ಆಂಜನೇಯ ಜನ್ಮಭೂಮಿ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವುದು ಮುಂದಿನ ಗುರಿ: ಬಸವರಾಜ ಬೊಮ್ಮಾಯಿ

Date:

Advertisements

“ರಾಮಜನ್ಮ ಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ರಾಮನಿಗೂ ಕರ್ನಾಟಕಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಭೂಮಿಯಾದ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾಲಬ್ರೂಹಿ ಅತಿಥಿ ಗೃಹದ ಬಳಿ ಇರುವ ಮಾರುತಿ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

“ಭಾರತದ ಇತಿಹಾಸದಲ್ಲಿ ಇಂದು ಮಹತ್ವದ ಭಕ್ತಿ ಭಾವದ ದಿನ, ಐತಿಹಾಸಿಕ ದಿನ. ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆಯ ದಿನ. ಒಂದು ದೇಶದ ಪ್ರಜಾಪ್ರಭುತ್ವದಲ್ಲಿ ಅಂತಿಮ ನಿರ್ಣಯ ಜನರ ನಿರ್ಣಯ. ಎಲ್ಲಕ್ಕಿಂತ ದೊಡ್ಡ ಕೆಲಸ ಸರ್ಕಾರ ಮಾಡಬೇಕಾಗಿರುವುದು ಜನರ ಕೆಲಸ. ಈ ಕೆಲಸ ಪ್ರಧಾನಿ ನರೇಂದ್ರ ಮೋದಿ ಅವರಿಂದ ಆಗುತ್ತಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸು; ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್

“ಅತ್ಯಂತ ಶ್ರದ್ದಾ ಭಕ್ತಿಯಿಂದ ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿದೆ. ರಾಮ ಮಂದಿರಕ್ಕಾಗಿ ಹೋರಾಟ ಮಾಡಿದಂತಹ ಎಲ್ಲ ಮಹನೀಯರಿಗೆ ಕೋಟಿ ಕೋಟಿ ನಮನ ಸಲ್ಲಿಸುವೆ” ಎಂದು ಹೇಳಿದರು.

“ಆಂಜನೇಯ ಜನ್ಮಸ್ಥಳ ಆಂಜನಾದ್ರಿ ಕರ್ನಾಟಕದಲ್ಲೇ ಇದೆ. ಆಂಜನೇಯ ಇದ್ದರೆ ರಾಮ ಪರಿಪೂರ್ಣ. ಮುಂದಿನ ನಮ್ಮ ಗುರಿ ಆಂಜನೇಯ ಜನ್ಮ ಭೂಮಿ ಅಭಿವೃದ್ಧಿ ಮಾಡುವುದು ಮುಂದಿನ ದಿನಗಳಲ್ಲಿ ಆಂಜನೇಯ ಕ್ಷೇತ್ರ ಅಭಿವೃದ್ಧಿ ಮಾಡಬೇಕು ಅಂತ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ” ಎಂದು ತಿಳಿಸಿದರು.

“ರಾಮ ರಾಜ್ಯ ಸ್ಥಾಪನೆ ನಮ್ಮ ಮುಂದಿನ ಗುರಿ. ಇದು ಅಮೃತ ಘಳಿಗೆ. ಇಂತಹ ಐತಿಹಾಸಿಕ ಸಂದರ್ಭದಲ್ಲಿ ನಾವಿದ್ದೇವೆ ಎನ್ನುವುದು ನಮ್ಮ ಖುಷಿ. ಇಂಥ ಪವಿತ್ರವಾದ ದಿನ ನಾವು ರಾಜಕೀಯ ಬೆರೆಸಿ ಮಾತನಾಡುವುದಿಲ್ಲ” ಎಂದು ಬೊಮ್ಮಾಯಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X