ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಪ್ರಕರಣ | ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

Date:

Advertisements

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಎಸ್‌ವೈ, “ತಾಯಿ ಮಗಳು ತೊಂದರೆಯಲ್ಲಿದ್ದೇವೆ ಎಂದು ಹೇಳುತ್ತಾ ಕಣ್ಣೀರು ಹಾಕಿಕೊಂಡು ಬಂದಿದ್ದರು. ಅವರಿಗೆ ಸಹಾಯ ಮಾಡಿದೀನಿ. ಆದರೆ, ಈಗ ಈ ರೀತಿ ದೂರು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್‌ ಕಾಲನಿಯಲ್ಲಿರುವ ತಮ್ಮ ಮನೆಯ ಬಳಿ ತುರ್ತು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ, “ನನ್ನ ಮೇಲೆ ಯಾರೋ ಒಬ್ಬ ಹೆಣ್ಣು ಮಗಳು ಕಂಪ್ಲೇಟ್ ಕೊಟ್ಟಿದ್ದಾರೆ ಅಂತ ಗೊತ್ತಾಯ್ತು. ಯಾರೋ ತಾಯಿ ಮಗಳು ಒಂದು ತಿಂಗಳ ಹಿಂದೆ ನನ್ನ ಹತ್ತಿರ ಬಂದಿದ್ದರು. ಅವರು ಅವತ್ತು ನನಗೆ ಅನ್ಯಾಯ ಆಗಿದೆ ಅಂತ ಹೇಳಿದ್ದರು. ಹಲವೊಮ್ಮೆ ಬಂದು ಮನೆ ಬಳಿ ಕಾಯುತ್ತಿದ್ದರು. ಒಮ್ಮೆ ಕಣ್ಣೀರು ಹಾಕುತ್ತಿದ್ದುದನ್ನು ನೋಡಿ, ಮನೆಯೊಳಗೆ ಕರೆದೊಯ್ದೆ. ಏನು ಸಮಸ್ಯೆ ಎಂದು ಆಲಿಸಿ ಬೆಂಗಳೂರು ಪೊಲೀಸ್ ಕಮಿಷನರ್‌ ದಯಾನಂದ್ ಅವರಿಗೆ ಫೋನ್ ಮಾಡಿ ಇವರ ಸಮಸ್ಯೆ ಬಗೆಹರಿಸಲು ಹೇಳಿದ್ದೆ. ಅಲ್ಲೇ, ನನ್ನ ವಿರುದ್ಧವೇ ಮಾತಾಡೋಕೆ ಶುರು ಮಾಡಿದ್ದರು” ಎಂದು ಹೇಳಿದರು.

“ನನ್ನ ವಿರುದ್ಧವೇ ಮಾತಾಡೋಕೆ ಶುರು ಮಾಡಿದಾಗ ಏನೋ ಆರೋಗ್ಯ ಸಮಸ್ಯೆ ಇದೆ ಅಂತ ಅನಿಸ್ತು. ಹೆಚ್ಚು ಮಾತಾಡಿದರೆ ಆಗಲ್ಲ ಎಂದು ಪೊಲೀಸರ ಬಳಿಗೆ ಕಳಿಸಿಕೊಟ್ಟೆ. ಇದನ್ನು ಈಗ ಬೇರೆ ರೀತಿಯಲ್ಲಿ ತಿರುಗಿಸಿದ್ದಾರೆ. ತೊಂದರೆ ಇದೆ ಅಂದಿದ್ದಕ್ಕೆ ಹಣವನ್ನೂ ಕೊಟ್ಟು ಕಳಿಸಿದ್ದೆ. ಒಬ್ಬರಿಗೆ ಉಪಕಾರ ಮಾಡುವುದಕ್ಕೆ ಹೋಗಿ ಹೀಗಾಗಿದೆ” ಎಂದು ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬಾಲಕಿ ಮೇಲೆ ಲೈಂಗಿಕ‌ ದೌರ್ಜನ್ಯ | ಯಡಿಯೂರಪ್ಪ ವಿರುದ್ಧ ಎಫ್‌ಐಆರ್

ಈ ದೂರಿನ ಹಿಂದೆ ರಾಜಕೀಯ ಪ್ರೇರಿತವೇ ಎಂದು ಕೇಳಿದಾಗ, “ಪ್ರಕರಣ ದಾಖಲಾಗಿದೆ. ರಾಜಕಾರಣ ಯಾರೂ ಮಾಡ್ತಿಲ್ಲ. ಇದನ್ನು ಹೇಗೆ ಎದುರಿಸಬೇಕೋ ಹಾಗೆಯೇ ಎದುರಿಸುವೆ. ಆದರೆ ಇದನ್ನೆಲ್ಲ ನಿರೀಕ್ಷೆ ಮಾಡಿರಲಿಲ್ಲ” ಎಂದು ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X