ಮೇಘಾಲಯ | ಉದ್ಘಾಟನೆಗೊಂಡ ಆರು ತಿಂಗಳಲ್ಲೇ ಪಿ.ಎ ಸಂಗ್ಮಾ ಫುಟ್ಬಾಲ್‌ ಕ್ರೀಡಾಂಗಣ ತಡೆಗೋಡೆ ಕುಸಿತ

Date:

Advertisements
  • ₹127 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಫುಟ್ಬಾಲ್‌ ಕ್ರೀಡಾಂಗಣ
  • ಕಳೆದ ವರ್ಷ ನಿರ್ಮಾಣ ಹಂತದಲ್ಲಿದ್ದ ರಾಜ್ಯ ವಿಧಾನಸಭೆ ಭಾಗ ಕುಸಿತ

ಮೇಘಾಲಯದ ತುರಾದಲ್ಲಿರುವ ಪಿ.ಎ ಸಂಗ್ಮಾ ಫುಟ್ಬಾಲ್‌ ಕ್ರೀಡಾಂಗಣ ತಡೆಗೋಡೆ ಕುಸಿದಿದೆ ಎಂದು ಅಧಿಕಾರಿಗಳು ಶುಕ್ರವಾರ (ಜೂನ್‌ 23) ಹೇಳಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಫುಟ್ಬಾಲ್‌ ಕ್ರೀಡಾಂಗಣವನ್ನು ಮುಖ್ಯಮಂತ್ರಿ ಕಾನ್ರಾಡ್‌ ಕೆ.ಸಂಗ್ಮಾ ಅವರು ಉದ್ಘಾಟಿಸಿದ್ದರು. ಇದಾದ ಆರು ತಿಂಗಳ ನಂತರ ಕ್ರೀಡಾಂಗಣದ ಒಂದು ಭಾಗ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫುಟ್ಬಾಲ್‌ ಕ್ರೀಡಾಂಗಣ ಭಾಗ ಕುಸಿದಿರುವ ಘಟನೆ ಗುರುವಾರ (ಜೂನ್ 22) ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Advertisements

ಫುಟ್ಬಾಲ್ ಕ್ರೀಡಾಂಗಣವನ್ನು ರಾಜ್ಯ ಸರ್ಕಾರ ಸುಮಾರು ₹127 ಕೋಟಿ ವೆಚ್ಚದಲ್ಲಿ ನಿರ್ಮಿಸಿದೆ. ಇದು ಪಿ.ಎ ಸಂಗ್ಮಾ ಕ್ರೀಡಾ ಸಂಕೀರ್ಣದ ಭಾಗವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಕ್ರೀಡಾ ಸಂಕೀರ್ಣದ ಭಾಗವಾಗಿರುವ ಫುಟ್ಬಾಲ್ ಕ್ರೀಡಾಂಗಣದ ಬಾಹ್ಯ ತಡೆಗೋಡೆಯ ಒಂದು ಭಾಗ ಕುಸಿದಿದೆ. ತುರಾ ಮತ್ತು ವೆಸ್ಟ್ ಗರೋ ಹಿಲ್ಸ್ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಹಾನಿ ಉಂಟಾಗಿದೆ. ಪರಿಣಾಮ ತಡೆಗೋಡೆ ಕುಸಿದಿರಬಹುದು” ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಕೇಂದ್ರದ ಸುಗ್ರೀವಾಜ್ಞೆ ವಿರುದ್ಧದ ಅಭಿಯಾನ ಬೆಂಬಲಿಸದಿದ್ದರೆ ವಿಪಕ್ಷಗಳ ಸಭೆಗೆ ಗೈರು: ಕಾಂಗ್ರೆಸ್‌ಗೆ ಅರವಿಂದ್‌ ಕೇಜ್ರಿವಾಲ್‌ ಎಚ್ಚರಿಕೆ

“ಪಿ.ಎ ಸಂಗ್ಮಾ ಫುಟ್ಬಾಲ್‌ ಕ್ರೀಡಾಂಗಣ ತಡೆಗೋಡೆಯ ಭಾಗ ಕುಸಿದಿರುವುದಕ್ಕೆ ಕಾರಣಗಳನ್ನು ಪರಿಶೀಲಿಸಲಾಗುತ್ತಿದೆ. ಪಶ್ಚಿಮ ಗರೋ ಹಿಲ್ಸ್‌ನ ಉಪ ಆಯುಕ್ತರು ಘಟನೆಯ ಬಗ್ಗೆ ಅಧಿಕೃತ ತನಿಖೆಯನ್ನು ಆರಂಭಿಸಿದ್ದಾರೆ. ಸಂಪೂರ್ಣ ತನಿಖೆಯ ನಂತರ ಫುಟ್ಬಾಲ್‌ ಕ್ರೀಡಾಂಗಣದ ತಡೆಗೋಡೆ ಕುಸಿತದ ಬಗ್ಗೆ ಸೂಕ್ತ ಚಿತ್ರಣ ದೊರೆಯುತ್ತದೆ. ಇದರ ಹಿಂದೆ ಕೈವಾಡವಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು. ಕುಸಿದಿರುವ ಭಾಗದ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು” ಎಂದು ಹೇಳಿಕೆ ತಿಳಿಸಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಘಾಲಯ ವಿಧಾನಸಭೆ ಕಟ್ಟಡದ ಒಂದು ಭಾಗ ಕುಸಿದಿತ್ತು. ₹177.7 ಕೋಟಿ ವೆಚ್ಚದ ಕಟ್ಟಡದ 70 ಟನ್ ತೂಕದ ಗುಮ್ಮಟ ಕುಸಿದು ಬಿದ್ದಿತ್ತು. ಇದು ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ರಾಜಕೀಯ ಕೋಲಾಹಲ ಉಂಟು ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X