ನಾಟಕವನ್ನು ಬಹಳ ಹಿಂದೆಯೇ ರಚಿಸಲಾಗಿತ್ತು: ಶಿವಸೇನಾ ತೀರ್ಪಿನ ಬಗ್ಗೆ ಕಪಿಲ್ ಸಿಬಲ್ ಆಕ್ರೋಶ

Date:

Advertisements

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು ನೀಡಿದ ನಂತರ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ‘ನಾಟಕವನ್ನು ಬಹಳ ಹಿಂದೆಯೇ ರಚಿಸಲಾಗಿತ್ತು’ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಶಿಂಧೆ ಸೇನೆ ನಿಜವಾದ ಸೇನೆ. ಬಹಳ ಹಿಂದೆಯೇ ರಚಿತವಾಗಿರುವ ನಾಟಕವಿದು. ಪ್ರಹಸನ ಯಾವುದೇ ಸಹಾಯ ಪಡೆಯದೆ ನಡೆಯಿತು ಎಂಬುದನ್ನು ಎಲ್ಲರೂ ವೀಕ್ಷಿಸಿದರು. ಇದು ಪ್ರಜಾಪ್ರಭುತ್ವದ ತಾಯಿದ ನಿಜವಾದ ದುರಂತ” ಎಂದು ಕಪಿಲ್ ಸಿಬಲ್ ಬೇಸರ ವ್ಯಕ್ತಪಡಿಸಿದ್ದಾರೆ.

2022ರಲ್ಲಿ ವಿಭಜನೆಗೊಂಡ ಶಿವಸೇನಾ ಬಣಗಳ ಅನರ್ಹತೆಯ ವಿಚಾರವಾಗಿ ಸ್ಪೀಕರ್ ರಾಹುಲ್ ನರ್ವೇಕರ್ ತಮ್ಮ 105 ನಿಮಿಷಗಳ ಸುದೀರ್ಘ ಭಾಷಣದಲ್ಲಿ ಉದ್ಧವ್ ಠಾಕ್ರೆ ಬಣದ ಅರ್ಜಿಯನ್ನು ತಿರಸ್ಕರಿಸಿ ಏಕನಾಥ್ ಶಿಂಧೆ ಒಳಗೊಂಡಂತೆ 30 ಶಾಸಕರ ಬಣವೆ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

1999ರಲ್ಲಿ ರಚಿತಗೊಂಡ ಶಿವಸೇನೆ ಪಕ್ಷದ ಸಂವಿಧಾನವೇ ಅಧಿಕೃತ. ಉದ್ಧವ್ ಠಾಕ್ರೆಗೆ ಶಾಸಕರ ಬೆಂಬಲ ಇಲ್ಲ. 2018 ರ ಪಕ್ಷದ ಹೊಸ ಸಂವಿಧಾನ ಚುನಾವಣಾ ಆಯೋಗದಲ್ಲಿಲ್ಲ. ಹೀಗಾಗಿ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ 1999 ಸಂವಿಧಾನವನ್ನು ಪರಿಗಣಿಸಲಾಗಿದೆ ಎಂದು ಸ್ಪೀಕರ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದರು.

ಜೂನ್‌ 2022ರಲ್ಲಿ ಶಿವಸೇನೆ ಶಾಸಕರು ವಿಭಜನೆಗೊಂಡು ಎರಡು ಬಣಗಳಾದ ನಂತರ ನಿಜವಾದ ಶಿವಸೇನೆ ತಮ್ಮದು ಎಂದು ಘೋಷಿಸಬೇಕು ಎಂದು ಎರಡು ಬಣಗಳು ಚುನಾವಣಾ ಆಯೋಗದ ಕದ ತಟ್ಟಿದ್ದವು. ಆಯೋಗ ಕೂಡ ಹೆಚ್ಚು ಶಾಸಕರಿರುವ ಏಕನಾಥ್ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ತೀರ್ಪು ನೀಡಿತ್ತು.

ಈಗ ಸ್ಪೀಕರ್ ಕೂಡ 18 ತಿಂಗಳ ನಂತರ ತೀರ್ಪು ನೀಡಿದ್ದು, ಶೀವಸೇನಾ ಸಂವಿಧಾನದಂತೆ ಪಕ್ಷದ ಪ್ರಮುಖ ಉದ್ಧವ್ ಠಾಕ್ರೆಯವರಿಗೆ ಏಕನಾಥ್ ಶಿಂಧೆ ಬಣವನ್ನು ಉಚ್ಚಾಟಿಸುವ ಅಧಿಕಾರ ಇಲ್ಲವೆಂದು ತಿಳಿಸಿದ್ದಾರೆ.

ಸ್ಪೀಕರ್ ತೀರ್ಪಿನಿಂದ ಅಸಮಾಧಾನಗೊಂಡಿರುವ ಉದ್ಧವ್ ಠಾಕ್ರೆ ತಾವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X