ವೀರಶೈವ – ಲಿಂಗಾಯತ ಅಧಿವೇಶನ ನಿರ್ಣಯಕ್ಕೆ ಪಂಚಮಸಾಲಿ ಶ್ರೀ, ಯತ್ನಾಳ್‌ ವಿರೋಧ

Date:

Advertisements
  • ಇದು ಬಿ. ಎಸ್‌. ವೈ ಕುತಂತ್ರ ಎಂದು ಆರೋಪಿಸಿದ ಯತ್ನಾಳ್‌!
  • ನಮ್ಮ ವಿಚಾರದಲ್ಲಿ ಮೂಗು ತೂರಿಸಬೇಡಿ: ಮೃತ್ಯುಂಜಯ ಶ್ರೀ

ಉಪಜಾತಿ ಬರೆಸಬೇಡಿ ಎಂದು ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲಂನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂಬ ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ ಎಂಬುದನ್ನು ಬಹಿರಂಗವಾಗಿ ಹೇಳಿದ್ದಾರೆ.

“ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲಂನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂದು ನಿರ್ಣಯ ಮಾಡಿರುವುದನ್ನು ನಾವು ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ. ವೀರಶೈವ ಮಹಾಸಭಾದವರು ಆಯಾ ಉಪಜಾತಿಗಳ ಸಾಮಾಜಿಕ ಸೌಲಭ್ಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಮೂಗು ತೂರಿಸಬಾರದು” ಎಂದು ಬಸವಜಯಮೃತ್ಯುಂಜಯ ಸ್ವಾಮೀಜಿ ಅವರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Advertisements

“ವೀರಶೈವ ಮಹಾಸಭಾ ಅಧಿವೇಶನ ನಿರ್ಣಯ ಸರಿಯಿಲ್ಲ. ಈ ನಿರ್ಣಯವನ್ನು ಪುನರ್ ಪರಿಶೀಲಿಸಬೇಕೆಂಬ ಸಲಹೆಯ‌ನ್ನು ಮಹಾಸಭೆಗೆ ಕೊಡಲು ಇಚ್ಛಿಸುತ್ತೇನೆ” ಎಂದರು.

“ಜಾತಿಗಣತಿ ವೇಳೆ ಉಪಜಾತಿ ಬರೆಸಬೇಕೆಂದು ಈಗಾಗಲೇ ನಮ್ಮ ಸಮಾಜ ಬಾಂಧವರಿಗೆ ನಾವು ಕರೆ ಕೊಟ್ಟಿದ್ದೇವೆ. ಉಪಜಾತಿ ಕಾಲಂನಲ್ಲಿ ಪಂಚಮಸಾಲಿ ಅಂತಾನೆ ಬರೆಸಿ ಅಂತ ಹೇಳಿದ್ದೇವೆ. ಕಾರಣ ಅನೇಕ ಒಳಪಂಗಡದವರು ಈಗಾಗಲೇ ‌ಮೀಸಲಾತಿ ಪಡೆದುಕೊಂಡಿದ್ದಾರೆ” ಎಂದು ಹೇಳೀದರು.

“ಉಳಿದವರು ಏನು ಬರೆಸುತ್ತಾರೋ ಬಿಡ್ತಾರೊ ಅವರಿಗೆ ಬಿಟ್ಟಿದ್ದು. ಆದರೆ ನಾವು ಮಾತ್ರ (ಪಂಚಮಸಾಲಿಗಳು) ನಮ್ಮ ಸಮಾಜದವರಿಗೆ ಪಂಚಮಸಾಲಿ ಅಂತಾನೆ ಬರೆಸಲು ಸಂದೇಶ ಕೊಟ್ಟಿದ್ದೇವೆ ಎಂದು ಸ್ವಾಮೀಜಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಇದು ಬಿ. ಎಸ್‌. ವೈ ಕುತಂತ್ರ: ಯತ್ನಾಳ್‌!

ಉಪಜಾತಿ ಬರೆಸಬೇಡಿ ಎಂಬ ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ನನ್ನ ವಿರೋಧವಿದೆ. ಅಧಿವೇಶನದಲ್ಲಿ ಯಾರು ಇದ್ದರು? ಅದೇ ಬಿಎಸ್‌ವೈ! ಅಂದರೆ, ಬಿ-ಭಿಮಣ್ಣ ಖಂಡ್ರೆ, ಎಸ್-ಶಾಮನೂರು, ವೈ-ಯಡಿಯೂರಪ್ಪ. ಇವರೆಲ್ಲ ಎಲ್ಲಿ ಉಪಜಾತಿ ಬರೆಸಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ” ಎಂದು ಬಸನಗೌಡ ಪಾಟೀಲ ಆಗ್ರಹಿಸಿದರು.

ವಿಜಯಪುರದಲ್ಲಿ ಮಾತನಾಡಿದ ಅವರು, “ವೀರಶೈವ ಮಹಾಸಭಾ ಅಧಿವೇಶನ ನಿರ್ಣಯ ಪಾಲಿಸಿದರೆ ನಮ್ಮ ಸಮುದಾಯಕ್ಕೆ ಯಾವುದೇ ಯೋಜನೆಗಳು ಸಿಗುವುದಿಲ್ಲ. ಕೆಲವೇ ದಿನಗಳಲ್ಲಿ ನಮ್ಮ ಸ್ವಾಮೀಜಿ ನೇತೃತ್ವದಲ್ಲಿ ಸಭೆ ಕರೆದು ನಾವೂ ಕೂಡ ನಿರ್ಣಯ ಮಂಡಿಸುತ್ತೇವೆ. ಹಿಂದೂ ಗಾಣಿಗ, ಹಿಂದೂ ಪಂಚಮಸಾಲಿ, ಹಿಂದೂ ಬಣಜಿಗ… ಹೀಗೆ ಸೇರಿಸಿದರೆ ನಮಗೂ ಲಾಭ ಸಿಗುತ್ತದೆ. ಇವರ ಮಾತು ಕೇಳಿಕೊಂಡು ಸುಮ್ಮನೇ ಕೂರಲ್ಲ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X