ಪ್ರತಿಪಕ್ಷಗಳಿಗೆ ಸ್ವಂತ ಬಲವಿಲ್ಲ, ಹೀಗಾಗಿ ಮೋದಿ ಸೋಲಿಸಲು ಒಂದಾಗುತ್ತಿವೆ: ಬೊಮ್ಮಾಯಿ ಟೀಕೆ

Date:

Advertisements
  • ಜು. 18ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ
    • ಸಭೆಯಿಂದ ರಾಜಕೀಯ ಅರ್ಥ, ಲಾಭವಿಲ್ಲ: ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತು ಬಿಜೆಪಿಯನ್ನು ಸೋಲಿಸಿಬೇಕು ಎನ್ನುವ ಒಂದೇ ಕಾರಣಕ್ಕೆ ಪ್ರತಿಪಕ್ಷಗಳು ಒಂದಾಗುತ್ತಿವೆ. ಇದರ ಅರ್ಥ ಅವರಿಗೆ ಸ್ವಂತ ಬಲವಿಲ್ಲ ಎಂಬುದು ಬಹಳ ಸ್ಪಷ್ಟ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಒಂದಾಗಲು ಸಿದ್ಧತೆ ನಡೆಸಿದ್ದು, ಜುಲೈ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಸಭೆಯ ಜವಾಬ್ದಾರಿಯನ್ನು ಕಾಂಗ್ರೆಸ್‌ಗೆ ವಹಿಸಲಾಗಿದೆ. ಈ ವಿಚಾರವಾಗಿ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

“ಇಡೀ ಭಾರತದಲ್ಲಿ ಪ್ರತಿಪಕ್ಷಗಳು ಶಕ್ತಿಯುತವಾಗಿಲ್ಲ. ಪ್ರಾದೇಶಿಕ ಪಕ್ಷಗಳೇ ದೇಶದಲ್ಲಿ ಜಾಸ್ತಿ ಇದ್ದು, ಆಯಾ ರಾಜ್ಯದಲ್ಲಿ ಅವು ಪ್ರತಿಪಕ್ಷಗಳಾಗಿವೆ. ಹೀಗಾಗಿ ಪ್ರತಿಪಕ್ಷಗಳ ಒಕ್ಕೂಟ ರಚನೆ ಅಥವಾ ಸಭೆಯಿಂದ ಯಾವುದೇ ರೀತಿಯ ರಾಜಕೀಯ ಅರ್ಥ ಹಾಗೂ ಲಾಭವಿಲ್ಲ” ಎಂದರು.

Advertisements

“ಪ್ರತಿಪಕ್ಷಗಳಿಗೆ ನಿರ್ದಿಷ್ಟವಾದ ಕಾರ್ಯಕ್ರಮವಿಲ್ಲ. ಕೇವಲ ಮೋದಿ ಅವರನ್ನು ಸೋಲಿಸುವುದೇ ಅವರ ಮುಂದಿರುವ ಕಾರ್ಯತಂತ್ರ. ಮೋದಿ ಕಾಲದಲ್ಲಿ ನಮ್ಮ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ದೊಡ್ಡ ಪ್ರಗತಿ ಸಾಧಿಸಿದೆ. ಕೋವಿಡ್‌ ನಂತರ ವೇಗದಲ್ಲಿ ಆರ್ಥಿಕ ವೃದ್ಧಿಯಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿಯವರಿಗೆ ಮನ್ನಣೆ ಸಿಗುತ್ತಿದೆ” ಎಂದರು.

ಜೆಡಿಎಸ್‌ ವಿಲೀನ?

“ಬಿಜೆಪಿಯಲ್ಲಿ ಜೆಡಿಎಸ್‌ ವಿಲೀನವಾಗುತ್ತಾ ಅಥವಾ ಬೆಂಬಲ ಕೊಡುತ್ತಾ ಎಂಬ ವಿಚಾರ ವರಿಷ್ಠರು ನಿರ್ಧರಿಸುತ್ತಾರೆ. ಎಚ್‌ ಡಿ ಕುಮಾರಸ್ವಾಮಿ ಮತ್ತು ಎಚ್‌ ಡಿ ದೇವೇಗೌಡರೊಂದಿಗೆ ನಮ್ಮ ನಾಯಕರು ಚರ್ಚೆ ನಡೆಸಿದ್ದಾರೆ. ಜು.18ರ ನಂತರ ಪ್ರತಿಪಕ್ಷದ ನಾಯಕನ ಆಯ್ಕೆಯಾಗುವ ಸಾಧ್ಯತೆ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X