ನರೇಗಾದಲ್ಲಿ ಪಂಚಾಯತ್ ರಾಜ್ ಇಲಾಖೆ ದೇಶದಲ್ಲಿ ನಂಬರ್ ಒನ್ ಸ್ಥಾನ ಪಡೆದಿದೆ : ಸಿಎಂ ಬೊಮ್ಮಾಯಿ

Date:

  • ಗಾಂಧಿ ಗ್ರಾಮ ಪುರಸ್ಕಾರ, ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದ ಮುಖ್ಯಮಂತ್ರಿ
  • ‘ನರೇಗಾ ಅರ್ಥಪೂರ್ಣವಾಗಿ ಅನುಷ್ಠಾನಕ್ಕೆ ತರಲು ಕಾನೂನಿಗೆ ತಿದ್ದುಪಡಿ ತರಲಾಗುವುದು’

ನರೇಗಾದಲ್ಲಿ ಕರ್ನಾಟಕದ ಪಂಚಾಯತ್ ರಾಜ್ ಇಲಾಖೆ ಅತ್ಯುತ್ತಮ ಕೆಲಸ ಮಾಡಿದ್ದು ದೇಶದಲ್ಲಿಯೇ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಶುಕ್ರವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ 2019-2020, 2020-2021 ಹಾಗೂ 2021-2022ನೇ ಸಾಲಿನ ʼಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭʼ ಹಾಗೂ ಪಂಚತಂತ್ರ 2.0 ಬಾಪೂಜಿ ಸೇವಾ ಕೇಂದ್ರ ತಂತ್ರಾಂಶ ತೆರಿಗೆ ಸಂಗ್ರಹದ PoS ಉಪಕರಣಗಳ ಲೋಕಾರ್ಪಣೆ ಹಾಗೂ ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

“ನರೇಗಾದಿಂದ ಸಾಕಷ್ಟು ಆಸ್ತಿ ನಿರ್ಮಾಣವಾಗಿದೆ. ಸಾಕಷ್ಟು ಜನರಿಗೆ ಕೆಲಸ ದೊರೆತಿದೆ. ಇದನ್ನು ಅರ್ಥಪೂರ್ಣವಾಗಿ ಅನುಷ್ಠಾನಕ್ಕೆ ತರಲು ಕಾನೂನಿನಲ್ಲಿ ಕೆಲವು ಬದಲಾವಣೆ ತರಬೇಕಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಶಾಲೆ, ಆಸ್ಪತ್ರೆಗಳಿಗೆ ನರೇಗಾ ಬಳಕೆ ಅಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸಚಿವರ ಬಳಿ ಮಾತನಾಡಿದ್ದು, ಶೀಘ್ರದಲ್ಲಿಯೇ ಬದಲಾವಣೆ ನಿರೀಕ್ಷೆ ಮಾಡುತ್ತಿದ್ದೇವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರತಿ ಗ್ರಾಮ ಪಂಚಾಯಿತಿಗಳು ಆಸ್ತಿ ನಿರ್ವಹಣೆ ಮಾಡುವ ಸಲುವಾಗಿ ದುಪ್ಪಟ್ಟು ಅನುದಾನ ನೀಡಲಾಗುತ್ತಿದೆ. ರಾಜಕೀಯ ವಿಕೇಂದ್ರೀಕರಣದ ಜೊತೆಗೆ ಆರ್ಥಿಕ ವಿಕೇಂದ್ರೀಕರಣವನ್ನೂ ಮಾಡಲಾಗುತ್ತಿದೆ” ಎಂದರು.

“ಅಭಿವೃದ್ಧಿಗಾಗಿ ಜನ ಓಡಾಡುವಂತಾಗಬಾರದು. ಜನರಿದ್ದಲ್ಲಿ ಆಡಳಿತ, ಅಭಿವೃದ್ಧಿಯಾಗಬೇಕು. ಬಾಪೂಜಿ ಕೇಂದ್ರದ ತಂತ್ರಾಂಶಗಳ ಮೂಲಕ ಇನ್ನಷ್ಟು ವೇಗವಾಗಿ ಕೆಲಸಗಳನ್ನು ಮಾಡಲು ಅನುಕೂಲವಾಗಲಿದೆ. ಇದರ ಜೊತೆಗೆ ಸೇವಾ ಭತ್ಯೆಗಳನ್ನು ಒಂದು ಸಾವಿರದಿಂದ 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅಧ್ಯಕ್ಷರಿಗೆ ಆರು ಸಾವಿರ ದೊರೆಯುವಂತೆ ಮಾಡಲಾಗಿದೆ” ಎಂದು ಹೇಳಿದರು.

“ಗ್ರಾಮೀಣಾಭಿವೃದ್ಧಿ ಈ ದೇಶದ ಸಮಗ್ರ ಅಭಿವೃದ್ಧಿಯ ಮೂಲ. ಅಬ್ದುಲ್ ನಜೀರ್ ಸಾಬ್ ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಹರಿಕಾರರು. ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವಧಿಯಲ್ಲಿ 73ನೇ ತಿದ್ದುಪಡಿ ಮೂಲಕ ಪಂಚಾಯತ್ ರಾಜ್‌ ವ್ಯವಸ್ಥೆ ಜಾರಿಗೆ ತರಲಾಯಿತು” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕೋಮುವಾದಿ ಶಕ್ತಿ ಸೋಲಿಸಿ, ಸಂವಿಧಾನ ಉಳಿಸಿ: ಸುಹೇಲ್ ಅಹಮದ್

ಸ್ವಾತಂತ್ರ್ಯ ಭಾರತದಲ್ಲಿ ಇಂದಿನ ಲೋಕಸಭಾ ಚುನಾವಣೆ ಐತಿಹಾಸಿಕವಾದದ್ದು ಯಾಕೆ ಅಂದ್ರೆ ಪ್ರಜಾಪ್ರಭುತ್ವ...

ಯಾದಗಿರಿ | ರಾಕೇಶ ಹತ್ಯೆ ಖಂಡಿಸಿ ಮಾದಿಗ ಸಮಾಜದ ಪ್ರತಿಭಟನೆ

ದಲಿತ ಯುವಕ ರಾಕೇಶ ಕೊಲೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ಮಾದಿಗ ಸಮಾಜ...

ಶಿವಮೊಗ್ಗ | ಕಾಂಗ್ರೆಸ್‌ ಮುಖಂಡರ ಮನೆ ಮನೆ ಪ್ರಚಾರ; ಕಾರ್ಡ್‌ ಹಂಚಿ ಮತಯಾಚನೆ

ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ...

ತುಮಕೂರು | ನಟಿ ಶೃತಿ ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಆಗ್ರಹ

ಬಿಜೆಪಿ ಪಕ್ಷದ ಪ್ರಚಾರಕಿ ನಟಿ ಶ್ರುತಿ ಅವರ ಫ್ರಿ ಬಸ್ ಕುರಿತ...