ಆಸ್ಪತ್ರೆ ಬಿಲ್: ವಿಮೆ ಯೋಜನೆ ಸರಳೀಕರಿಸಲು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Date:

Advertisements
  • ಆರೋಗ್ಯ ವಿಮೆ ಸೇವೆಯಲ್ಲಿ ಸುಧಾರಣೆ ತರಲು ಯೋಜನೆ ರೂಪಿಸಲಾಗುತ್ತಿದೆ
  • ಕೋವಿಡ್ ಕಾಲದ ವೈದ್ಯಕೀಯ ಪರಿಕರ ಖರೀದಿ ಅಕ್ರಮದ ಬಗ್ಗೆ ಸಭೆಯಲ್ಲಿ ಚರ್ಚೆ

ಆರೋಗ್ಯ ವಿಮೆ ಮೂಲಕ ಚಿಕಿತ್ಸೆ ಪಡೆದ ಎರಡು ವಾರದೊಳಗೆ ಖಾಸಗಿ ಆಸ್ಪತ್ರೆಗಳಿಗೆ ವೆಚ್ಚದ ಬಿಲ್ ಪಾವತಿಯಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ವಿಮೆಯೋಜನೆ ಸರಳೀಕರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು.

ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಅವರು ಭಾಗವಹಿಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಸುಲಲಿತವಾಗಿ ಆರೋಗ್ಯ ಸೇವೆಗಳು ದೊರಕಿಸುವ ನಿಟ್ಟಿನಲ್ಲಿ ಸಿಎಂ ಚರ್ಚಿಸಿದ್ದಾರೆ ಎಂದು ತಿಳಿಸಿದರು.

ಜನರಿಗೆ ಆರೋಗ್ಯ ವಿಮಾ ಯೋಜನೆಗಳು ಸುಲಲಿತವಾಗಿ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ವಿಮೆ ಸೇವೆಯಲ್ಲಿ ಸುಧಾರಣೆ ತರಲು ಯೋಜನೆ ರೂಪಿಸಲಾಗುತ್ತಿದೆ. ಆರೋಗ್ಯ ವಿಮೆ ಮೂಲಕ ಚಿಕಿತ್ಸೆ ಪಡೆದ ಬಳಿಕ ಎರಡು ವಾರದೊಳಗೆ ಖಾಸಗಿ ಆಸ್ಪತ್ರೆಗಳಿಗೆ ಬಿಲ್ ಪಾವತಿಯಾಗಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ಹೇಳಿದರು.

Advertisements

ಇಲ್ಲಿಯವರೆಗೂ ಆರೋಗ್ಯ ಕರ್ನಾಟಕ ಕಾರ್ಡ್(ಆಯುಷ್ಮಾನ್ ಕಾರ್ಡ್)ನೊಂದಿಗೆ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋದರೆ ವಿಮೆ ಸೌಲಭ್ಯ ಲಭ್ಯವಾಗುತ್ತಿರಲಿಲ್ಲ. ಬದಲಿಗೆ ಸರ್ಕಾರಿ ಆಸ್ಪತ್ರೆಗೆ ಹೋಗಿ ಅಲ್ಲಿಂದ ರೆಫರೆನ್ಸ್ ಪಡೆದು ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತಹ ವ್ಯವಸ್ಥೆ ಇದೆ. ಈ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ತರಲಾಗುವುದು ಎಂದು ಸಚಿವ ಗುಂಡೂರಾವ್ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಸರ್ಕಾರಿ ಆಸ್ಪತ್ರೆಗಳ ಅಸಮರ್ಪಕ ನಿರ್ವಹಣೆ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಕೋವಿಡ್ ಕಾಲದ ವೈದ್ಯಕೀಯ ಪರಿಕರ ಖರೀದಿ ಕುರಿತು ಚರ್ಚೆ

ಚಾಮರಾಜನಗರ ದುರಂತ ಕೇಸ್ ಮರು ತನಿಖೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಗಮನಕ್ಕೆ ತರಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್, ಕೋವಿಡ್ ಸಂದರ್ಭದಲ್ಲಿ ನಡೆದ ವೈದ್ಯಕೀಯ ಖರೀದಿಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ. ಖರೀದಿ ವೇಳೆ ಅಕ್ರಮ ನಡೆದಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಹೀಗಾಗಿ ಅದರ ತನಿಖೆಗೆ ಸಿದ್ದತೆ ನಡೆದಿದೆ. ಆದರೆ ಇದು ಸೇಡಿನ ರಾಜಕಾರಣ ಅಲ್ಲ. ಬದಲಿಗೆ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿರುವ ಸಾಧ್ಯತೆ ಪರಿಶೀಲನಾ ಕ್ರಮ ಎಂದು ಹೇಳಿದರು.

ಇನ್ನು ಬಿಜೆಪಿಯ ಕೆಲವರು ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದರು ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಗುಂಡೂರಾವ್, ಯಾರು ಯಾರ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಅನ್ನೋದು ಸ್ಪಷ್ಟವಾಗಿ ಹೇಳಲಿ. ಅವರ ಬಳಿ ಸ್ಪಷ್ಟ ಮಾಹಿತಿಗಳಿದ್ದರೆ ಬಹಿರಂಗಪಡಿಸಲಿ, ಅದನ್ನು ಬಿಟ್ಟು ಸುಮ್ಮನೆ ಹೇಳಿಕೆ ನೀಡುವುದರಲ್ಲಿ ಅರ್ಥವಿಲ್ಲ. ನನ್ನ ಗಮನಕ್ಕೆ ಬಂದಂತೆ ಆ ರೀತಿಯ ಘಟನೆಗಳು ನಡೆದಿಲ್ಲ. ಒಳ ಒಪ್ಪಂದದ ಪ್ರಶ್ನೆಯೇ ಉದ್ಬವಿಸಲ್ಲ ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X