ಅಧಿವೇಶನ | ಕಾನೂನು ಪ್ರಕ್ರಿಯೆ ಸಂಹಿತೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

Date:

Advertisements

ಬಡವರ ಹಾಗೂ ಸಣ್ಣ ರೈತರ ಪ್ರಕರಣವನ್ನು ಆರು ತಿಂಗಳೊಳಗಾಗಿ ಇತ್ಯರ್ಥಪಡಿಸಲು ಅನುಕೂಲವಾಗುವಂತೆ ಸಿವಿಲ್ ನ್ಯಾಯಾಲಯಗಳಲ್ಲಿ ಕಾನೂನು ಪ್ರಕ್ರಿಯೆಯ ಸಂಹಿತೆ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ ನೀಡಿದೆ.

ಬುಧವಾರದ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರ ಗಲಾಟೆ ನಡುವೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಕಾನೂನು ಪ್ರಕ್ರಿಯೆಯ ಸಂಹಿತೆ ತಿದ್ದುಪಡಿ ವಿಧೇಯಕ ಮಂಡಿಸಿದರು.

“ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಪ್ರಕರಣಗಳು ಹತ್ತಾರು ವರ್ಷಗಳಿಂದ ಬಾಕಿ ಉಳಿದಿದೆ. ಅವುಗಳು ಇತ್ಯರ್ಥಗೊಳ್ಳದೆ ಬಡವರಿಗೆ ನ್ಯಾಯ ದೊರೆಯುತ್ತಿಲ್ಲ. ನ್ಯಾಯಾಲಯದ ವೆಚ್ಚ ಭರಿಸುವ ಆರ್ಥಿಕ ಶಕ್ತಿಯೂ ಬಡವರಲ್ಲಿ ಕುಗ್ಗುತ್ತಿದೆ” ಎಂದು ಎಚ್‌ ಕೆ ಪಾಟೀಲ್‌ ಅವರು ವಿಧೇಯಕವನ್ನು ಸಮರ್ಥಿಸಿಕೊಂಡರು.

Advertisements

ಮುಂದುವರಿದು, “ನಮ್ಮ ಸರ್ಕಾರ ಸಿಪಿಸಿಗೆ ತಿದ್ದುಪಡಿ ತರುತ್ತಿದೆ. ಇದರ ಪ್ರಕಾರ ಬಡವರ ಪ್ರಕರಣಗಳು ತ್ವರಿತವಾಗಿ ವಿಚಾರಣೆಯಾಗಿ ಆರು ತಿಂಗಳಲ್ಲಿ ವಿಲೇವಾರಿ ಆಗಬೇಕಿದೆ. ಮಹತ್ವದ ಹಾಗೂ ಕ್ರಾಂತಿಕಾರಿಯಾದ ಈ ಕಾನೂನು ಬಡವರಿಗೆ ಹಾಗೂ ರೈತರಿಗೆ ವರದಾನವಾಗಲಿದೆ” ಎಂದರು.

ಜೆಡಿಎಸ್‌, ಬಿಜೆಪಿ ಸದಸ್ಯರ ಧರಣಿ ಗದ್ದಲದ ನಡುವೆ ಚರ್ಚೆ ಇಲ್ಲದೆ ವಿಧೇಯಕ ಧ್ವನಿಮತದ ಮೂಲಕ ಅಂಗೀಕಾರಗೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X