ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

Date:

  • ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ
  • ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ

ಪಕ್ಷದೊಳಗಿನ ಕೆಲವರ ರಾಜಿ ರಾಜಕಾರಣ ಫಲವಾಗಿ ಬಿಜೆಪಿ ಅಧಿಕಾರ ಕಳೆದುಕೊಳ್ಳುವಂತಾಯ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಹೆಸರು ಹೇಳಲಿಚ್ಚಿಸದ ಕೆಲ ಮುಖಂಡರ ವಿರುದ್ದ ವಾಗ್ದಾಳಿ ನಡೆಸಿದರು.

ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ. ಅವರುಗಳು ಅಂತಹ ನಡೆ ಇಡದಿದ್ದಿದ್ದರೆ ನಾವಿಂದು ವಿಪಕ್ಷದಲ್ಲಿ ಕೂರಬೇಕಾಗಿರಲಿಲ್ಲ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮತ್ತೊಂದೆಡೆ ಇದೇ ರೀತಿಯ ಅಭಿಪ್ರಾಯವನ್ನು ವಲಸೆ ಬಿಜೆಪಿಗೆ, ಮಾಜಿ ಸಚಿವ ಎಂ ಟಿ ಬಿ ನಾಗರಾಜ್ ಕೂಡ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಸುಧಾಕರ್‌ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕೊಟ್ಟಿದ್ದರಿಂದ ನನ್ನನ್ನೂ ಒಳಗೊಂಡಂತೆ ಕೆಲವರ ಸೋಲಿಗೆ ಕಾರಣವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ನಲ್ಲಿದ್ದಾಗ ನಾನು ಮೂರು ಬಾರಿ ಗೆದ್ದಿದ್ದೇನೆ. ಬಿಜೆಪಿ ಸೇರಿ ಎರಡು ಬಾರಿ ಸ್ಪರ್ಧಿಸಿ ಎರಡೂ ಬಾರಿಯೂ ಸೋತಿದ್ದೇನೆ. ಸುಧಾಕರ್ ಚುನಾವಣೆಯಲ್ಲಿ ತಾನೂ ಸೋತ, ನಮ್ಮನ್ನೂ ಸೋಲಿಸಿದ. ಉಸ್ತುವಾರಿ ಸಚಿವ ಸ್ಥಾನವನ್ನು ಸುಧಾಕರ್ ಸರಿಯಾಗಿ ನಿಭಾಯಿಸಿಲ್ಲ.

ಈ ಸುದ್ದಿ ಓದಿದ್ದೀರಾ?:ಕುಡಿಯುವ ನೀರಿನ ಸಮಸ್ಯೆ; ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ಆತ ಎಂದೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಕಿವಿ ಮೇಲೆ ಹಾಕಿಕೊಳ್ಳುತ್ತಿರಲಿಲ್ಲ, ಹೀಗಾಗಿ ಆತನಿಂದಲೇ ನಾನು ಮತ್ತು ಚಿಂತಾಮಣಿ ಅಭ್ಯರ್ಥಿ ಸೋಲುವಂತಾಯ್ತು. ಇದಕ್ಕೆ ಸುಧಾಕರ್ ಕಾರಣ ಎಂದು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕೈಬಿಟ್ಟ 1,412 ವಾಹನಗಳ ಪೈಕಿ 918 ವಾಹನಗಳ ವಿಲೇವಾರಿ

ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ಪೊಲೀಸ್ ಠಾಣೆಗಳಲ್ಲಿ ರಚಿಸಲಾದ ವಿಶೇಷ ತಂಡಗಳು...

ಭ್ರಷ್ಟ ಸುಧಾಕರ್ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ: ಸಿಎಂ ಸಿದ್ದರಾಮಯ್ಯ

ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ...

ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ; ‘ಏನೇನೋ ಅಂದ್ಕೊಬೇಡಿ’ ಎಂದ ನಟ ದರ್ಶನ್

ಸದ್ಯ ಲೋಕಸಭಾ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಮಂಡ್ಯದ...

ಕರಾವಳಿಯಲ್ಲಿ ಹೊಸ ಸಂಚಲನ; ಕೋಮುವಾದದ ವಿರುದ್ಧ ಬ್ರಾಹ್ಮಣ ಸಮುದಾಯ

ಬ್ರಾಹ್ಮಣರೆಲ್ಲರೂ ಬಿಜೆಪಿಗರು ಮತ್ತು ಕೋಮುವಾದಿಗಳು ಎಂಬ ಹಣೆಪಟ್ಟಿಯ ವಿರುದ್ದ ಮುಖಂಡರು ಸಂದೇಶ...