‘ಮಹಾ’ ವಿಮೆ | ಸ್ವಾಭಿಮಾನ ಇಲ್ಲದ ಅಧಿಕಾರ ತೃಣಕ್ಕೆ ಸಮ : ಜೆಡಿಎಸ್‌

Date:

Advertisements
  • ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಜೆಡಿಎಸ್‌ ಒತ್ತಾಯ
  • ಕರ್ನಾಟಕ ಗಡಿಯೊಳಗೆ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ

ರಾಜ್ಯದ ಗಡಿಯೊಳಗಿನ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಿರುವ ಕುರಿತು ಜೆಡಿಎಸ್ ಪ್ರತಿಕ್ರಿಯೆ ನೀಡಿದ್ದು, “ಸ್ವಾಭಿಮಾನ ಇಲ್ಲದ ಅಧಿಕಾರ ತೃಣಕ್ಕೆ ಸಮ!” ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದೆ.

ಮಹಾರಾಷ್ಟ್ರ ಸರ್ಕಾರದ ಗಡಿಯೊಳಗಿರುವ ಸುಮಾರು 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದೆ.

“ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೂ ಅನ್ವಯವಾಗುವಂತೆ ಜನಾರೋಗ್ಯ ಯೋಜನೆ ಜಾರಿಮಾಡಿ ಮಹಾರಾಷ್ಟ್ರದ ಬಿಜೆಪಿ ಸರ್ಕಾರ ಸರ್ಕಾರ ಆದೇಶ ಹೊರಡಿಸಿದೆ. ದುರಹಂಕಾರದ ಮದ ಏರಿದರೆ, ವಿವೇಚನೆ ಸತ್ತುಹೋಗುತ್ತದೆ ಎಂಬುದಕ್ಕೆ ಅವರ ಈ ನಡೆಯೇ ಸಾಕ್ಷಿ” ಎಂದು ಟೀಕಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ‘ಮಹಾ’ ವಿಮೆ | ಆದೇಶ ವಾಪಾಸು ಪಡೆಯದಿದ್ದರೆ ಪರಿಣಾಮ ನೆಟ್ಟಗಾಗದು ಎಂದ ಸಿದ್ದರಾಮಯ್ಯ

“ಕನ್ನಡಿಗರು ಮತ್ತು ಇಲ್ಲಿನ ಕಳಪೆ ಬಿಜೆಪಿ ಸರ್ಕಾರದ ಆಕ್ಷೇಪವನ್ನು ಸಾರಾಸಗಟಾಗಿ ಕಡೆಗಣಿಸಲಾಗಿದೆ” ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಸ್ವತಃ ಬಿಜೆಪಿ ಪಕ್ಷದವರೇ ಆದ ದೇಶದ ಗೃಹ ಸಚಿವ ಅಮಿತ್ ಶಾ ‘ಗಡಿ ತಂಟೆ ತೀರ್ಪು ಬರುವವರೆಗೂ ಹಸ್ತಕ್ಷೇಪ ಸಲ್ಲ’ ಎಂದು ಸಂಧಾನ ಸಭೆಯಲ್ಲಿ ಹೇಳಿದ್ದರು. ಅವರ ಮಾತಿಗೂ ಮಹಾರಾಷ್ಟ್ರ ಕವಡೆಕಾಸಿನ ಕಿಮ್ಮತ್ತು ಕೊಟ್ಟಿಲ್ಲ” ಎಂದು ಹೇಳಿದ್ದಾರೆ.

“ಮಹಾರಾಷ್ಟ್ರದ ಸರ್ಕಾರ ಕೇಂದ್ರದ ಎಲ್ಲ ಸೂಚನೆಗಳನ್ನು ಗಾಳಿಗೆ ತೂರಿದೆ. ಇದು ಒಕ್ಕೂಟ ವ್ಯವಸ್ಥೆ ವಿರೋಧಿತನದ ಪರಮಾವಧಿ” ಎಂದು ಟ್ವೀಟ್ ಮಾಡಿದೆ.

“ಇಡೀ ಆಡಳಿತವನ್ನೇ ನಿಸ್ತೇಜ ಮಾಡಿರುವ ಬಿಜೆಪಿ ಸರ್ಕಾರ ಈಗಲೂ ಕಣ್ಣುಮುಚ್ಚಿ ಕುಳಿತರೆ ಕನ್ನಡಿಗರ ಅಸ್ಮಿತೆ ಹಾಳುಗೆಡವಿದಂತೆ. ಸಿಎಂ ಬಸವರಾಜ ಬೊಮ್ಮಾಯಿ ಅವರೇ, ಬೆನ್ನು ಮೂಳೆ ಸದೃಢವಾಗಿದ್ದರೆ ಕೂಡಲೇ ಇದರ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಆಗ್ರಹಿಸಿದ್ದಾರೆ.

“ನಿಮ್ಮದೇ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರದ‌ ಮೇಲೆ‌ ಒತ್ತಡ ಹೇರಿ. ಸ್ವಾಭಿಮಾನ ಇಲ್ಲದ ಅಧಿಕಾರ ತೃಣಕ್ಕೆ ಸಮ!” ಎಂದು ಜೆಡಿಎಸ್ ಟೀಕಿಸಿದೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X