ರಾಮಪಥದಲ್ಲಿ ಗುಂಡಿಗಳು, ರಾಮಮಂದಿರ ಸೋರಿಕೆ; ಬಿಜೆಪಿ ವಿರುದ್ಧ ಟೀಕೆ

Date:

Advertisements

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ಆರು ತಿಂಗಳ ನಂತರ ಸುರಿದ ತುಂತುರು ಮಳೆ ಅಯೋಧ್ಯೆಯ ಚಿತ್ರಣವನ್ನು ಬದಲಿಸಿದೆ. ಪಟ್ಟಣವು ಜಲಾವೃತಗೊಂಡು ರಸ್ತೆಗಳು ಗುಂಡಿಬಿದ್ದಿವೆ. ರಾಮಮಂದಿರ ಛಾವಣಿ ಸೋರುತ್ತಿದೆ. ಇದು, ಅಯೋಧ್ಯೆಯಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಪ್ರಶ್ನೆಗಳು ಮತ್ತು ಚರ್ಚೆಗಳನ್ನು ಹುಟ್ಟುಹಾಕಿದೆ.

ಲೋಕಸಭಾ ಚುನಾವಣೆಯ ವಸ್ತಿಲಿನಲ್ಲಿ ತರಾತುರಿಯಲ್ಲಿ ಅರ್ಧಂಬರ್ಧ ನಿರ್ಮಾಣಗೊಂಡಿದ್ದ ರಾಮಮಂದಿರವನ್ನು ಜನವರಿ 22ರಂದು ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಆಗ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ಮಾಡಲಾಗಿತ್ತು. ಆದರೆ, ಆ ಸೌಂದರ್ಯ ಕಳಪೆ ಗುಣಮಟ್ಟದ್ದು ಎಂಬುದನ್ನು ಈ ವರ್ಷದ ಮೊದಲ ಮಳೆ ಬಟಾಬಯಲುಮಾಡಿದೆ. ರಾಮಮಂದಿರಕ್ಕೆ ಹೋಗಲು ಹೊಸದಾಗಿ ನಿರ್ಮಿಸಲಾಗಿದ್ದ 14 ಕಿ.ಮೀ ಉದ್ದದ ‘ರಾಮ್‌ ಫಥ್’ ಎಂಬ ರಸ್ತೆ ಉದ್ದಕ್ಕೂ ಗುಂಡಿಬಿದ್ದಿದೆ.

ವಾಹನ ಸವಾರರಿಗೆ ತೊಂದರೆಯಾಗದಂತೆ ಆ ರಸ್ತೆಯನ್ನು ಅಧಿಕಾರಿಗಳು ತಕ್ಷಣವೇ ದುರಸ್ತಿ ಮಾಡಿಸಿದ್ದಾರೆ. ಅದಾಗ್ಯೂ, ಯೋಗಿ ಆದಿತ್ಯನಾಥ್ ಸರ್ಕಾರವು ‘ನಿರ್ಲಕ್ಷ್ಯ’ದ ಆರೋಪದ ಮೇಲೆ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

Advertisements

“ದೇವಾಲಯದ ಮೇಲ್ಛಾವಣಿಯಿಂದ ನೀರು ಸೋರುತ್ತಿದ್ದು, ದೇವಾಲಯದ ಆವರಣದಲ್ಲಿ ನೀರು ಸಂಗ್ರಹವಾಗುತ್ತಿದೆ. ದೇವಸ್ಥಾನದ ಆವರಣದಲ್ಲಿದ್ದ ಮಳೆ ನೀರನ್ನು ಹೊರ ಹಾಕಲು ಯಾವುದೇ ವ್ಯವಸ್ಥೆ ಇಲ್ಲ” ಎಂದು ರಾಮಮಂದಿರದ ಮುಖ್ಯ ಅರ್ಚಕರು ದೂರಿದ್ದಾರೆ.

ಸೋರಿಕೆಯ ಆರೋಪವನ್ನು ತಿರಸ್ಕರಿಸಿದ ದೇವಾಲಯದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, “ದೇವಾಲಯದ ಛಾವಣಿಯಿಂದ ಗರ್ಭಗುಡಿಗೆ ‘ಒಂದು ಹನಿ ನೀರು’ ಬಂದಿಲ್ಲ. ದೇವಸ್ಥಾನದಲ್ಲಿ ಮಳೆ ನೀರು ಹರಿದು ಹೋಗಲು ಉತ್ತಮ ವ್ಯವಸ್ಥೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿರುವುದು ಕಂಡುಬಂದಿದ್ದರೂ, ದೇವಾಲಯದ ಮೊದಲ ಮಹಡಿಯಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯಿಂದಾಗಿ ಕೊಳವೆ ಪೈಪ್‌ನಿಂದ ನೀರು ಬರುತ್ತಿದೆ” ಎಂದು ರೈ ಸಮರ್ಥಿಸಿಕೊಂಡಿದ್ದಾರೆ.

“ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಪೂಜಾ ಸ್ಥಳಗಳು ಕೂಡ ಬಿಜೆಪಿಗೆ ಲೂಟಿಯ ಮೂಲಗಳಾಗಿವೆ” ಎಂದು ಕಾಂಗ್ರೆಸ್‌ ಅಧ್ಯಕ್ಷ ಅಧ್ಯಕ್ಷ ಅಜಯ್ ರೈ ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X