ರಾಜ್ಯದಲ್ಲಿ ಮಂಗಳವಾರ 2ನೇ ಹಂತದ ಮತದಾನ; ಬಹಿರಂಗ ಪ್ರಚಾರಕ್ಕೆ ಇಂದು ತೆರೆ; 14 ಕ್ಷೇತ್ರಗಳಲ್ಲಿ ಗೆಲ್ಲೋದ್ಯಾರು?

Date:

ಕರ್ನಾಟಕದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ಮಂಗಳವಾರ (ಮೇ 7) ನಡೆಯಲಿದೆ. ಇಂದು (ಭಾನುವಾರ) ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹಾಲಿ ಸಂಸದರು, ಸಚಿವರ ಮಕ್ಕಳು, ಘಟಾನುಘಟಿ ನಾಯಕರು ಕಣದಲ್ಲಿದ್ದು, ಮತದಾರರು ಯಾರಿಗೆ ಮತಹಾಕುತ್ತಾರೆ ಎಂಬುದು ಕೌತುಕ ಮೂಡಿಸಿದೆ.

- Advertisement -

ಇಂದು ಸಂಜೆವರೆಗಷ್ಟೇ ಬಹಿರಂಗ ಪ್ರಚಾರಕ್ಕೆ ಅವಕಾಶವಿದ್ದು, ಎಲ್ಲ ಅಭ್ಯರ್ಥಿಗಳು ಅಂತಿಮ ಸುತ್ತಿನ ಪ್ರಚಾರದ ಭರಾಟೆಯಲ್ಲಿದ್ದಾರೆ. ಸಂಜೆ 6ಗಂಟೆಯ ನಂತರ ಕ್ಷೇತ್ರದ ಮತದಾರರಲ್ಲದ ರಾಜಕೀಯ ಮುಖಂಡರು, ಕಾರ್ಯಕರ್ತರು ಕ್ಷೇತ್ರಗಳನ್ನು ತೊರೆಯಬೇಕೆಂದು ಚುನಾವಣಾ ಆಯೋಗ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ರಾಜ್ಯದ ಉತ್ತರ ಮತ್ತು ಮಧ್ಯ ಕರ್ನಾಟಕ ಭಾಗದಲ್ಲಿ ಮತದಾನ ನಡೆಯಲಿದ್ದು, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ(ಎಸ್ಸಿ), ಕಲಬುರಗಿ(ಎಸ್ಸಿ), ರಾಯಚೂರು(ಎಸ್ಟಿ), ಬೀದರ್, ಕೊಪ್ಪಳ, ಬಳ್ಳಾರಿ(ಎಸ್ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಈ  14 ಲೋಕಸಭಾ ಕ್ಷೇತ್ರಗಳಲ್ಲಿ 21 ಮಂದಿ ಮಹಿಳೆಯರು, 206 ಮಂದಿ ಪುರುಷರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, 14 ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳಾಗಿ ಬಿಜೆಪಿಯವರೇ ಸ್ಪರ್ಧಿಸಿದ್ದಾರೆ.

ಈ ನಡುವೆ, ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ರಾಷ್ಟ್ರಾಧ್ಯಕ್ಷ ಆಕ್ರೋಶಕ್ಕೆ ಕಾರಣವಾಗಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ. ನೂರಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ಹಗರಣವು ಚುನಾವಣೆಯಲ್ಲಿ ಬಿಜೆಪಿ ಹೊಡೆತ ನೀಡಲಿದೆ ಎಂದೂ ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...