದ್ದರಿಂದ ಜಾತಿಯ ಗಣತಿಯಿಂದ ದೂರ ಓಡುತ್ತಿದ್ದಾರೆ. ದೇಶಾದ್ಯಂತ ಜಾತಿಗಣತಿ ನಡೆಯಬೇಕು. ನೀವು ದೇಶದಲ್ಲಿ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರಿಗೆ ನ್ಯಾಯ ನೀಡಬೇಕಾದರೆ ಜಾತಿಗಣತಿ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಸಂಜಯ್ ಸಿಂಗ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...