ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

Date:

“2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ, ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸೋಲು ರಾಜ್ಯದ ಕೆಲವು ಹಿರಿಯ ನಾಯಕರನ್ನು ಪಕ್ಷದ ಭವಿಷ್ಯದ ಬಗ್ಗೆ ಚಿಂತಿಸುವಂತೆ ಮಾಡಿದೆ” ಎಂದು ಬದ್ಲಾಪುರ ಬಿಜೆಪಿ ಶಾಸಕ ರಮೇಶ್ ಚಂದ್ರ ಮಿಶ್ರಾ ಹೇಳಿದ್ದಾರೆ.

ಎರಡು ಬಾರಿ ಬಿಜೆಪಿ ಶಾಸಕರಾಗಿರುವ ರಮೇಶ್ ಚಂದ್ರ ಮಿಶ್ರಾ ಅವರು ಈ ಬಗ್ಗೆ ವಿಡಿಯೋ ಒಂದರಲ್ಲಿ ಮಾತನಾಡಿದ್ದು ಸದ್ಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಕಾಮೆಂಟ್ ಮಾಡಿರುವ ನೆಟ್ಟಿಗರು “ಹೌದು ಬಿಜೆಪಿ ಶಾಸಕ ಹೇಳುತ್ತಿರುವುದು ಸರಿಯೇ ಇದೆ. ಬಿಜೆಪಿ ನಾಯಕರು ಸ್ಥಳೀಯವಾಗಿ ಯಾವುದೇ ಕಾರ್ಯ ಮಾಡುತ್ತಿಲ್ಲ” ಎಂದಿದ್ದಾರೆ.

“ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸದ್ಯದ ಸ್ಥಿತಿ ಅತಂತ್ರವಾಗಿದೆ. 2027ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದಿಂದ ಕೆಳಗಿಳಿಯುವ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ರಾಜ್ಯದಲ್ಲಿ ನಮ್ಮ ಪಕ್ಷವನ್ನು ಬಲಪಡಿಸಲು ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ” ಎಂದು ವಿಡಿಯೋದಲ್ಲಿ ಬಿಜೆಪಿ ಶಾಸಕ ಹೇಳಿರುವುದು ಕಂಡು ಬಂದಿದೆ.

ಇದನ್ನು ಓದಿದ್ದೀರಾ?  Viral video: ಅಮಿತ್ ಶಾ ವಿರುದ್ಧ ಸಿಡಿಮಿಡಿಗೊಂಡ ಯುಪಿ ಬಿಜೆಪಿ ಕಾರ್ಯಕರ್ತ: ವಿಡಿಯೋ ವೈರಲ್!

ಇನ್ನು ಇದೇ ವಿಡಿಯೋದಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ರಾಜಕೀಯ ಭಾಷಣಗಳ ಜನಪ್ರಿಯತೆ ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಮಿಶ್ರಾ, “ಹಿಂದುಳಿದ ವರ್ಗಗಳು ಅಥವಾ ಒಬಿಸಿಗಳು, ದಲಿತರು ಮತ್ತು ಅಲ್ಪಸಂಖ್ಯಾತರ ರಾಜಕೀಯ ಭಾಷಣದಲ್ಲಿ ಪ್ರಾಬಲ್ಯ ಸಾಧಿಸಿದ ರೀತಿ ಮತ್ತು ಸಮಾಜವಾದಿ ಪಕ್ಷವು ಸೃಷ್ಟಿಸಿದ ದಾರಿತಪ್ಪಿಸುವ ವಾತಾವರಣವನ್ನು ಪರಿಗಣಿಸಿದರೆ ನಮ್ಮ ಪಕ್ಷದ ಪರಿಸ್ಥಿತಿಯು ರಾಜ್ಯದಲ್ಲಿ ಅಷ್ಟು ಪ್ರಬಲವಾಗಿಲ್ಲ ಎಂದು ತೋರುತ್ತದೆ” ಎಂದು ಅಭಿಪ್ರಾಯಿಸಿದರು.

“ಪ್ರತಿಯೊಬ್ಬ ಕಾರ್ಯಕರ್ತರು ಬಿಜೆಪಿ ಸಲುವಾಗಿ ಅವರ / ಅವಳ ಆತ್ಮ ಮತ್ತು ಹೃದಯಪೂರ್ವಕವಾಗಿ ಶ್ರಮಿಸಬೇಕಾಗುತ್ತದೆ. ಆಗ ಮಾತ್ರ ನಾವು ಮತ್ತೆ ಸರ್ಕಾರವನ್ನು ರಚಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ, ಪ್ರಸ್ತುತ ಪರಿಸ್ಥಿತಿಯು ಕರಾಳವಾಗಿದೆ, ನಮ್ಮ ಸರ್ಕಾರದ ಸ್ಥಿತಿ ಕೆಟ್ಟದಾಗಿದೆ” ಎಂದು ಹೇಳಿದರು.

ಮಿಶ್ರಾ ಹೇಳಿಕೆಯು ಉತ್ತರ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಹೆಚ್ಚುತ್ತಿರುವ ಆತಂಕವನ್ನು ಪ್ರತಿಧ್ವನಿಸಿದೆ. ವಿಶೇಷವಾಗಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ರಾಮಮಂದಿರ ಇರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋಲು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಳಿಯುತ್ತಿರುವುದರ ಸೂಚನೆಯಂತಾಗಿದೆ. ಇನ್ನು ಈ ವಿಡಿಯೋ ವೈರಲ್ ಆದ ಬಳಿಕ ಯಾರ ಕರೆ, ಇಮೇಲ್‌ಗಳಿಗೆ ಪ್ರತಿಕ್ರಿಯಿಸುತ್ತಿಲ್ಲ ಎಂದು ವರದಿಯಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Air India A1-171 ವಿಮಾನ ಪತನದಲ್ಲಿ 117 ಮಂದಿ ಮೃತ : ದುರಂತಕ್ಕೆ ಟಾಟಾ ಗ್ರೂಪ್‌ ಸಂತಾಪ

ಗುಜರಾತಿನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ A1- 171 ವಿಮಾನ...

ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ. ಶೀಘ್ರವೇ...

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ'...

ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಶಂಕೆ; ನಾಲ್ವರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ತನ್ನ ಪತ್ನಿಯು ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನಗೊಂಡಿದ್ದ ವ್ಯಕ್ತಿಯೊಬ್ಬ ತಮ್ಮ...

Download Eedina App Android / iOS

X