ಸಿಜೆಐ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ; ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ವಿಪಕ್ಷಗಳ ಕಳವಳ

Date:

Advertisements

ಗಣಪತಿ ಪೂಜೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಅವರ ಭೇಟಿಯ ಬಗ್ಗೆ ವಾಗ್ದಾಳಿ ನಡೆಸಿರುವ ವಿಪಕ್ಷಗಳು, ನ್ಯಾಯಾಂಗ ವ್ಯವಸ್ಥೆಯಲ್ಲಿನ ಪಾರದರ್ಶಕತೆಯನ್ನು ಪ್ರಶ್ನಿಸಿವೆ.

ಚಂದ್ರಚೂಡ್ ನಿವಾಸಕ್ಕೆ ಮೋದಿ ಭೇಟಿ ನೀಡಿರುವ ಫೋಟೋವನ್ನು ಹಂಚಿಕೊಂಡಿರುವ ಹಿರಿಯ ವಕೀಲೆ, ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ (ASG) ಇಂದಿರಾ ಜೈಸಿಂಗ್, “ಸಿಜೆಐ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿಯನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(SCBA) ಖಂಡಿಸಬೇಕು” ಎಂದಿದ್ದಾರೆ.

“ಭಾರತದ ಮುಖ್ಯ ನ್ಯಾಯಮೂರ್ತಿಗಳು ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರವನ್ನು ಪ್ರತ್ಯೇಕಿಸುವಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಸಿಜೆಐ ಅವರ ಸ್ವಾತಂತ್ರ್ಯ ಕಾರ್ಯನಿರ್ವಹಣೆ ಮೇಲಿನ ಎಲ್ಲ ವಿಶ್ವಾಸವನ್ನು ಕಳೆದುಕೊಂಡಿದ್ದೇವೆ” ಎಂದು ಅವರು ಹೇಳಿದ್ದಾರೆ.

Advertisements

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕೂಡ ಖಂಡಿಸಿದ್ದು, “ಖಾಸಗಿ ಭೇಟಿಗಾಗಿ ಮೋದಿ ಅವರಿಗೆ ಸಿಜೆಐ ಚಂದ್ರಚೂಡ್ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವುದು ಆಘಾತಕಾರಿಯಾಗಿದೆ. ಇದು ಕಾರ್ಯಾಂಗದಿಂದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುವ ನ್ಯಾಯಾಂಗಕ್ಕೆ ಕೆಟ್ಟ ಸಂದೇಶ ರವಾನಿಸುತ್ತದೆ. ಸರ್ಕಾರವು ಸಂವಿಧಾನದ ಮಿತಿಯಲ್ಲಿ ಕಾರ್ಯನಿರ್ವಹಿಸಬೇಕು. ಅದಕ್ಕಾಗಿಯೇ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಕಾರ್ಯನಿರ್ವಹಣೆಯ ಪ್ರತ್ಯೇಕತೆ ಇರಬೇಕು” ಎಂದಿದ್ದಾರೆ.

ಚಂದ್ರಚೂಡ್ ಮನೆಗೆ ಮೋದಿ ಭೇಟಿ ಬಗ್ಗೆ ವಾಗ್ದಾಳಿ ನಡೆಸಿರುವ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್, “ಸಂವಿಧಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದು ಕಿಡಿಕಾರಿದ್ದಾರೆ.

“ನ್ಯಾಯಾಂಗವು ವಿರೋಧ ಪಕ್ಷದ ನಾಯಕರ ವಿರುದ್ಧ ತೀರ್ಪು ನೀಡಿದೆ. ಅಂತಹ ಎಲ್ಲ ಪ್ರಕರಣಗಳನ್ನು ಅರ್ಥಮಾಡಿಕೊಳ್ಳಲು ಈ ಒಂದು ಭೇಟಿ ಸಾಕು” ಎಂದಿದ್ದಾರೆ.

“ದೇಶದ ಹಲವು ಸ್ಥಳಗಳಲ್ಲಿ ಗಣಪತಿ ಪೂಜೆಯನ್ನು ಆಯೋಜಿಸಲಾಗಿತ್ತು. ಆದರೆ, ಪ್ರಧಾನಿ ಮೋದಿ ಅವರು ಮುಖ್ಯ ನ್ಯಾಯಾಧೀಶರ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಇದು ಇಡೀ ನ್ಯಾಯಾಂಗದ ಮೇಲೆ ಅನುಮಾನ ಮತ್ತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನಾವು ಹೋರಾಡುತ್ತಿರುವ ಪ್ರಕರಣಗಳು ಮತ್ತು ಸಿಜೆಐ ಚಂದ್ರಚೂಡ್ ಅವರ ಪೀಠದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳಲ್ಲಿ ನಮಗೆ ನ್ಯಾಯ ಸಿಗುತ್ತದೆಯೇ ಎಂಬ ಅನುಮಾನವೂ ಇದೆ” ಎಂದು ರಾವತ್ ಆತಂಕ ವ್ಯಕ್ತಪಡಿಸಿದ್ದಾರೆ.

ಭೇಟಿಯನ್ನು ಸಮರ್ಥಿಸಿಕೊಂಡಿರುವ ಬಿಜೆಪಿ, “ಪ್ರತಿಪಕ್ಷಗಳು ಪ್ರಧಾನಿ ಭೇಟಿಯ ಬಗ್ಗೆ ಹುಯಿಲೆಬ್ಬಿಸುತ್ತಿವೆ” ಎಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X