ಹಿಂದೂ-ಮುಸ್ಲಿಂ ರಾಜಕಾರಣ ಬಿಟ್ಟು ಪ್ರಧಾನಿಗೆ ಬೇರೆ ಅಜೆಂಡಾ ಉಳಿದಿಲ್ಲ: ಕಾಂಗ್ರೆಸ್

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದೂ-ಮುಸ್ಲಿಂ ರಾಜಕಾರಣ ಬಿಟ್ಟರೆ ಬೇರೆ ಯಾವುದೇ ಅಜೆಂಡಾ ಉಳಿದಿಲ್ಲ, ಸೋಲಿನ ಭಯದಿಂದಾಗಿ ಈಗ ಮುಸ್ಲಿಮರ ಓಲೈಕೆಗೆ ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಹಿಂದೂ ಮುಸ್ಲಿಂ ರಾಜಕಾರಣವನ್ನು ನಾನು ಎಂದಿಗೂ ಮಾಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್ ನಾಯಕರು ಪ್ರಧಾನಿ ಹೇಳಿಕೆಯನ್ನು ಗೇಲಿ ಮಾಡಿದ್ದಾರೆ.

“ಕಳೆದ 10 ವರ್ಷಗಳಿಂದ ಅವರು (ಮೋದಿ) ತಮ್ಮ ರಾಜಕೀಯವನ್ನು ಕೇವಲ ಧರ್ಮದ ಆಧಾರದ ಮೇಲೆ ಮಾಡುತ್ತಿದ್ದಾರೆ. ಆದರೆ ತಾನು ಹಿಂದೂ-ಮುಸ್ಲಿಂ ರಾಜಕಾರಣ ಮಾಡಿಲ್ಲ, ತಾನು ಆ ರೀತಿಯ ರಾಜಕಾರಣ ಮಾಡಿದ್ದರೆ ಈ ಹುದ್ದೆಯಲ್ಲಿ ಉಳಿದುಕೊಳ್ಳಲೂ ಯೋಗ್ಯರಲ್ಲ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪುನರುಚ್ಛರಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಹಾಗೆಯೇ, “ಪ್ರಧಾನಿ ಮೋದಿ ಹಿಂದೂ-ಮುಸ್ಲಿಂ ರಾಜಕಾರಣ ಮಾಡಿಲ್ಲ ಎಂದು ಹೇಳುವುದಾದರೆ ಅವರು ಕಳೆದ 10 ವರ್ಷಗಳಿಂದ ಮಾಡುತ್ತಿರುವುದೇನು” ಎಂದು ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ, “ಒಂದೋ ನೀವು ಮೊದಲು ಸುಳ್ಳು ಹೇಳುತ್ತಿದ್ದೀರಿ ಅಥವಾ ನೀವು ಈಗ ಸುಳ್ಳು ಹೇಳುತ್ತಿದ್ದೀರಿ. ಇಡೀ ದೇಶವೇ ನೋಡುತ್ತಿದೆ. ಪ್ರಧಾನಿ ಬರೀ ಸುಳ್ಳು ಮಾತನಾಡುತ್ತಾರೆ, ಸುಳ್ಳನ್ನು ಹರಡುತ್ತಾರೆ” ಎಂದು ಟೀಕಿಸಿದರು.

ಇನ್ನು ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ ಸೆಲ್ವಪೆರುಂತಗೈ ಮಾತನಾಡಿ, “ಬಿಜೆಪಿ ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಸೋಲಿನ ಅರಿವಾಗಿದೆ. ಹಾಗಾಗಿ ಈಗ ಮುಸ್ಲಿಮರ ವಿರುದ್ಧ ಮಾತನಾಡಿರುವುದನ್ನು ನಿರಾಕರಿಸುತ್ತಿದ್ದಾರೆ” ಎಂದರು.

ಇದನ್ನು ಓದಿದ್ದೀರಾ? ನಿರ್ಗಮಿಸುವ ಪ್ರಧಾನಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ: ಕಾಂಗ್ರೆಸ್ ವಾಗ್ದಾಳಿ

“ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡಿದ್ದಾರೆ. ಇತ್ತೀಚಿನ ಗುಪ್ತಚರ ವರದಿಗಳ ಪ್ರಕಾರ ಬಿಜೆಪಿ ಇದುವರೆಗೆ ಸ್ಪರ್ಧಿಸಿರುವ 329 ಸ್ಥಾನಗಳಲ್ಲಿ 100ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿದೆ. ಈ ಪ್ರತಿಕೂಲ ಪರಿಸ್ಥಿತಿ ಮತ್ತು ಮುಂಬರುವ ಹಂತಗಳಲ್ಲಿ ಮತ ಹೆಚ್ಚಿಸಲು ಮೋದಿ ಈಗ ಮುಸ್ಲಿಮರು ಅಥವಾ ಇಸ್ಲಾಂ ಧರ್ಮದ ವಿರುದ್ಧ ಮಾತನಾಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X