ಪೆಟ್ರೋಲ್ ದರ ಶತಕದ ಗಡಿ ದಾಟಿಸಿದ್ದೇ ಬಿಜೆಪಿ: ಸಚಿವ ಜಮೀರ್ ಅಹಮದ್

Date:

Advertisements

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ಕೇಂದ್ರ ಸರ್ಕಾರ ಪೆಟ್ರೋಲ್ ಪ್ರತಿ ಲೀಟರ್ ಗೆ 32.98 ರೂ., ಡೀಸೆಲ್ ಪ್ರತಿ ಲೀಟರ್ ಗೆ 31.83 ರೂ. ಅಬಕಾರಿ ಸುಂಕ ಸಂಗ್ರಹ ಮಾಡುತ್ತಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ” ಎಂದು ಪ್ರೆಶ್ನೆ ಮಾಡಿದರು.

“ಯುಪಿಎ ಸರ್ಕಾರದ ಅವಧಿಯಲ್ಲಿ ಅಬಕಾರಿ ಸುಂಕ ಪೆಟ್ರೋಲ್ ಗೆ 9.48 ರೂ., ಡೀಸೆಲ್ ಗೆ 3.56 ರೂ. ವಿಧಿಸಲಾಗಿತ್ತು. ಹಾಗಾಗಿಯೇ ಆಗ ಪೆಟ್ರೋಲ್ 68.31 ರೂ., ಡಿಸೇಲ್ 48.63 ರೂ. ಗೆ ದೊರೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಪೆಟ್ರೋಲ್ 106 ರೂ ರೂ. ವರೆಗೆ ಹೋಗಿತ್ತು. ಯುಪಿ ಎ ಸರ್ಕಾರದ ಅವಧಿಯಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 97.68 ಡಾಲರ್ ಇತ್ತು. ಆಗ ಪೆಟ್ರೋಲ್ ಲೀಟರ್ 68.31 ರೂ. ಇತ್ತು. ಈಗ ಕಚ್ಚಾ ತೈಲ ಬೆಲೆ 77.64 ರೂ. ಡಾಲರ್ ಇದ್ದರೂ ಬಿಜೆಪಿ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಯಾಕೆ ಕಡಿಮೆ ಆಗಲಿಲ್ಲ” ಎಂದರು.

Advertisements

“ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ದಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದಾಗ ಇವರ ಧ್ವನಿ ಎಲ್ಲಿ ಅಡಗಿತ್ತು. ಅಡುಗೆ ಅನಿಲ ಬೆಲೆ 419 ರೂ. ಇದ್ದದ್ದು 903 ರೂ.ಮಾಡಿದ್ದು ಬಿಜೆಪಿ ಸರ್ಕಾರ. ಇದರ ಬಗ್ಗೆ ಬಿಜೆಪಿ ನಾಯಕರು ಬಹಿರಂಗ ಚರ್ಚೆಗೆ ಬರಲಿ” ಎಂದು ಸವಾಲು ಹಾಕಿದರು.

“ರಾಜ್ಯದಲ್ಲಿ ತೆರಿಗೆ ಹೆಚ್ಚಳ ನಂತರ ಪೆಟ್ರೋಲ್ ಲೀಟರ್ ಗೆ 102 ರೂ., ಡೀಸೆಲ್ 88.41 ರೂ. ಆಗಿದೆ. ನೆರೆಯ ತಮಿಳು ನಾಡು, ಆಂಧ್ರ, ಮಹಾರಾಷ್ಟ್ರ ಕ್ಕೆ ಹೋಲಿಸಿದರೆ 5 ರಿಂದ 7 ರೂ. ವರೆಗೆ ಕಡಿಮೆ. ಕೇರಳದಲ್ಲಿ ಪೆಟ್ರೋಲ್ 106.66, ಡೀಸೆಲ್ 95.60,, ಆಂಧ್ರ ದಲ್ಲಿ ಪೆಟ್ರೋಲ್ 109.44, ಡಿಸೇಲ್ 97.28, ಮಹಾರಾಷ್ಟ್ರ ದಲ್ಲಿ ಪೆಟ್ರೋಲ್ 104.46, ಡೀಸೆಲ್ 90.45ರೂ. ಇದೆ. ಇದಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲೇ ಅತಿ ಕಡಿಮೆ. ಬಿಜೆಪಿ ಅವರು ಅಧಿಕಾರ ಇದ್ದಾಗ ಜನರ ಮೇಲೆ ಹೊರೆ ಹಾಕಿದವರು. ಹೀಗಾಗಿ ಅವರಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ. ಗಿಮಿಕ್ ಹಾಗೂ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X