ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿರುವ ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದೆ.
ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 14ಕ್ಕೆ ಮುಂದೂಡಿಕೆ ಮಾಡಿದೆ.
ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೊಹಮ್ಮದ್ ಆರೀಫ್ ಜಮೀಲ್ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯಲ್ಲಿ ಕಾನೂನುಬಾಹಿರವಾಗಿ 2ಬಿ ಮೀಸಲಾತಿ ರದ್ದುಗೊಳಿಸಲಾಗಿದೆ, ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡುವಂತೆಯೂ ಮನವಿ ಮಾಡಿದರು.
ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಸ್ಲಿಮರ ಶೇ.4 ಮೀಸಲಾತಿ ರದ್ದು ಮಾಡಿ, ಆರ್ಥಿಕ ದುರ್ಬಲ ವರ್ಗಗಳಡಿ ಬರುವ ಮೀಸಲಾತಿಗೆ ಸೇರಿಸಲಾಗಿತ್ತು.