ವಿಷ ವಿವಾದ | ಯತ್ನಾಳ್‌ ಉಚ್ಚಾಟನೆಗೆ ಡಿ ಕೆ ಶಿವಕುಮಾರ್ ಆಗ್ರಹ

Date:

  • ಬಿಜೆಪಿ ನಾಯಕರ ಕ್ಷಮೆಗೆ ಒತ್ತಾಯಿಸಿದ ಡಿಕೆಶಿ
  • ಪತ್ರಿಕಾಗೋಷ್ಠಿ ನಡೆಸಿ ಯತ್ನಾಳ್ ವಿರುದ್ಧ ವಾಗ್ದಾಳಿ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಸಭೆಯೊಂದರಲ್ಲಿ ಪ್ರಧಾನಿ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿದ್ದರು. ಖರ್ಗೆ ಹೇಳಿಕೆ ಬೆನ್ನಲ್ಲೇ ಯತ್ನಾಳ್ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆಗೆ ಹೋಲಿಸಿದ್ದಾರೆ.

ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಡಿ ಕೆ ಶಿವಕುಮಾರ್, “ಸೋನಿಯಾ ಗಾಂಧಿ ವಿಷಕನ್ಯೆ ಎಂಬ ಹೇಳಿಕೆ ಮೂಲಕ ಇಡೀ ಸ್ತ್ರೀ ಕುಲವನ್ನೇ ಬಸನಗೌಡ ಪಾಟೀಲ ಯತ್ನಾಳ್ ಅವಮಾನಿಸಿದ್ದಾರೆ” ಎಂದು ಆಗ್ರಹಿಸಿದ್ದಾರೆ.

“ಭಾರತದ ಎಲ್ಲ ಮಹಿಳೆಯರನ್ನೂ ಯತ್ನಾಳ್ ಅವಮಾನಿಸಿದ್ದಾರೆ. ಈ ಘಟನೆಗೆ ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿ ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಈ ಕೂಡಲೇ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು” ಎಂದಿದ್ದಾರೆ.

“ಸೋನಿಯಾ ಗಾಂಧಿ ದೇಶಕ್ಕಾಗಿ ತಮ್ಮ ಅತ್ತೆ ಮತ್ತು ಗಂಡನನ್ನು ಕಳೆದುಕೊಂಡವರು. ಎರಡು ಬಾರಿ ದೇಶದ ಪ್ರಧಾನಿಯಾಗುವ ಅವಕಾಶ ಸಿಕ್ಕರೂ ಡಾ ಮನಮೋಹನ್ ಸಿಂಗ್ ಅವರಂತಹ ಶ್ರೇಷ್ಠ ಆರ್ಥಿಕ ತಜ್ಞನಿಗೆ ಅವಕಾಶ ಕಲ್ಪಿಸಿದರು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಷ ವಿವಾದ | ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

“ಅಂತಹ ಧೀಮಂತ ಮಹಿಳೆಯ ಕುರಿತು ಯತ್ನಾಳ್ ಕೀಳುಮಟ್ಟದ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ” ಎಂದು ಡಿಕೆಶಿ ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಗುಡುಗಿ ಹಾಡಿದ ಕವಿ ಸಿದ್ದಲಿಂಗಯ್ಯ: ಅಗ್ರಹಾರ ಕೃಷ್ಣಮೂರ್ತಿಯವರ ನುಡಿನಮನ

ಜೂ. 11ರಂದು ಕವಿ ಸಿದ್ದಲಿಂಗಯ್ಯನವರು ಇಲ್ಲವಾದ ದಿನ. ಅವರೊಂದಿಗೆ ಒಡನಾಡಿದ ಅಗ್ರಹಾರ...

ದೆಹಲಿ ಮಾಜಿ ಸಿಎಂ ಆತಿಶಿ ಬಂಧಿಸಲಾಗಿದೆ ಎಂದ ಎಎಪಿ: ಪೊಲೀಸರ ನಕಾರ

ದೆಹಲಿಯ ಕಲ್ಕಾಜಿಯ ಭೂಮಿಹೀನ್ ಶಿಬಿರದ ನಿವಾಸಿಗಳನ್ನು ಭೇಟಿ ಮಾಡಲು ಹೋದಾಗ ದೆಹಲಿ...

ವಿ. ಪರಿಷತ್ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ನಿಧನ; ಹೊರಟ್ಟಿ ಸಂತಾಪ

ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರು ಮಂಗಳವಾರ...

Download Eedina App Android / iOS

X