ರೈತ ಹೋರಾಟ | ಪೊಲೀಸರು ರಸ್ತೆಗೆ ಹಾಕಿದ್ದ ಸಿಮೆಂಟ್‌ ಬ್ಲಾಕ್‌ಗಳನ್ನು ನದಿಗೆ ಎಸೆದ ರೈತರು

Date:

Advertisements

ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ಫೆಬ್ರವರಿ 13ರಿಂದ ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ಪಂಜಾಬ್ ರೈತರು ದೆಹಲಿಯತ್ತ ಟ್ರ್ಯಾಕ್ಟರ್‌ಗಳಲ್ಲಿ ಪ್ರತಿಭಟನಾ ರ್‍ಯಾಲಿ ಹೊರಟಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕಲು ಹರಿಯಾಣ ಪೊಲೀಸರು ಪಂಜಾಬ್-ಹರಿಯಣ ಗಡಿ ಅಂಬಾಲಾ ಬಳಿಯ ಹೆದ್ದಾರಿಯಲ್ಲಿ ಸಿಮೆಂಟ್‌ ಬ್ಲಾಕ್‌ಗಳನ್ನು ಹಾಕಿದ್ದು, ಅವುಗಳನ್ನು ರೈತರು ಘಗ್ಗರ್‌ ನದಿಗೆ ಉರಿಳಿಸಿದ್ದಾರೆ. ದೆಹಲಿಯತ್ತ ಹೊರಟಿದ್ದಾರೆ.

ಫೆಬವರಿ 13ರ ಮಂಗಳವಾರ ಮುಂಜಾನೆ ಪಂಜಾಬ್ ರೈತರು ದೆಹಲಿಯತ್ತ ಹೊರಟ್ಟಿದ್ದರು. ಅವರನ್ನು ತಡೆಯಲು ಹರಿಯಾಣದ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಅಂಬಾಲಾ ಬಳಿ ದೊಡ್ಡ ದೊಡ್ಡ ಸಿಮೆಂಟ್‌ ಬ್ಲಾಕ್‌ಗಳನ್ನು ಹಾಕಿದೆ. ಅವುಗಳನ್ನು ರೈತರೊಂದಿಗೆ ಸೇರಿದ ಸ್ಥಳೀಯ ಗ್ರಾಮಸ್ಥರು ನದಿಗೆ ಎದೆಸಿದ್ದಾರೆ. ಹರಿಯಾಣವನ್ನು ದಾಟಿ, ದೆಹಲಿ ಗಡಿಗೆ ಬರುವುದು ರೈತರಿಗೆ ಸವಾಲಾಗಿದೆ. ಆದರೂ, 2020ರಲ್ಲಿ ಸರ್ಕಾರದ ದಮನಕ್ಕೆ ಬಗ್ಗದೆ ದೆಹಲಿ ತಲುಪಿದ್ದ ರೈತರು, ಅದೇ ಉತ್ಸಾಹ ಮತ್ತು ಹೋರಾಟದ ಕಿಚ್ಚಿನೊಂದಿಗೆ ಮತ್ತೆ ದೆಹಲಿಯತ್ತ ಹೊರಟಿದ್ದಾರೆ.

ಇನ್ನು, ದೆಹಲಿ ಮತ್ತು ಉತ್ತರ ಪ್ರದೇಶದ ಗಡಿಯಲ್ಲಿ ಭಾನುವಾರದಿಂದಲೇ ದೆಹಲಿ ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದಾರೆ. ದೆಹಲಿಯ ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಕೆಲವು ಗಡಿ ಪ್ರದೇಶಗಳಲ್ಲಿ ರೈತರ ಟ್ರ್ಯಾಕ್ಟರ್‌ಗಳನ್ನು ತಡೆಯಲು ರಸ್ತೆಗಳ ಮೇಲೆ ದೊಡ್ಡ ಮೊಳೆಗಳನ್ನು ಹಾಕಿದ್ದಾರೆ.

Advertisements

 

2020ರಲ್ಲಿ ನಡೆದ ಒಂದು ವರ್ಷಗಳ ನಿರಂತರ ಹೋರಾಟಕ್ಕೆ ಮಣಿಸಿದ್ದ ಕೇಂದ್ರ ಸರ್ಕಾರ, ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಂಡಿತ್ತು. ಜೊತೆಗೆ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿ ಮತ್ತು ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ, ಮೂರು ವರ್ಷ ಕಳೆದರೂ, ಭರವಸೆಗಳು ಭರವಸೆಯಾಗಿಯೇ ಉಳಿದಿವೆ.

ತನ್ನ ಭರವಸೆಗಳನ್ನು ಮರೆತಿರುವ ಸರ್ಕಾರಕ್ಕೆ ಆ ಭರವಸೆಗಳನ್ನು ನೆನಪಿಸಲು ಪಂಜಾಬ್ ಮತ್ತು ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದಾರೆ. ಸುಮಾರು 200 ರೈತ ಸಂಘಟನೆಗಳು ಒಗ್ಗೂಡಿ ದೆಹಲಿಯತ್ತ ಹೊರಟಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X