9 ರಾಜ್ಯಗಳಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು 4 ನೇ ಹಂತದ ಮತದಾನ

Date:

Advertisements

ಒಂಬತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ 96 ಕ್ಷೇತ್ರಗಳ ಮತದಾರರು ಇಂದು (ಮೇ 13) ನಾಲ್ಕನೇ ಹಂತದ ಚುನಾವಣೆಯಲ್ಲಿ ನಡೆಯುತ್ತಿದೆ. ಜೊತೆಗೆ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿಯೂ ಕೂಡಾ ಏಕಕಾಲಕ್ಕೆ ವಿಧಾನಸಭೆ ಚುನಾವಣೆಯೂ ನಡೆಯಲಿದೆ.

ಆಂಧ್ರ ಪ್ರದೇಶ (25), ಬಿಹಾರ (5), ಜಾರ್ಖಂಡ್ (4), ಮಧ್ಯಪ್ರದೇಶ (8), ಮಹಾರಾಷ್ಟ್ರ (11), ಒಡಿಶಾ (4), ತೆಲಂಗಾಣ (17), ಉತ್ತರ ಪ್ರದೇಶ (13) , ಪಶ್ಚಿಮ ಬಂಗಾಳ (8), ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ (1) ಇಂದು ಮತದಾನ ನಡೆಯುತ್ತಿದೆ.

96 ಸ್ಥಾನಗಳಲ್ಲಿ ನಲವತ್ತೆರಡು ಕ್ಷೇತ್ರಗಳು (ಶೇ. 44) ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹರಡಿಕೊಂಡಿವೆ. ಈ ಹಂತದಲ್ಲಿ ದಕ್ಷಿಣದ ರಾಜ್ಯಗಳಲ್ಲಿ ಮತದಾನ ಮುಕ್ತಾಯವಾಗಲಿದೆ.

Advertisements

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ಕಾಂಗ್ರೆಸ್ ಅನ್ನು ಹಾಡಿ ಹೊಗಳಿ ಬಿಜೆಪಿಯನ್ನು ತೆಗಳಿದ ಚಕ್ರವರ್ತಿ ಸೂಲಿಬೆಲೆ!

2019 ರ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮೊದಲ ಚುನಾವಣೆ ನಡೆಯಲಿದೆ. ಕೇಂದ್ರಾಡಳಿತ ಪ್ರದೇಶದ ಎರಡು ಲೋಕಸಭಾ ಸ್ಥಾನಗಳಲ್ಲಿ ಒಂದಾದ ಶ್ರೀನಗರ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಇನ್ನು ಅನಂತನಾಗ್-ರಾಜೌರಿ ಕ್ಷೇತ್ರದಲ್ಲಿ ಮೇ 25ರಂದು ಮತದಾನ ನಡೆಯಲಿದೆ.

ಈ ಹಂತದ ಚುನಾವಣೆಯಲ್ಲಿ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್‌ನಂತಹ ಅಲಿಪ್ತ ಪಕ್ಷಗಳು ಪ್ರಾಬಲ್ಯ ಹೊಂದಿವೆ. ಈ ಎರಡೂ ಪಕ್ಷಗಳು ಕೂಡಾ ಸಂಸತ್ತಿನಲ್ಲಿ ಅನೇಕ ಬಾರಿ ಕೇಂದ್ರ ಸರ್ಕಾರದ ಯೋಜನೆಗಳಿಗೆ ಬೆಂಬಲ ನೀಡಿದೆ. ಆದರೆ ಈ ಚುನಾವಣೆಯಲ್ಲಿ ಕೇಂದ್ರದಲ್ಲಿರುವ ಬಿಜೆಪಿ ಕೂಟವಾಗಲಿ ಅಥವಾ ಇಂಡಿಯಾ ಮೈತ್ರಿಕೂಟವಾಗಲಿ ಯಾವುದಕ್ಕೂ ಬಹಿರಂಗವಾಗಿ ಬೆಂಬಲ ಘೋಷಿಸಿಲ್ಲ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X