ಅನಂತ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು: ಸಚಿವ ದಿನೇಶ್ ಗುಂಡೂರಾವ್

Date:

Advertisements

ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಅನಂತಕುಮಾರ್ ಹೆಗಡೆಯವರ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ವಿವಾದವನ್ನು ಎಬ್ಬಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿ ಸಂಸದನ ವಿರುದ್ಧ ಆಕ್ರೋಶ ಹೊರಹಾಕಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಬಾಯಿ ಬಿಟ್ಟರೆ ಹೊಡಿ, ಬಡಿ, ಕೊಚ್ಚು, ಕೊಲ್ಲು, ದ್ವೇಷ, ಸೇಡು ಎನ್ನುವ ಅನಂತ್ ಕುಮಾರ್ ಹೆಗಡೆಯಂತಹವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ” ಎಂದು ತಿಳಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಗುಂಡೂರಾವ್, “ರಾಜ್ಯದ ಮುಖ್ಯಮಂತ್ರಿಗಳ ಬಗ್ಗೆ ಉ.ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ‘ಮಗನೇ’ ಎಂದು ಸಾರ್ವಜನಿಕವಾಗಿ ಹೀಗೆಳೆದಿದ್ದಾರೆ. ‘ಕುಲವಂ ನಾಲಗೆ ನುಡಿಯಿತು’ ಎಂಬಂತೆ ಉ.ಕನ್ನಡ ಸಂಸದರ ಸಂಸ್ಕಾರ ಅವರ ಮಾತುಗಳಲ್ಲೇ ತಿಳಿಯುತ್ತದೆ. ವಯಸ್ಸಿನಲ್ಲಿ ಹಾಗೂ ಅನುಭವದಲ್ಲಿ ಸಿದ್ದರಾಮಯ್ಯರ ಮುಂದೆ ಅನಂತ್ ಕುಮಾರ್ ಹೆಗಡೆ ಹುಲ್ಲು ಕಡ್ಡಿಗೂ ಸಮಾನರಲ್ಲ” ಎಂದು ಜಾಡಿಸಿದ್ದಾರೆ.

Advertisements

“ಶೋಷಿತ ಸಮುದಾಯದ ಧ್ವನಿಯಾಗಿರುವ ಸಿದ್ದರಾಮಯ್ಯರನ್ನು ಮತಾಂಧತೆಯ ವಿಷ ತುಂಬಿಕೊಂಡಿರುವ ಹೆಗಡೆ ಏಕವಚನದಲ್ಲಿ ‘ಮಗನೇ’ ಎಂದಿರುವುದು ಅವರ ಕೊಳಕು ಮನಸ್ಥಿತಿಯ ಅನಾವರಣ ಮಾಡಿದೆ. ಸಿದ್ದರಾಮಯ್ಯರಿಗೆ ‘ಮಗನೇ’ ಎಂದು ಸಂಬೋಧಿಸಿರುವ ಅನಂತ್ ಕುಮಾರ್ ಹೆಗಡೆ ಹಿಂದೂ ಸಮಾಜದ ಕಳಂಕವಿದ್ದಂತೆ. ವಯಸ್ಸಿನಲ್ಲಿ ಹಿರಿಯರಾದವರಿಗೆ ಮರ್ಯಾದೆ ಕೊಡುವುದು ನಮ್ಮ ಹಿಂದೂ ಧರ್ಮ ಕಲಿಸಿರುವ ಸಂಸ್ಕಾರ. ಅನಂತ್ ಕುಮಾರ್ ಹೆಗಡೆಯವರು ಯಾವ ಧರ್ಮದಿಂದ ಈ ರೀತಿ ಕೊಳಕು ಭಾಷೆ ಮಾತನಾಡುವ ಸಂಸ್ಕಾರ ಕಲಿತಿದ್ದಾರೆ.?” ಎಂದು ಸಚಿವರು ಕೇಳಿದ್ದಾರೆ.

“ಬಾಯಿ ಬಿಟ್ಟರೆ ಹೊಡಿ, ಬಡಿ, ಕೊಚ್ಚು, ಕೊಲ್ಲು, ದ್ವೇಷ, ಸೇಡು ಎನ್ನುವ ಅನಂತ್ ಕುಮಾರ್ ಹೆಗಡೆಯಂತಹವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ. ಅನಂತ್ ಕುಮಾರ್ ಹೆಗಡೆಯವರೇ, ಸಾರ್ವಜನಿಕವಾಗಿ ಹೇಗೆ ಮಾತಾಡಬೇಕು ಹಾಗೂ ಹೇಗೆ ವರ್ತಿಸಬೇಕು ಎಂಬ ಕನಿಷ್ಟ ಜ್ಞಾನವನ್ನು ದಯವಿಟ್ಟು ಬೆಳೆಸಿಕೊಳ್ಳಿ. ನಿಮ್ಮಂತೆ ಹಿಂದುತ್ವದ ಅಮಲು ತುಂಬಿಕೊಂಡಿರುವ ಕೆಲವರಿಗೆ ಮಾತ್ರ ನಿಮ್ಮ ಅಸಹ್ಯದ ಮಾತುಗಳು ರುಚಿಸಬಹುದೇನೋ.? ಆದರೆ ಪ್ರಜ್ಞಾವಂತ ಹಿಂದೂಗಳು ಯಾವತ್ತಿಗೂ ನಿಮ್ಮ ಮಾತು ಒಪ್ಪಲಾರರು” ಎಂದು ಗುಂಡೂರಾವ್, ಬಿಜೆಪಿ ಸಂಸದನ ಹೇಳಿಕೆಗೆ ಆಕ್ರೋಶ ಹೊರಹಾಕಿದ್ದಾರೆ.

“ಬಸವಣ್ಣ, ಕುವೆಂಪು, ನಾರಾಯಣ ಗುರು ಹಾಗೂ ಕನಕದಾಸರಂತಹ ಅನೇಕ ಮಹಾನ್ ವ್ಯಕ್ತಿಗಳು ಬದುಕಿ ಬಾಳಿದ ನೆಲವಿದು. ನಿಮ್ಮ ಕೊಳಕು ಮಾತುಗಳಿಂದ ಈ ನೆಲದ ಪಾವಿತ್ರ್ಯವನ್ನು ಹಾಳು ಮಾಡಬೇಡಿ‌” ಎಂದು ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X