ರಾಜ್ಯದಲ್ಲಿ ಈಗ ‘ಪೇ ಡಬಲ್ ಸಿಎಂ’ ವ್ಯವಸ್ಥೆ: ಸಂಸದ ಬಸವರಾಜ ಬೊಮ್ಮಾಯಿ ಆರೋಪ

Date:

Advertisements

ರಾಜ್ಯದಲ್ಲಿ ಈಗ ‘ಪೇ ಡಬಲ್’ ಸಿಎಂ ಆಗಿದೆ‌. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರವೇ ಮುಳುಗಿ ಹೋಗಿದ್ದು, ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದೆ ನಮ್ಮ ವಿರುದ್ಧ ಯಾವುದೇ ದಾಖಲೆ ಇಲ್ಲದೇ ವಿನಾಕಾರಣ ಆರೋಪ ಮಾಡಿದ್ದರು. ಈಗ ಅಬಕಾರಿ ಇಲಾಖೆಯಲ್ಲಿ ಕಮಿಷನ್ ಆರೋಪ ಕೇಳಿ ಬಂದಿದೆ. ಹಣಕಾಸು ಇಲಾಖೆ ನೇರವಾಗಿ ಮುಖ್ಯಮಂತ್ರಿಗಳ ಕೈಯಲ್ಲಿಯೇ ಇದೆ. ಒಂದೊಂದು ಲೈಸೆನ್ಸ್ ನೀಡಲು ಎಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎನ್ನುವುದನ್ನು ಅವರೇ ತನಿಖೆ ನಡೆಸಲಿ” ಎಂದು ಆಗ್ರಹಿಸಿದರು.

“ಇಡೀ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವ ಇಲಾಖೆಯಲ್ಲಿ ಹೋದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಂದಲೂ ತಿಂಗಳಿಗೆ ಕಮಿಷನ್ ವಸೂಲಿಗೆ ಫಿಕ್ಸ್ ಮಾಡುವ ಹಂತಕ್ಕೆ ಹೋಗಿದ್ದಾರೆ ಎಂದರೆ ಭ್ರಷ್ಟಾಚಾರ ಯಾವ ಹಂತಕ್ಕೆ ತಲುಪಿದೆ ಎಂದು ಊಹಿಸಿ” ಎಂದರು.

ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಅಭಿವೃದ್ದಿಯೇ ಆಗಿಲ್ಲ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿಯನ್ನು ಜನ ಅನುಭವಿಸಿದ್ದಾರೆ. ಕಾಂಗ್ರೆಸ್ ನವರ ಆಲೋಚನೆಗಳಿಗೂ ಶಿಗ್ಗಾಂವಿ ಜನರ ಆಲೋಚನೆಗಳಿಗೂ ಬಹಳ ವ್ಯತ್ಯಾಸ ಇದೆ. ಸರ್ಕಾರ ಅವರದೇ ಇದೆ. ಶಿಗ್ಗಾಂವಿಯಲ್ಲಿ ತಾಲೂಕು ಮಟ್ಟದಲ್ಲಿ 200 ಬೆಡ್ ಆಸ್ಪತ್ರೆ, ಟೆಕ್ಸ್ ಟೈಲ್ ಪಾರ್ಕ್, ಸವಣೂರಿನಲ್ಲಿ ಆಯುರ್ವೆದಿಕ್ ಕಾಲೇಜ್, ಐಟಿಐ ಕಾಲೆಜ್, ಪ್ರವಾಹ ಸಂದರ್ಭದಲ್ಲಿ 12,000 ಕ್ಕಿಂತ ಹೆಚ್ಚು ಮನೆ ನಿರ್ಮಾಣ, ಬೆಂಗಳೂರಿಗಿಂತ ಒಳ್ಳೆಯ ರಸ್ತೆ ಶಿಗ್ಗಾಂವಿಯಲ್ಲಿವೆ. ಸಿಎಂ ಕಾರಲ್ಲಿ ಹೋಗುವಾಗ ನಿದ್ದೆ ಮಾಡುತ್ತಿದ್ದರಾ” ಎಂದು ಪ್ರಶ್ನಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಚ್‌ಡಿಕೆ, ನಿಖಿಲ್‌ ಕುಮಾರಸ್ವಾಮಿ

