ವಿಷ ವಿವಾದ | ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ ಎಂದ ಯತ್ನಾಳ್‌

Date:

  • ಯತ್ನಾಳ್‌ಗೆ ಮಾನಸಿಕ ಸ್ಥಿಮಿತ ಇಲ್ಲವೆಂದ ಉಗ್ರಪ್ಪ
  • ಬಿಜೆಪಿ ಪ್ರಚಾರ ಸಭೆಯಲ್ಲಿ ಯತ್ನಾಳ್ ಹೇಳಿಕೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿಷಕನ್ಯೆಗೆ ಹೋಲಿಸಿದ್ದಾರೆ.

ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಬಸನಗೌಡ ಪಾಟೀಲ್, ಸೋನಿಯಾ ಗಾಂಧಿ ಅವರನ್ನು ಚೀನಾ ಮತ್ತು ಪಾಕಿಸ್ತಾನದ ಎಜೆಂಟ್ ಎಂದು ಕರೆದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಸಭೆಯೊಂದರಲ್ಲಿ ಪ್ರಧಾನಿ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿದ್ದರು. ಖರ್ಗೆ ಹೇಳಿಕೆ ಬೆನ್ನಲ್ಲೇ ಯತ್ನಾಳ್ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆಗೆ ಹೋಲಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೋದಿ ನಾಗರಹಾವು ಆದರೆ ಸೋನಿಯಾ ಗಾಂಧಿ ವಿಷಕನ್ಯೆನಾ? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಹುಚ್ಚ” ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ದ ವಾಗ್ದಾಳಿ ನಡೆಸಿರುವ ಯತ್ನಾಳ್, “ಸಿದ್ದರಾಮಯ್ಯ ಲಿಂಗಾಯತರನ್ನು ಭ್ರಷ್ಟರು ಎನ್ನುತ್ತಾರೆ. ವೈಯಕ್ತಿಕವಾಗಿ ಅವರು ನಮ್ಮನ್ನು ಎಷ್ಟೇ ಬೈಯಲಿ. ಆದರೆ, ಇಡೀ ಸಮುದಾಯದ ಬಗ್ಗೆ ಮಾತನಾಡಬಾರದು” ಎಂದರು.

ಸೋನಿಯಾ ಗಾಂಧಿ ರಾಹುಲ್ ಗಾಂಧಿ ಅವರ ಕುರಿತ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ವಿಎಸ್‌ ಉಗ್ರಪ್ಪ, “ಯತ್ನಾಳ್ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಹೆಣ್ಣನ್ನು ತಾಯಿ ಎಂದು ಗೌರವಿಸಬೇಕಾಗಿರುವುದು ಭಾರತದ ಸಂಸ್ಕೃತಿ. ಹೀಗಿರುವಾಗ ಒಬ್ಬ ತಾಯಿಗೆ ವಿಷಕನ್ಯೆ ಎಂದು ಕರೆಯಲು ನಾಚಿಕೆ ಆಗಬೇಕು” ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಷ ವಿವಾದ | ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

“ಯತ್ನಾಳ್‌ ಮಾತಿಗೆ ಹಿಡಿತವೇ ಇಲ್ಲ. ಒಬ್ಬ ಮನುಷ್ಯನ ಯೋಗ್ಯತೆ ಏನು ಎಂದು ಅವರ ಮಾತು ತೋರಿಸುತ್ತದೆ. ಇಂತವರನ್ನು ಒದ್ದು ಜೈಲಿಗೆ ಹಾಕಬೇಕು” ಎಂದು ಉಗ್ರಪ್ಪ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...