ದೇಶಪ್ರೇಮಿ ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

Date:

ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆಂದು ಭರವಸೆ ನೀಡಿದ್ದರು. ಆದರೆ, ಉದ್ಯೋಗಗಳನ್ನು ಎಲ್ಲಿ ಸೃಷ್ಟಿಸಿದ್ದೀರಿ ಎಂದು ಹೇಳಿದರೆ, ಪಕೋಡಾ ಮಾರುವುದು ಉದ್ಯೋಗವೇ ಎಂದು ಹೇಳಿ, ಯುವಜನರನ್ನು ಕಡೆಗಣಿಸುವ ಮಾತನಾಡಿದ್ದಾರೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಸಂಚಾಲಕ ಸರೋವರ್ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೆವಿಎಸ್‌ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ದೇಶಪ್ರೇಮಿ ಯುವಜನರ ಸಮಾವೇಶ’ವನ್ನು ಮೋದಿ ಹೇಳಿದ್ದ ‘ಪಕೋಡಾ’ ಪ್ರದರ್ಶಿಸುವ ಮೂಲಕ ಬಹುಭಾಷಾ ನಟ ಪ್ರಕಾಶ್ ರಾಜ್ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಉದ್ಘಾಟನೆ ವೇಳೆ ಮಾತನಾಡಿದ ಸರೋವರ್, “ಯುವಜನರಿಗೆ ಉದ್ಯೋಗ ಎಲ್ಲಿ ಅಂತ ಹೇಳಿದರೆ, ಪಕೋಡಾ ಮಾರುವುದು ಉದ್ಯೋಗವೆಂದು ಮೋದಿ ಹೇಳಿದ್ದಾರೆ. ಪಕೋಡಾ ಮಾರುವುದು ಅವಮಾನವಲ್ಲ. ಆದರೆ, ಪಕೋಡಾ ಮಾರಲು ಕೇಂದ್ರ ಸರ್ಕಾರ ಯಾವ ಯೋಜನೆಯನ್ನೂ ಕೊಟ್ಟಿಲ್ಲ. ಪಕೊಡಾ ಮಾರಿಯೇ ಜೀವನ ನಡೆಸೋಣ ಎಂದರೆ, ಅಡುಗೆ ಅನಿಲ, ಅಡುಗೆ ಎಣ್ಣೆಯ ಬೆಲೆಯನ್ನೂ ಪ್ರಧಾನಿ ಮೋದಿ ಸರ್ಕಾರ ಏರಿಸಿದೆ. ಪಕೋಡಾ ಮಾರುವುದೂ ಕಷ್ಟವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆಂದು 2014ರ ಚುನಾವಣೆಯಲ್ಲಿ ಹೇಳಿದ್ದರು. ಈಗ ಅವರು ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. 10 ವರ್ಷದಲ್ಲಿ ಸೃಷ್ಟಿಯಾಗಬೇಕಿದ್ದ 20 ಕೋಟಿ ಉದ್ಯೋಗಗಳು ಎಲ್ಲಿವೆ. ಆ 20 ಕೋಟಿ ಉದ್ಯೋಗಗಳು ನಮ್ಮ ಕಣ್ಣಿಗೆ ಕಾಣುತ್ತಿಲ್ಲ ಯಾಕೆ” ಎಂದು ಸರೋವರ್ ಪ್ರಶ್ನಿಸಿದರು.

“ಪದವಿ, ಸ್ನಾತಕೋತ್ತರ ಪದವಿ, ಡಿಪ್ಲಮಾ, ಎಂಜಿನಿಯರಿಂಗ್, ಎಂಬಿಬಿಎಸ್‌ ಸೇರಿದಂತೆ ನಾನಾ ವೃತ್ತಿಪರ ಕೋರ್ಸ್‌ಗಳಲ್ಲಿ ಶಿಕ್ಷಣ ಪಡೆದ ನಮಗೆ ಮೋದಿ ಅವರು ಪಕೋಡಾ ಮಾರಲು ಹೇಳಿದ್ದೇಕೆ? ಸರ್ಕಾರ ಯುವಜನರಿಗೆ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮೋದಿ ಆಡಳಿತದಲ್ಲಿ 60 ಲಕ್ಷ ಸರ್ಕಾರ ಹುದ್ದೆಗಳು ಖಾಲಿ ಉಳಿದಿವೆ. ಅವುಗಳನ್ನು ಭರ್ತಿ ಮಾಡಲು ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ದೇಶದಲ್ಲಿ 3.8 ಕೋಟಿ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಮೋದಿ ಆಡಳಿತದಲ್ಲಿ ಕಳೆದ 45 ವರ್ಷಗಳಲ್ಲಿಯೂ ಕಂಡರಿಯದಷ್ಟು ಪ್ರಮಾಣದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಯುವಜನರಿಗೆ ಉದ್ಯೋಗ ನೀಡುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...