ಸಂಸತ್ ಭದ್ರತಾ ಲೋಪ | ವಿಪಕ್ಷಗಳಿಂದ ಗದ್ದಲ; ಉಭಯ ಸದನ ಮುಂದೂಡಿಕೆ; ಏಳು ಭದ್ರತಾ ಸಿಬ್ಬಂದಿ ಅಮಾನತು

Date:

Advertisements

‍ನಿನ್ನೆ ಲೋಕಸಭೆಯೊಳಗೆ ಇಬ್ಬರು ಯುವಕರು ಕಲರ್ ಸ್ಮೋಕ್ ಹಿಡಿದುಕೊಂಡು ನುಗ್ಗಿ ಭದ್ರತಾ ಲೋಪಗೊಂಡ ಘಟನೆಗೆ ಸಂಬಂಧಿಸಿದಂತೆ ವಿಪಕ್ಷಗಳು ಉನ್ನತ ಮಟ್ಟಕ್ಕೆ ತನಿಖೆಗೆ ಹಾಗೂ ಗೃಹ ಸಚಿವ, ಪ್ರಧಾನಿ ಸದನಕ್ಕೆ ಆಗಮಿಸಿ ವಿವರಿಸುವಂತೆ ಆಗ್ರಹಿಸಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿಪಕ್ಷಗಳು ಸದನದಲ್ಲಿ ಗದ್ದಲ ಎಬ್ಬಿಸಿದೆ.

ಉಭಯ ಸದನಗಳಲ್ಲಿ ಸದನ ಆರಂಭವಾಗುತ್ತಿದ್ದಂತೆಯೇ ಘೋಷಣೆಗಳನ್ನು ಕೂಗಿದ ವಿಪಕ್ಷಗಳ ಸದಸ್ಯರು, ಇಷ್ಟು ದೊಡ್ಡ ಭದ್ರತಾ ಲೋಪವಾಗಿದ್ದರೂ ಕೇಂದ್ರ ಸರ್ಕಾರ ಚರ್ಚೆಗೆ ಸಿದ್ದವಾಗಿಲ್ಲ. ಚರ್ಚೆ ನಡೆಸುವಂತೆ ಪಟ್ಟು ಹಿಡಿದರು.

ಲೋಕಸಭೆಯಲ್ಲಿ ಇದಕ್ಕೆ ಉತ್ತರಿಸಿದ ಸ್ಫೀಕರ್ ಓಂ ಪ್ರಕಾಶ್ ಬಿರ್ಲಾ, “ಲೋಕಸಭೆ ಭದ್ರತಾ ಲೋಪ ಘಟನೆಯಿಂದ ನಾವೆಲ್ಲರೂ ಚಿಂತಿತರಾಗಿದ್ದೇವೆ. ಸಂಸತ್ತಿನ ಭದ್ರತೆಯ ಜವಾಬ್ದಾರಿ ಸಂಸತ್ತಿನ ಕಾರ್ಯದರ್ಶಿಯದ್ದಾಗಿದೆ. ನಾವು ಘಟನೆಯ ಬಗ್ಗೆ ಚರ್ಚಿಸುತ್ತೇವೆ” ಎಂದು ಹೇಳಿದರು.

Advertisements

ಇದಕ್ಕೆ ಒಪ್ಪದೇ ಮತ್ತೆ ಗದ್ದಲ ಎಬ್ಬಿಸಿದ್ದರಿಂದ ಅನಿವಾರ್ಯವಾಗಿ ಮಧ್ಯಾಹ್ನ 2 ಗಂಟೆಗೆ ಮುಂದೂಡಿದರೆ, ರಾಜ್ಯಸಭೆಯನ್ನು ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ತಮ್ಮ ಕಚೇರಿಗೆ ಆಗಮಿನಿಸುವಂತೆ ಪ್ರತಿಪಕ್ಷ ನಾಯಕರಿಗೆ ತಿಳಿಸಿದರು.

ಸಭೆ ನಡೆಸಿದ ಇಂಡಿಯಾ ಮೈತ್ರಿಕೂಟ

ಸಂಸತ್ತಿನ ಭದ್ರತೆಯಲ್ಲಿನ ಉಲ್ಲಂಘನೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಇಂಡಿಯಾ ಮೈತ್ರಿಕೂಟ, ಉಭಯ ಸದನಗಳಲ್ಲಿ ಚರ್ಚಿಸುವ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಹಲವು ಕಾಂಗ್ರೆಸ್ ಸಂಸದರು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸದನದ ಇತರ ಎಲ್ಲ ಕಲಾಪಗಳನ್ನು ಬದಿಗಿಟ್ಟು ಚರ್ಚಿಸಲು ಮುಂದೂಡುವಂತೆ ನೋಟಿಸ್ ನೀಡಿದ್ದಾರೆ. ಅಲ್ಲದೇ, ಭದ್ರತಾ ವಿಷಯದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ಇಂಡಿಯಾ ಮೈತ್ರಿಕೂಟ ಯೋಚಿಸಿರುವುದಾಗಿ ವರದಿಯಾಗಿದೆ.

ಏಳು ಮಂದಿ ಭದ್ರತಾ ಸಿಬ್ಬಂದಿ ಅಮಾನತು

ಲೋಕಸಭೆಯಲ್ಲಿ ಗಂಭೀರ ಭದ್ರತಾ ಲೋಪಗೊಂಡ ಘಟನೆಗೆ ಸಂಬಂಧಿಸಿದಂತೆ ಲೋಕಸಭೆಯ ಸಚಿವಾಲಯವು ಏಳು ಮಂದಿ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಿದೆ.

ಯುಎಪಿಎಯಡಿ ಪ್ರಕರಣ ದಾಖಲು

ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಆರು ಮಂದಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭೆಯ ಒಳಗೆ ನುಗ್ಗಿದ್ದ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಹಾಗೂ ಸಂಸತ್ತಿನ ಆವರಣದ ಹೊರಗೆ ಪ್ರತಿಭಟಿಸಿದ್ದ ಅಮೋಲ್ ಶಿಂಧೆ ಮತ್ತು ನೀಲಂ ದೇವಿ ಸಹಿತ ತಪ್ಪಿಸಿಕೊಂಡಿದ್ದ ಇಬ್ಬರು ಸೇರಿ ಒಟ್ಟು ಆರು ಮಂದಿಯ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X