ಕಾಂಗ್ರೆಸ್​ನವರು ಸುಳ್ಳು ಹೇಳುವವರು: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಲ್ಹಾದ್‌ ಜೋಶಿ ವಾಗ್ದಾಳಿ

Date:

Advertisements

ಕರ್ನಾಟಕದಲ್ಲಿ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂತು. ಆದರೆ ಈಗ ನಿತ್ಯದ ಜೀವನಕ್ಕೆ ಬೇಕಾದ ಎಲ್ಲ ದರಗಳು ಹೆಚ್ಚಾಗಿವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದರು.

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಖಂಡಿಸಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಸುಳ್ಳು ಗ್ಯಾರಂಟಿ ಕೊಟ್ಟಿತ್ತು. ಅದು ಈಗ ಎಕ್ಸ್​ಪೋಸ್ ಆಗುತ್ತಿದೆ. ಉಚಿತ ವಿದ್ಯುತ್ ಎಂದರು, ಈಗ ವಿದ್ಯುತ್ ದರ ಹೆಚ್ಚಳವಾಗಿದೆ. ಕಾಕಾಸಾಹೇಬ್ ಪಾಟೀಲ್​, ಮಹದೇವಪ್ಪ ನಿನಗೂ ಫ್ರೀ ಅಂದರು. ಹಾಲು, ಪೆಟ್ರೋಲ್, ಡಿಸೇಲ್​ಗೆ ಸೆಸ್ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಸ್ತಿ ನೋಂದಣಿ​ ದರ ಹೆಚ್ಚಳವಾಗಿದೆ. ಮದ್ಯದ ದರ ಹೆಚ್ಚಳವಾಗಿದೆ. ಈಗ ಸರ್ಕಾರ ಬಸ್​ ಟಿಕೆಟ್ ದರ ಕೂಡ ಹೆಚ್ಚಳ ಮಾಡಿದೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲು ಹೊರಟಿದ್ದಾರೆ. ಅಧಿಕಾರಕ್ಕಾಗಿ ಯಾವ ಕೀಳುಮಟ್ಟಕ್ಕೂ ಇಳಿಯಲು ಕಾಂಗ್ರೆಸ್​​ನವರು ಹಿಂದೆ ಸರಿಯಲ್ಲ. ಕಾಂಗ್ರೆಸ್​ನವರು ಬರೀ ಸುಳ್ಳು ಹೇಳುತ್ತಾರೆ, ನಿರ್ಲಜ್ಜರು ಎಂದು ವಾಗ್ದಾಳಿ ನಡೆಸಿದರು.

Advertisements

ಸಾರಿಗೆ ಸಂಸ್ಥೆ 2,000 ಕೋಟಿ ರೂಪಾಯಿ ಸಾಲ ಮಾಡುವ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ. ಸಿದ್ದರಾಮಯ್ಯ ಸರ್ಕಾರ ದಿವಾಳಿ ಆಗಿದೆ ಎಂದು ಜೋಶಿ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ಗೆಲುವನ್ನು ಮಾರ್ಕೆಟಿಂಗ್ ಮಾಡಿಕೊಳ್ಳಬೇಕೇ ಸರ್ಕಾರ?

ಕೆಎಸ್ಆರ್​ಟಿಸಿ ಬಸ್ ದರವನ್ನು ಶೇಕಡ 15ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿತ್ತು. ಇದರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಈ ಮಧ್ಯೆ, ಸರ್ಕಾರಿ ಬಸ್ ಟಿಕೆಟ್ ದರ ಏರಿಕೆಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹೆಣ್ಣು ಮಕ್ಕಳಿಗೆ ಉಚಿತ ಉಚಿತ ಎಂದುಕೊಂಡು, ಗಂಡಸರ ಜೇಬಿಗೆ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸ್ವೇಚ್ಛಾಚಾರದ ಆಡಳಿತ: ಹೆಚ್‌ಡಿಕೆ

ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಮತ್ತೊಬ್ಬ ಕೇಂದ್ರ ಸಚಿವ ಹೆಚ್​ ​ಡಿ ಕುಮಾರಸ್ವಾಮಿ, ಬೆಲೆ ಏರಿಕೆಗೆ ಸಿದ್ಧರಾಗಿ ಎಂಬ ಬಗ್ಗೆ ಸರ್ಕಾರ ಈಗಾಗಲೇ ಸೂಚನೆ ಕೊಟ್ಟಿದೆ. ಹಲವಾರು ಬಾರಿ ಬೆಲೆ ಏರಿಕೆ ಮಾಡಿದೆ. ಜನರು ಕೂಡ ಅಷ್ಟೇ, ಒಂದೆರಡು ದಿನ ವಿರೋಧ ವ್ಯಕ್ತಪಡಿಸಿ ಮರೆತುಬಿಡುತ್ತಾರೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಇದೆ ಎಂಬುದೇ ಅನಿಸುತ್ತಿಲ್ಲ. ಸ್ವೇಚ್ಛಾಚಾರವಾಗಿ ಆಡಳಿತ ನಡೆಯುತ್ತಿದೆ. ಹೇಳೋರು ಕೇಳೋರು ಯಾರು ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮೊದಲೇ ಬಂಡವಾಳಿಗರ ಚೌಕಿದಾರರು,, ಪ್ರಾರಂಭದಿಂದಲೂ ಜನಸಾಮಾನ್ಯರಿಗೆ ಗ್ಯಾರಂಟಿ ರೂಪದಲ್ಲಿ ನೀಡಿದ ಕೆಲವು ಸವಲತ್ತುಗಳನ್ನು ಅಪರೋಕ್ಷವಾಗಿ ವಿರೋಧಿಸಿಕೊಂಡು ಬಂದವರು,, ಆದರೆ ಬಂಡವಾಳಿಗರ ಲಕ್ಷಾಂತರ ಕೋಟಿ ಸಾಲ ರೈಟ್ ಆಫ್ ಮಾಡಿ ಸಾವಿರಾರು ಕೋಟಿ ತೆರಿಗೆ ವಿನಾಯಿತಿ ನೀಡಿದಾಗ ಇವರ ಕರುಳು ಕಿತ್ತು ಬರಲಿಲ್ಲ,, ತಮ್ಮದೇ ಹಿಂದಿನ ಸರ್ಕಾರದ ಅವಧಿಯಲ್ಲಿ ಜನಸಾಮಾನ್ಯರಿಗೆ ಯಾವುದೇ ಗ್ಯಾರಂಟಿ ಸವಲತ್ತುಗಳನ್ನು ನೀಡದೇ ಸಾರಿಗೆ ಸಂಸ್ಥೆ ಐದಾರು ಸಾವಿರ ಕೋಟಿ ಸಾಲ ಮಾಡಿತ್ತಂತೆ,, ಅಷ್ಟೊಂದು ಹಣ ಜನರಿಗೂ ಮುಟ್ಟದೆ ಯಾರ ಹೊಟ್ಟೆ ಸೇರಿತು ಉತ್ತರ ಕೊಡುವರಾ ಮಂತ್ರಿಗಳು,, ರಾಜ್ಯಕ್ಕೆ ಕಾನೂನುಬದ್ಧವಾಗಿ ಬರಬೇಕಾದ ತೆರಿಗೆ ಪಾಲು ತರುವ ಬದ್ಧತೆ ಇಲ್ಲದೆ ಮುಖ ಉಳಿಸಿಕೊಳ್ಳುವ ನಾಟಕ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X