ಬಿಜೆಪಿ – ಜೆಡಿಎಸ್ ಮೈತ್ರಿಗೆ ಒಪ್ಪಿಗೆ: ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ಕೇರಳ ಸಿಎಂ ಆಕ್ರೋಶ

Date:

ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ತನ್ನ ಎಲ್ಲ ಮಿತ್ರಪಕ್ಷಗಳು ಸಮ್ಮತಿ ಸೂಚಿಸಿವೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯನ್, ಎಚ್.ಡಿ. ದೇವೇಗೌಡ ಅವರ ಹೇಳಿಕೆಯು ನಿರಾಧಾರ’ಮತ್ತು ‘ಅಸಂಬದ್ಧ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರ ಸೇರಿದಂತೆ ಜೆಡಿಎಸ್‌ನ ಎಲ್ಲ ರಾಜ್ಯ ಘಟಕಗಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಒಪ್ಪಿಗೆ ನೀಡಿವೆ ಎಂದು ಮಾಜಿ ಪ್ರಧಾನಿ ಗುರುವಾರ(ಅಕ್ಟೋಬರ್ 19) ಹೇಳಿದ್ದರು.

ಕೇರಳದ ಜೆಡಿಎಸ್ ಘಟಕವು ಯಾವಾಗಲೂ ಎಡ ರಂಗದ ಜತೆ ಗುರುತಿಸಿಕೊಂಡಿದೆ. ಇದೇ ರೀತಿಯ ಬೆಳವಣಿಗೆ 2006ರಲ್ಲಿ ನಡೆದಾಗಲೂ ಇಲ್ಲಿನ ಜೆಡಿಎಸ್ ನಾಯಕರು ನಿಲುವು ಬದಲಿಸಿರಲಿಲ್ಲ. ಈ ಬಾರಿಯೂ ಕೇರಳದ ಜೆಡಿಎಸ್ ನಾಯಕರು ಬಿಜೆಪಿ ಮೈತ್ರಿಯನ್ನು ವಿರೋಧಿಸಿದ್ದಾರೆ ಮತ್ತು ಎಡರಂಗದ ಜತೆ ನಿಂತಿದ್ದಾರೆ. ಆದರೆ, ಸಿಪಿಐ(ಎಂ) ಆ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಯಾವತ್ತೂ ಅಭಿಪ್ರಾಯ ವ್ಯಕ್ತಪಡಿಸಲು ಪ್ರಯತ್ನಿಸಿಲ್ಲ.ಮುಖ್ಯಮಂತ್ರಿಯಾಗಿ ನಾನಂತೂ ಅವರ ಪಕ್ಷದ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಿಲ್ಲ.ಇದು ನಮ್ಮ ಕಾರ್ಯವೈಖರಿಗೆ ಸಂಪೂರ್ಣ ವಿರುದ್ಧವಾಗಿದೆ. ಅವರ ಅಚಾತುರ್ಯಕ್ಕೆ ನಾವು ಜವಾಬ್ದಾರರಲ್ಲ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಹಂತಕರು ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು

“ಜೆಡಿಎಸ್ ಕೇರಳ ಘಟಕವು ಬಿಜೆಪಿಯನ್ನು ವಿರೋಧಿಸುತ್ತದೆ ಮತ್ತು ಹೀಗಾಗಿ ನಾವು ಈ ಬಗ್ಗೆ ದೇವೇಗೌಡರ ಹೇಳಿಕೆಯನ್ನು ವಿರೋಧಿಸುತ್ತೇವೆ ಎಂದು ಇಲ್ಲಿನ ನಾಯಕರು ಸ್ಪಷ್ಟಪಡಿಸಿದ್ದಾರೆ. ಕೇರಳ ಜೆಡಿಎಸ್ ರಾಜ್ಯಾಧ್ಯಕ್ಷ ಮ್ಯಾಥ್ಯೂ ಟಿ ಥಾಮಸ್ ಮತ್ತು ಕೇರಳ ಸರ್ಕಾರದಲ್ಲಿ ಜೆಡಿಎಸ್‌ ಸಚಿವ ಕೆ ಕೃಷ್ಣನ್‌ಕುಟ್ಟಿ ದೇವೇಗೌಡರು ನೀಡಿರುವ ಹೇಳಿಕೆ ಸುಳ್ಳು ಎಂದು ಖಡಾಖಂಡಿತವಾಗಿ ಹೇಳಿದ್ದಾರೆ” ಎಂದು ವಿಜಯನ್ ತಿಳಿಸಿದ್ದಾರೆ.

‘ದೇವೇಗೌಡರು ತಮ್ಮ ಬದಲಾಗುತ್ತಿರುವ ರಾಜಕೀಯ ನಿಲುವುಗಳನ್ನು ಸಮರ್ಥಿಸಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ’ಎಂದು ಕಟು ಶಬ್ದಗಳಲ್ಲಿ ಟೀಕಿಸಿರುವ ವಿಜಯನ್ ಅವರು, ದೇವೇಗೌಡರು ಈ ಹಿಂದೆಯೂ ತಮ್ಮ ಪುತ್ರ ಎಚ್. ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಪಕ್ಷದ ಸಿದ್ಧಾಂತಕ್ಕೆ ದ್ರೋಹವೆಸಗಿದ್ದರು’ ಎಂದು ಆರೋಪಿಸಿದ್ದಾರೆ.

ಎಡ ರಂಗದ ಜತೆ ಉಳಿಯಲು ಕೇರಳದ ಜೆಡಿಎಸ್ ಘಟಕ ನಿರ್ಧಸಿದೆಯಾದರೂ, ಮುಂದಿನ ದಿನಗಳಲ್ಲಿ ಹೊಸ ಪಕ್ಷ ರಚನೆ ಮಾಡಬೇಕೆ ಅಥವಾ ಇತರ ಸ್ಥಳೀಯ ಪಕ್ಷಗಳ ಜತೆ ವಿಲೀನವಾಗಬೇಕೊ ಎಂಬುದರ ಕುರಿತು ನಾಯಕರಲ್ಲಿ ಒಮ್ಮತಮೂಡಿಲ್ಲ. ಈ ಕುರಿತು ಮುಂದಿನ ಯೋಜನೆಗಳನ್ನು ನಿರ್ಧರಿಸಲು ಪಕ್ಷದ ನಾಲ್ವರು ಹಿರಿಯ ನಾಯಕರ ಸಮಿತಿಯನ್ನು ರಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...