ಚೀನಾದಲ್ಲಿ ನ್ಯುಮೋನಿಯಾ | ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Date:

Advertisements
  • ಡಬ್ಲ್ಯುಎಚ್‌ಒ ಕೂಡ ಇದರ ಬಗ್ಗೆ ಎಚ್ಚರಿಸಿದೆ
  • ಎಲ್ಲ ಸೌಲಭ್ಯ ಮಾಡಿಕೊಳ್ಳುವಂತೆ ಹೇಳಿದ್ದೇವೆ

ಚೀನಾದಲ್ಲಿ ನ್ಯುಮೋನಿಯಾ ಶುರುವಾಗಿದೆ. ಡಬ್ಲ್ಯುಎಚ್‌ಒ ಕೂಡ ಇದರ ಬಗ್ಗೆ ಎಚ್ಚರಿಸಿದೆ. ಪ್ಯಾನಿಕ್ ಆಗುವಂತ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ಕೊಟ್ಟಿದೆ. ನಾವು ಆಸ್ಪತ್ರೆಗಳಿಗೆ ಸೂಚನೆ ಕೊಟ್ಟಿದ್ದೇವೆ. ಎಲ್ಲ ಸೌಲಭ್ಯ ಮಾಡಿಕೊಳ್ಳುವಂತೆ ಹೇಳಿದ್ದೇವೆ” ಎಂದರು.

“ಡಿಸೆಂಬರ್‌ನಲ್ಲಿ ಕೋಲ್ಡ್ ಹೆಚ್ಚಿರುತ್ತದೆ. ಕೆಮ್ಮು, ಜ್ವರ ಬಂದರೆ ತಕ್ಷಣ ಚಿಕಿತ್ಸೆ ಪಡೆಯಬೇಕು. ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಇದೆ. ಸರಿಯಾಗಿ‌ ಆಸ್ಪತ್ರೆಗೆ ಡ್ರಗ್ಸ್ ಸಪ್ಲೈ ‌ಆಗ್ತಿಲ್ಲ. ಇದರಿಂದ ಸಮಸ್ಯೆಯಾಗ್ತಿದೆ. ಇದರ ಬಗ್ಗೆ ನಾವು ಗಮನಹರಿಸಿದ್ದೇವೆ” ಎಂದು ಹೇಳಿದರು.

Advertisements

“ಭ್ರೂಣ ಹತ್ಯೆಗಳು ನಡೆಯುತ್ತಿವೆ. ಹೆಣ್ಣುಮಕ್ಕಳ ಅನುಪಾತ ಕಡಿಮೆಯಾಗ್ತಿದೆ. ಇದರಿಂದ ಭ್ರೂಣ ಹತ್ಯೆ ಆಗ್ತಿದೆ ಅನ್ನೋದು ಅರ್ಥ ಒಂದೇ ಕಡೆ ಅಲ್ಲ, ರಾಜ್ಯದ ಹಲವು ಕಡೆ ಇದೆ. ಇದೊಂದು ಸಾಮಾಜಿಕ ಪಿಡುಗು. ಕೇವಲ ಆರೋಗ್ಯ ಇಲಾಖೆಗೆ ಸೀಮಿತವಲ್ಲ. ಇದೊಂದು ಸೋಶಿಯಲ್ ಪ್ರಾಬ್ಲಂ ಕೂಡ ಹೌದು. ನಾವು ಇದನ್ನ ಗಂಭೀರವಾಗಿ ತೆಗೆದುಕೊಂಡಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಖ್ಯಮಂತ್ರಿ ಜನಸ್ಪಂದನ; ಆಡಳಿತ ವೈಫಲ್ಯದ ವಿರಾಟ್ ದರ್ಶನ

“ಭ್ರೂಣ ಹತ್ಯೆ ಪ್ರಕರಣ ವಿಚಾರವಾಗಿ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ಕೊಡಬೇಕು. ಎಷ್ಟು ಅಬಾರ್ಷನ್ ಆಗ್ತಿದೆ ಐಡೆಂಟಿಫೈ ಮಾಡಬೇಕು. ರಿಜಿಸ್ಟರ್ ಆಗಿ ಬರದೇ ಹೋದರೆ ಚೆಕ್ ಮಾಡಬೇಕು. ಇದರ ಬಗ್ಗೆ ಸರಿಯಾದ ಪ್ರೊಸೀಜರ್ ಆಗಬೇಕು” ಎಂದು ಸೂಚಿಸಿದ್ದೇನೆ ಎಂದರು.

“ನಾಳೆ, ನಾಡಿದ್ದು ಇದರ ಬಗ್ಗೆ ಪ್ರೊಸೀಜರ್ ಮಾಡುತ್ತೇವೆ. ನಾವು ಕೂಡ ಇಡೀ ರಾಜ್ಯದಲ್ಲಿ ಪ್ರವಾಸ ಮಾಡ್ತೇವೆ. ಖುದ್ದು ನಾವೇ ಪರಿಶೀಲನೆ ಮಾಡ್ತೇವೆ. ಈ ಬಗ್ಗೆ ಸಚಿವರುಗಳ ಸಮಿತಿ ಕೂಡ ರಚನೆ ಮಾಡುತ್ತೇವೆ. ನಮ್ಮ ಅಧಿಕಾರಿಗಳು ಮಂಡ್ಯಕ್ಕೂ ‌ಹೋಗಿದ್ದಾರೆ” ಎಂದರು.

ಆಯುಷ್ಮಾನ್ ಭಾರತ್ ಕಾರ್ಡ್ ಸಮಸ್ಯೆ ವಿಚಾರವಾಗಿ ಮಾತನಾಡಿದ ಸಚಿವರು, “ಕಾರ್ಡ್‌ಗಳು ವಿತರಣೆಯಾಗಬೇಕು. 1500 ಕೋಟಿ ರೂ.ಗಳನ್ನು ಆಯುಷ್ಮಾನ್ ಕಾರ್ಡ್ ಬಳಸುವ ಆಸ್ಪತ್ರೆಗಳಿಗೆ ಕೊಡ್ತಿದ್ದೇವೆ. ಬಿಪಿಎಲ್ ಕಾರ್ಡ್ ದಾರರಿಗೆ ಇದು ಉಪಯೋಗವಾಗಲಿದೆ. ಆಯುಷ್ಮಾನ್ ಕಾರ್ಡ್ ಇರಲೇಬೇಕೆಂದಿಲ್ಲ. ಬಿಪಿಎಲ್ ಕಾರ್ಡ್ ಇದ್ರೂ ಟ್ರೀಟ್ ಮೆಂಟ್ ಸಿಗಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X