“ಇಡೀ ಸರ್ಕಾರ ನನ್ನ ಮೇಲೆ ದಂಡೆತ್ತಿ ಬಂದಿದೆ‌ ನನ್ನ ಕ್ಷೇತ್ರದ ಅಭಿವೃದ್ಧಿ ಬಗ್ಗೆ ನಾನು ಹೇಳುತ್ತೇನೆ. ವರುಣಾ, ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಜನ ಏನು ಹೇಳುತ್ತಾರೆ, ಇಲ್ಲಿ ಬಂದಿರುವ ಕಾಂಗ್ರೆಸ್ ಮಂತ್ರಿಗಳು, ಶಾಸಕರ ಕ್ಷೇತ್ರಗಳು ಹೇಗಿವೆ ಎಂದು ಅವರು ಹೇಳಲಿ. ಈ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸಕ್ಕೆ ಹಣ ಬಿಡುಗಡೆ ಮಾಡಿಲ್ಲ. ನಾನು ಮುಖ್ಯಮಂತ್ರಿ ಇದ್ದಾಗ ಅಲ್ಪ ಸಂಖ್ಯಾತರ ದರ್ಗಾ, ಮಸೀದಿ ಅಭಿವೃದ್ಧಿಗೆ 10 ಕೋಟಿ ರೂ. ಕೊಟ್ಟಿದ್ದೆ. ಇವರು ಬಂದು ಅದನ್ನು ವಾಪಸ್ ಪಡೆದುಕೊಂಡಿದ್ದಾರೆ. ಇವರೇನು ಅಲ್ಪ ಸಂಖ್ಯಾತರ ಬಗ್ಗೆ ಮಾತನಾಡುವುದು” ಎಂದು ವಾಗ್ದಾಳಿ ನಡೆಸಿದರು.

ಸ್ವಾಮೀಜಿಗೆ ಅವಮಾನ

“ಕಾಗಿನೆಲೆ ಗುರು ಪೀಠದ ಸ್ವಾಮೀಜಿ ಬಗ್ಗೆ ಒಬ್ಬ ಮುಖ್ಯಮಂತ್ರಿಯಾಗಿ ಗುರುಗಳಿಗೆ ದಾಷ್ಟ್ಯದ ಮಾತು ಹೇಳುವುದು ಅವರಿಗೆ ಅವಮಾನ ಮಾಡಿದಂತೆ‌. ಅವರು ನಮ್ಮ ಗುರುಗಳು, ಅವರ ನಮ್ಮ ನಡುವೆ ಗುರು ಭಕ್ತರ ಸಂಬಂಧ ಇದೆ. ಚುನಾವಣೆ ಸೋಲಿನ ಭಯದಲ್ಲಿ ಸಿಎಂ ಸ್ವಾಮಿಜಿಯನ್ನು ಎಳೆ ತರುವ ಪ್ರಯತ್ನ ಮಾಡಿದ್ದಾರೆ” ಎಂದರು.

ಮುಡಾ ಪ್ರಕರಣದಲ್ಲಿ ಬಿಜೆಪಿಯವರು ತಮ್ಮ ವಿರುದ್ದ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂಬ ಸಿಎಂ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಮುಡಾ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಆದೇಶ ಇದೆ. ಒಬ್ಬ ಹಾಲಿ ಸಿಎಂ ತನಿಖೆಗೆ ಹಾಜರಾಗುತ್ತಿರುವುದು ಇದೇ ಮೊದಲು” ಎಂದರು.

“ಬೆಳಗಾವಿಯಲ್ಲಿ ಸರ್ಕಾರಿ ನೌಕರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕನ ವಿರುದ್ದ ಡೆತ್ ನೋಟ್ ಬರೆದಿಟ್ಟು ಸಾವಿಗೀಡಾಗಿರುವ ಪ್ರಕರಣದ ಕುರಿತು ತನಿಖೆಯಾಗಲಿ. ಸರ್ಕಾರಿ ನೌಕರರು ರಾಜಕೀಯ ಒತ್ತಡದಿಂದ ರೋಷಿಹೊಗಿದ್ದಾರೆ. ಶಿಗ್ಗಾವಿಯಲ್ಲಿಯೂ ಸರ್ಕಾರಿ ನೌಕರರ ಮೇಲೆ ಒತ್ತಡ ಹೆಚ್ಚಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X