ಪೆನ್‌ಡ್ರೈವ್ ಪ್ರಕರಣ | ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ತಡೆದಿರುವವರು ಯಾರು? ಡಿಕೆಶಿ

Date:

Advertisements

“ಪೆನ್‌ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕುಮಾರಸ್ವಾಮಿ ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದರು.

ಪೆನ್‌ಡ್ರೈವ್ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ” ಎಂದು ತಿಳಿಸಿದರು.

Advertisements
?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X