ಪ್ರಜ್ವಲ್‌ ಪ್ರಕರಣ | ಜೆಡಿಎಸ್‌ ನಿಲುವು ಸಂತ್ರಸ್ತೆಯರ ಪರವಾಗಿ ಇರಲಿದೆ: ಜಿ ಟಿ ದೇವೇಗೌಡ

Date:

Advertisements

ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಕುಮಾರಸ್ವಾಮಿ ಮೊದಲೇ ಹೇಳಿದ್ದಾರೆ. ನಮ್ಮ ಪಕ್ಷ ನೂರಕ್ಕೆ ನೂರು ಸಂತ್ರಸ್ತೆಯರ ಪರವಾಗಿ ಇರಲಿದೆ. ಅವರನ್ನ ಪಕ್ಷದಿಂದ ಹೊರ ಹಾಕಿದ ಮೇಲೆ ಪ್ರಜ್ವಲ್‌ಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ತಿಳಿಸಿದರು.

ಹಾಸನ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಿ ಎಂದು ಹೇಳಿದ್ದೇವೆ. ತನಿಖೆಯಿಂದ ಸಂಪೂರ್ಣ ಸತ್ಯ ಹೊರ ಬರಲಿ. ಎಸ್‌ಐಟಿ ತನಿಖೆಯಿಂದ ಸತ್ಯ ಹೊರ ಬರುವವರೆಗೂ ನಾವೇನೂ ಹೇಳಲು ಆಗಲ್ಲ” ಎಂದರು.

“ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ನಾವು ಸೇರಿ ಎಲ್ಲರೂ ಒತ್ತಾಯಿಸಿದ್ದೆವು. ಈಗ ಬಂಧನ ಆಗಿದೆ. ಅಲ್ಲಿಗೆ ನಮ್ಮ ಕೆಲಸ ಮುಗಿಯಿತು. ಪ್ರಜ್ವಲ್‌ ರೇವಣ್ಣ ಜೊತೆಗೆ ಪೆನ್‌ಡ್ರೈವ್ ಹಂಚಿದವರ ಬಂಧನವೂ ಆಗಬೇಕು” ಎಂದು ಒತ್ತಾಯಿಸಿದರು.

Advertisements

“ನಮ್ಮ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಅಮಾನತು ಮಾಡಿದ್ದು, ಅವರ ಬಂಧನದಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ನಮಗೆ ಯಾವುದೇ ಮುಜುಗರ ಇಲ್ಲ. ಎಸ್‌ಐಟಿ ತನಿಖೆಯನ್ನು ನಾವು ಸ್ವಾಗತಿಸಿದ್ದೇವೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

Download Eedina App Android / iOS

X