ಪಾಕ್ ಪರ ಘೋಷಣೆ ಆರೋಪ: ಧ್ವನಿ ಪರೀಕ್ಷೆಗಾಗಿ ಮೊಹಮ್ಮದ್ ಶಫಿಯನ್ನು ಕರೆಸಿಕೊಂಡ ಪೊಲೀಸರು

Date:

Advertisements

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಧ್ವನಿ ಪರೀಕ್ಷೆಗಾಗಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಮೊಹಮ್ಮದ್ ಶಫಿಯನ್ನು ಕರೆಸಿಕೊಂಡಿದ್ದಾರೆ.

ಎಫ್‌ಎಸ್‌ಎಲ್ ತಂಡದ ಅಧಿಕಾರಿಗಳು ಮೊಹಮ್ಮದ್ ಶಫಿ ನಾಶಿಪುಡಿಯವರನ್ನು ಹಾವೇರಿಯಿಂದ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿರುವ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ. ಬುಧವಾರ ತಡ ರಾತ್ರಿಯೇ ಶಫಿಯನ್ನು ಬೆಂಗಳೂರಿಗೆ ತರಲಾಗಿದ್ದು ಧ್ವನಿಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಈ ಕುರಿತು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಸಹ ಮಾಹಿತಿ ನೀಡಿದ್ದು,’ ಬುಧವಾರ ರಾತ್ರಿ ವಿಧಾನಸೌಧ ಪೊಲೀಸರು ಹಾವೇರಿಗೆ ಬಂದಿದ್ದರು. ಶಫಿ ನಾಶಿಪುಡಿ ಎಂಬ ವ್ಯಕ್ತಿಯನ್ನು ವಿಚಾರಣೆ ಮತ್ತು ಧ್ವನಿ ಪರೀಕ್ಷೆಗಾಗಿ ಕರೆದುಕೊಂಡು ಹೋಗಿದ್ದಾರೆ. ಆರೋಪಿಯು ಯಾವುದೇ ಸಂಘಟನೆಗೆ ಸೇರಿದ ಮಾಹಿತಿ ಇಲ್ಲ’ ಎಂದು ತಿಳಿಸಿದ್ದಾರೆ.

Advertisements

ಮೊಹಮ್ಮದ್ ಶಫಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ನೀಡಿ ಕ್ರಮಕ್ಕೆ ಅಗ್ರಹಿಸಿದ್ದರು. ಈ ಆರೋಪದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮೊಹಮ್ಮದ್ ಶಫಿ, ಈ ಆರೋಪವನ್ನು ಅಲ್ಲಗಳೆದಿದ್ದರು. ನಾನು ನಾಸಿರ್ ಸಾಬ್ ಜಿಂದಾಬಾದ್ ಎಂದು ಕೂಗಿದ್ದೇನೆ. ತಾಯಿ ಆಣೆಗೂ ದೇಶದ್ರೋಹಿ ಘೋಷಣೆ ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಶಫಿ ನಾಶಿಪುಡಿ ಯಾರು?

ಕಾಂಗ್ರೆಸ್ ಪಕ್ಷದ ನೂತನ ರಾಜ್ಯಸಭಾ ಸಂಸದ ನಾಸಿರ್ ಹುಸೇನ್ ಬೆಂಬಲಿಗ ಮೊಹಮ್ಮದ್ ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿಯವರು. ಮೆಣಸಿನಕಾಯಿ ವ್ಯಾಪಾರಸ್ಥರು. ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಇದೇ ವ್ಯಕ್ತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಇದನ್ನೇ ಬಿಜೆಪಿ ನಾಯಕರು ವಿವಾದವನ್ನಾಗಿಸಿದ್ದಾರೆ. ಆದರೆ, ಕೆಲವೊಂದು ವಿಡಿಯೋಗಳಲ್ಲಿ ನಾಸಿರ್ ಸಾಬ್ ಜಿಂದಾಬಾದ್ ಎಂದು ಕೂಗಿರುವುದು ಸ್ಪಷ್ಟವಾಗಿ ತಿಳಿದುಬಂದಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X