ಕೇಂದ್ರದಲ್ಲಿ ಜನರು ಬದಲಾವಣೆ ಬಯಸಿದ್ದಾರೆ: ಖರ್ಗೆ

Date:

Advertisements

ಜನರು ಕೇಂದ್ರದಲ್ಲಿ ಸರ್ಕಾರ ಬದಲಾವಣೆ ಬಯಸುತ್ತಿದ್ದಾರೆ. ನಾನು ಎಲ್ಲಿಗೆ ಹೋದರೂ ಜನರು ಸರ್ಕಾರ ಬದಲಾವಣೆಯ ಬಗ್ಗೆ ಆಸಕ್ತಿ ಹೊಂದಿರುವುದು ಕಂಡುಬರುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ಅಂಶಗಳಲ್ಲಿಯೂ ವಿಫಲವಾಗಿದೆ. ಹಣದುಬ್ಬರ ನಿಯಂತ್ರಿಣ ಮತ್ತು ಉದ್ಯೋಗ ಸೃಷ್ಟಿಯಲ್ಲೂ ವಿಫಲವಾಗಿದೆ. ಹೀಗಾಗಿಯೇ, ಕಳೆದ 10 ವರ್ಷಗಳಲ್ಲಿ ಜನರಿಗೆ ತಾವೇನು ಕೊಟ್ಟಿದ್ದೇವೆ ಎಂಬ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ. ಆದರೆ, ಬೇರೆ ವಿಷಯಗಳ ಬಗ್ಗೆ ಹೆಚ್ಚು ಮಾತನಾಡುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಮೋದಿ ಸರ್ಕಾರ ಜನರನ್ನು ಬಡತನದಿಂದ ಮೇಲೆತ್ತಲು ವಿಫಲವಾಗಿದೆ. ಬಡತನವನ್ನು ಪರಿಹರಿಸಲು ಯಾವುದೇ ನೀತಿಯನ್ನು ಜಾರಿಗೊಳಿಸಿಲ್ಲ. ಮೋದಿ ಯಾವತ್ತೂ ಬಡವರ ಉದ್ಧಾರ ಮಾಡುವ ಕೆಲಸ ಮಾಡಿಲ್ಲ” ಎಂದಿದ್ದಾರೆ.

Advertisements

ಪಾಕಿಸ್ತಾನದೊಂದಿಗೆ ಕಾಂಗ್ರೆಸ್ ನಂಟು ಹೊಂದಿದೆ ಎಂಬ ಮೋದಿ ಆರೋಪದ ವಿರುದ್ಧ ಕಿಡಿಕಾರಿದ ಖರ್ಗೆ, “ನಾವು ಆಹ್ವಾನವಿಲ್ಲದೆ ಪಾಕಿಸ್ತಾನಕ್ಕೆ ಭೇಟಿ ನೀಡುವವರಲ್ಲ ಅಥವಾ ಪಾಕಿಸ್ತಾನದಿಂದ ಯಾವುದೇ ಉಡುಗೊರೆಯನ್ನು ತರುವುದಿಲ್ಲ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಬಲ್ಲವರು ಕಾಂಗ್ರೆಸ್‌ ಜೊತೆ ಸಂಬಂಧ ಹೊಂದಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

“ಮೋದಿ ಆಡಳಿತದಲ್ಲಿ ಕಾರ್ಮಿಕ ಕಾನೂನುಗಳನ್ನು ಹಲವು ಬಾರಿ ಬದಲಾವಣೆ ಮಾಡಲಾಗಿದೆ. ಇದರಿಂದ ಕಾರ್ಮಿಕರು ಕಿರುಕುಳ ಅನುಭವಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಎಲ್ಲ ಕಾನೂನುಗಳಲ್ಲಿ ಕಾರ್ಮಿಕರ ಪರವಾದ ಬದಲಾವಣೆಗಳನ್ನು ತರುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X