“ಪ್ರಧಾನಿ ನರೇಂದ್ರ ಮೋದಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಲೂ ಹೆದರುತ್ತಿದ್ದಾರೆ. ಏಕೆಂದರೆ ಕೇಜ್ರಿವಾಲ್ ಬಂಧನದ ನಂತರ ಕೂಡ ಹೆಚ್ಚು ಅಪಾಯಕಾರಿಯಾಗಿದ್ದಾರೆ” ಎಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.
ಮುಂಬೈಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ವಶದಲ್ಲಿದ್ದುಕೊಂಡೇ ಸರ್ಕಾರವನ್ನು ನಡೆಸುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರವನ್ನು ಬೆಂಬಲಿಸಿದ್ದು, ಕೇಜ್ರಿವಾಲ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಸಿದ್ದಾರೆ.
#WATCH | Mumbai: Shiv Sena (UBT) MP Sanjay Raut says, “The INDIA alliance is organising a protest rally at Ramlila Maidan, Delhi. We all will attend that rally… PM Modi is afraid of Arvind Kejriwal. Now, Arvind Kejriwal is more dangerous, as he will now work from jail. So, the… pic.twitter.com/6ZhWrjeu7g
— ANI (@ANI) March 25, 2024
“ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜೈಲಿಗೆ ಹೋದ ನಾಯಕರು ಬಲಶಾಲಿಯಾಗಿದ್ದರು. ಅಂತೆಯೇ ಈಗ ಈಡಿಯಿಂದ ಬಂಧಿತರಾಗಿರುವ ಕೇಜ್ರಿವಾಲ್ ಅವರು, ಜೈಲಿನಿಂದಲೇ ಆಡಳಿತ ನಡೆಸಲು ಮುಂದಾಗಿರುವುದು ಶ್ಲಾಘನೀಯ” ಎಂದರು.
“ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟವು ಪ್ರತಿಭಟನಾ ಮೆರವಣಿಗೆ ಆಯೋಜಿಸುತ್ತಿದೆ. ನಾವೆಲ್ಲರೂ ಆ ಮೆರವಣಿಗೆಯಲ್ಲಿ ಭಾಗವಹಿಸುತ್ತೇವೆ” ಎಂದು ಹೇಳಿದರು.
“ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಕಂಡರೆ ಭಯವಿದೆ. ಹಾಗಾಗಿ ಅವರನ್ನು ಬಂಧಿಸಿಟ್ಟಿದ್ದಾರೆ. ಕೇಜ್ರಿವಾಲ್ ಅವರನ್ನು ಬಂಧಿಸಿದರೆ ತನಗೆ ನೆಮ್ಮದಿ ಸಿಗಬಹುದೆಂದು ಮೋದಿ ಬಯಸಿದ್ದರು. ಆದರೆ, ಅರವಿಂದ್ ಕೇಜ್ರಿವಾಲ್ ಈಗ ಇನ್ನೂ ಹೆಚ್ಚು ಅಪಾಯಕಾರಿಯಾಗಿದ್ದಾರೆ. ಸಿಎಂ ಆಗಿದ್ದುಕೊಂಡೇ ಅವರು ಜೈಲಿನಿಂದಲೇ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ, ಜನರು ಅವರ ಮಾತನ್ನು ಕೇಳುತ್ತಾರೆ. ಜತೆಗೆ ಅವರ ಬೆಂಬಲಕ್ಕೆ ಬರುತ್ತಾರೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬಂಧಿತರಾಗಿದ್ದ ನಾಯಕರು ಇದೇ ರೀತಿ ಕೆಲಸ ಮಾಡಿದ್ದರು. ಜೈಲಿನಿಂದ ಹೊರಬಂದಾಗ ಅವರು ಜನಬೆಂಬಲ ಪಡೆಯುವ ಮೂಲಕ ಇನ್ನಷ್ಟು ಬಲಶಾಲಿಯಾಗಿದ್ದರು” ಎಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ಹಾಡಿ, ಹೊಗಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಅನುಕೂಲ; 20 ಸ್ಥಾನ ಗೆಲ್ತೇವೆ: ಸಿಎಂ ಸಿದ್ದರಾಮಯ್ಯ
ಸೀಟು ಹಂಚಿಕೆಯ ಬಗ್ಗೆ ಕೇಳಿದಾಗ, “ಶಿವಸೇನೆಯ ಉದ್ಧವ್ ಠಾಕ್ರೆ ಬಣದ 15 ರಿಂದ 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗುವುದು” ಎಂದು ರಾವತ್ ಹೇಳಿದರು.